ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರಿ ಮಳೆ 
ರಾಜ್ಯ

ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರಿ ಮಳೆ, ಕೆಆರ್ ಪುರಂನಲ್ಲಿ ವಿದ್ಯುತ್ ತಗುಲಿ ಓರ್ವ ಮಹಿಳೆ ಬಲಿ

ನಿನ್ನೆ ತಡರಾತ್ರಿಯಿಂದ ಇಂದು ಬೆಳಗಿನವರೆಗೆ ಸುರಿದ ಮಳೆಗೆ ಸಿಲಿಕಾನ್‌ ಸಿಟಿ ಬೆಂಗಳೂರು ತತ್ತರಿಸಿದೆ.

ಬೆಂಗಳೂರು: ನಿನ್ನೆ ತಡರಾತ್ರಿಯಿಂದ ಇಂದು ಬೆಳಗಿನವರೆಗೆ ಸುರಿದ ಮಳೆಗೆ ಸಿಲಿಕಾನ್‌ ಸಿಟಿ ಬೆಂಗಳೂರು ತತ್ತರಿಸಿದೆ. ನಗರದ ತಗ್ಗು ಪ್ರದೇಶಗಳು ಜಲಾವೃತವಾಗಿರ ಜನ ಜೀವನ ಅಸ್ತವ್ಯಸ್ಥವಾಗಿದೆ. ಕೆ.ಆರ್‌.ಪುರಂನ ಆರ್‌ಎಂಎಸ್‌ ಬಡಾವಣೆಯಲ್ಲಿ ಮನೆಗೆ ನೀರು ನುಗ್ಗಿದ ಕಾರಣ ವಿದ್ಯುತ್‌ ಆಘಾತದಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. 
ಆರ್‌ಎಂಎಸ್‌ ಬಡಾವಣೆಯಲ್ಲಿ ವಾಸವಾಗಿದ್ದ ಮೀನಮ್ಮ ಎನ್ನುವವರ ಮನೆಗೆ ನೀರು ನುಗ್ಗಿದಾಗ ಆಕೆ ಯುಪಿಎಸ್ ನ್ನು ಆರಿಸಲು ಹೋಗಿದ್ದರು. ಆಗ ವಿದ್ಯುತ್ ತಗುಲಿದ ಪರಿನಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹೊಸಕೆರೆಹಳ್ಳಿ, ಬನಶಂಕರಿಯ ಸೋಮಪುರ, ಕೆ ಆರ್ ಪುರಂನ ದೇವಸಂದ್ರ ಮತ್ತು ಬಿನ್ನಮಂಗಲ ಸೇರಿದಂತೆ ಹಲವು ಕಡೆಗಳಲ್ಲಿ ಕೆರೆಗಳು ಕೋಡಿ ಹರಿದುಹೋಗಿವೆ. ಕೆ ಆರ್ ಪುರಂನಲ್ಲಿರುವ ಶೀಗೆಹಳ್ಳಿ ಕೆರೆಯೂ ಸಹ ಉಕ್ಕಿ ಹರಿದಿದೆ.
ನಗರದ ಚಂದ್ರ ಲೇಔಟ್, ಬಿಟಿಎಂ ಲೇಔಟ್, ಆರ್ ಪಿಸಿ ಲೇಔಟ್, ಆರ್.ಆರ್ ನಗರ, ಮಾರುತಿ ಲೇಔಟ್ ಮತ್ತು ಇತರ ಸ್ಥಳಗಳಲ್ಲಿ ಕಂಪೌಂಡ್ ಗೋಡೆಗಳು ಕುಸಿದು ಬಿದ್ದಿವೆ.
ಬೆಂಗಳೂರು ದಕ್ಷಿಣದ ಹಮ್ಮಿಗೆಪುರದಲ್ಲಿ ಗರಿಷ್ಠ ಮಳೆ (139 ಮಿ.ಮೀ) ಬಿದ್ದ ವರದಿಯಾಗಿದೆ. ಕೆಂಗೇರಿ, ಬಾಗಲಕುಂಟೆ ಮತ್ತು ಕೆ ಆರ್ ಪುರಂನ ಭಾಗಗಳು ಸೇರಿದಂತೆ ಇತರೆ ಬಾಗಗಳಲ್ಲಿ ಸಹ ಭಾರಿ ಮಳೆ (124.5 ಮಿಮೀ) ಬಿದ್ದ ವರದಿಯಾಗಿದೆ.
ಗೋಡೆ ಕುಸಿತದಿಂದ ಸಾವು
ಬೆಂಗಳೂರು ಉತ್ತರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಅವಶೇಷಗಳಡಿ  ಸಿಲುಕಿ ನಾರಾಯಣಪ್ಪ ಎನ್ನುವವರು ಮೃತಪಟ್ಟಿದ್ದಾರೆ. ಮಾದನಾಯಕನ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 
ಮೈಸೂರು ಸೇರಿ ಇತರೆಡೆಯೂ ಮಳೆ
ನಿನ್ನೆ ರಾತ್ರಿ ಕೇವಲ ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರೆ ಭಾಗಗಳಾದ ಮೈಸೂರು, ಕೊಪ್ಪಳ, ಕೊಳ್ಳೇಗಾಲಗಳಲ್ಲಿಯೂ ಭಾರೀ ಪ್ರಮಾಣದ ಮಳೆ ಆಗಿದೆ. ಮೈಸೂರಿನ ಶ್ರೀರಾಂಪುರ ಬಡಾವಣೆ ಸಂಪೂರ್ಣ ಜಲಾವೃತವಾಗಿದ್ದು ಕಷ್ಟಕ್ಕೆ ಸಿಲುಕಿದ್ದ ಜನರನ್ನು ಅಗ್ನಿ ಶಾಮಕ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT