ಮುಂದಿನ ಅಧಿವೇಶನದಲ್ಲಿ ಮೌಢ್ಯ ನಿಷೇಧ ಕಾಯ್ದೆ 
ರಾಜ್ಯ

ಮುಂದಿನ ಅಧಿವೇಶನದಲ್ಲಿ ಮೌಢ್ಯ ನಿಷೇಧ ಕಾಯ್ದೆ: ಮಡೆ ಸ್ನಾನಕ್ಕೆ ನಿಷೇಧ

ರಾಜ್ಯ ಸರ್ಕಾರ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮೌಢ್ಯ ನಿಷೇಧ ಕಾಯ್ದೆ ಜಾರಿಗೆ ತರಲು ನಿರ್ದೇಶಿಸಿದ್ದು, ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಚರಣೆಯಲ್ಲಿರುವ ಮಡೆ ಸ್ನಾನ ನಿಷೇಧವಾಗುವ...

ಬೆಂಗಳೂರು: ರಾಜ್ಯ ಸರ್ಕಾರ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮೌಢ್ಯ ನಿಷೇಧ ಕಾಯ್ದೆ ಜಾರಿಗೆ ತರಲು ನಿರ್ದೇಶಿಸಿದ್ದು, ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಚರಣೆಯಲ್ಲಿರುವ ಮಡೆ ಸ್ನಾನ ನಿಷೇಧವಾಗುವ ಸಾಧ್ಯತೆಗಳಿವೆ. 
ಮೌಢ್ಯ ನಿಷೇಧ ಕಾಯ್ದೆ ಜಾರಿಯ ಬಗ್ಗೆ ಈಗಾಗಲೇ ಹಲವು ಬಾರಿ ಚರ್ಚೆ ನಡೆದಿದ್ದು, ಮೌಢ್ಯ ನಿಷೇಧ ಕಾಯ್ದೆ-2016 ರನ್ನು ಜಾರಿಗೆ ತರಲು ಸರ್ಕಾರ ಎಲ್ಲಾ ರೀತಿಯ ಸಿದ್ಧತೆ ನಡೆಸಿದೆ. ಮಹಾರಾಷ್ಟ್ರದಲ್ಲಿ ಜಾರಿಗೆ ತರಲಾಗಿರುವ ಮೌಢ್ಯ ನಿಷೇಧದ ಮಾದರಿಯಲ್ಲಿಯೇ ರಾಜ್ಯದಲ್ಲಿಯೂ ಮೌಢ್ಯ ನಿಷೇಧ ಕಾಯ್ದೆಯನ್ನು ಸಿದ್ಧಪಡಿಸಲಾಗಿದ್ದು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿಬಿ ಜಯಚಂದ್ರ ನೇತೃತ್ವದ ಸ್ಕ್ರೀನಿಂಗ್ ಸಮಿತಿ ಮಸೂದೆಯ ಕರಡು ಪ್ರತಿಗೆ ಅನುಮೋದನೆ ನೀಡಿದೆ. 
ಈ ಹಿಂದಿನ ಮೌಢ್ಯ ನಿಷೇಧ ಕಾಯ್ದೆಯ ಹಲವು ಅಂಶಗಳಿಗೆ ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿಯೆ ವಿರೋಧ ವ್ಯಕ್ತವಾಗಿದ್ದರ ಕಾರಣ ಸ್ಕ್ರೀನಿಂಗ್ ಕಮಿಟಿಗೆ ಪರಿಶೀಲನೆಗೆ ಕಳಿಸಲಾಗಿತ್ತು. ನರಬಲಿ, ಮಡೆ ಸ್ನಾನ ಸೇರಿದಂತೆ ಅತ್ಯಂತ ಘೋರ ಆಚರಣೆಗಳಿಗೆ ಕಡಿವಾಣ ಹಾಕಲು ಮೌಢ್ಯ ನಿಷೆಧ ಕಾಯ್ದೆಯನ್ನು ರೂಪಿಸಲಾಗಿದೆ. 
ತಿದ್ದುಪಡಿ ಮಸೂದೆ, ಜ್ಯೋತಿಷ್ಯ, ವಾಸ್ತು ಸೇರಿದಂತೆ ಜನತೆಯ ಧಾರ್ಮಿಕ ನಂಬಿಕೆಗಳಿಗೆ ಅಡ್ಡಿಮಾಡುವುದಿಲ್ಲ, ಸರ್ಕಾರ ಜನತೆಯ ನಂಬಿಕೆಯ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸಚಿವ ಜಯಚಂದ್ರ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT