ಸಾಂದರ್ಭಿಕ ಚಿತ್ರ 
ರಾಜ್ಯ

ಐಟಿ ದಾಳಿ ವೇಳೆ ಅಘೋಷಿತ ಆಸ್ತಿ ಪತ್ತೆ: ಕಾಫೀ ಡೇ ಮಾಲೀಕ ವಿಜೆ ಸಿದ್ಧಾರ್ಥ್ ವಿಚಾರಣೆ ಸಾಧ್ಯತೆ

ಘೋಷಿಸಿಕೊಂಡಿರುವ ಆದಾಯಕ್ಕಿಂತಲೂ ಹೆಚ್ಚುವರಿಯಾಗಿ ರೂ.650 ಕೋಟಿ ಆದಾಯ ಪತ್ತೆಯಾಗಿರುವ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ಹಾಗೂ ಕಾಫಿ ಡೇ ಕಂಪನಿಯ ಮಾಲೀಕರಾದ ವಿ.ಜೆ ಸಿದ್ಧಾರ್ಥ್ ಅವರನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿಚಾರಣೆಗೊಳಪಡಿಸುವ ಸಾಧ್ಯತೆಗಳಿವೆ...

ಬೆಂಗಳೂರು: ಘೋಷಿಸಿಕೊಂಡಿರುವ ಆದಾಯಕ್ಕಿಂತಲೂ ಹೆಚ್ಚುವರಿಯಾಗಿ ರೂ.650 ಕೋಟಿ ಆದಾಯ ಪತ್ತೆಯಾಗಿರುವ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ಹಾಗೂ ಕಾಫಿ ಡೇ ಕಂಪನಿಯ ಮಾಲೀಕರಾದ ವಿ.ಜೆ ಸಿದ್ಧಾರ್ಥ್ ಅವರನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿಚಾರಣೆಗೊಳಪಡಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 
ಸೆ.21 ರಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಿದ್ಧಾರ್ಥ್ ಅವರ ವಿವಿಧ ಕಚೇರಿಗಳು ಹಾಗೂ ನಿವಾಸಗಳ ಮೇಲೆ ಮೂರು ದಿನಗಳ ಕಾಲ ದಾಳಿ ನಡೆಸಿತ್ತು. ಈ ವೇಳೆ ಸಿದ್ಧಾರ್ಥ್ ಅವರು ಘೋಷಿಸಿಕೊಂಡಿರುವ ಆದಾಯಕ್ಕಿಂತ ಹೆಚ್ಚುವರಿಯಾಗಿ ರೂ.650 ಕೋಟಿ ಆಸ್ತಿ ಪತ್ತೆಯಾಗಿತ್ತು. 
ಅಘೋಷಿತ ಆಸ್ತಿ ಪತ್ತೆಯಾಗಿರುವ ಹಿನ್ನಲೆಯಲ್ಲಿ 2 ದಿನಗಳೊಳಗಾಗಿ ವಿಚಾರಣೆಗೆ ಹಾಜರಾಗುವಂತೆ ಐಟಿ ಇಲಾಖೆ ಸಿದ್ಧಾರ್ಥ್ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ಆದಾಯ ತೆರಿಗೆ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ. 
ತೆರಿಗೆಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಸಿದ್ಧಾರ್ಥ್ ಅವರು ಮತ್ತಷ್ಟು ಆದಾಯ ದಾಖಲೆಗಳನ್ನು ಬಚ್ಚಿಟ್ಟಿರಬಹುದು ಎಂಬ ಅನುಮಾನಗಳು ವ್ಯಕ್ತವಾಗಿದ್ದು, ಈ ಹಿನ್ನಲೆಯಲ್ಲಿ ದಾಳಿ ವೇಳೆ ವಶಕ್ಕೆ ಪಡೆಯಲಾಗಿರುವ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. 
ದಾಳಿ ಬಳಿಕ ಭಾನುವಾರ ಹೇಳಿಕೆಯನ್ನು ಬಿಡುಗೆಡ ಮಾಡಿದ್ದ ಆದಾಯ ತೆರಿಗೆ ಇಲಾಖೆ, ಸಿದ್ಧಾರ್ಥ್ ಅವರ ಕಚೇರಿ ಹಾಗೂ ನಿವಾಸಗಳ ಮೇಲೆ ನಡೆಸಲಾದ ದಾಳಿಯಲ್ಲಿ ಸಾಕಷ್ಟು ದಾಖಲೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ತೆರಿಗೆಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಸಿದ್ಧಾರ್ಥ್ ಅವರು ಐಟಿ ಕಾನೂನು ಗಳನ್ನು ಉಲ್ಲಂಘನೆ ಮಾಡಿದ್ದಾರೆಂದು ಹೇಳಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT