ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಉಚಿತ ರೇಷನ್‌ ಕೂಪನ್‌ ಗಾಗಿ ನೂಕು ನೂಗ್ಗಲು; ಇಬ್ಬರು ಸಾವು

ರಂಜಾನ್‌ ಹಬ್ಬಕ್ಕೆ ಉಚಿತ ರೇಷನ್ ಕೂಪನ್ ಪಡೆಯುವ ವೇಳೆ ನೂಕೂ ನೂಗ್ಗಲು ಉಂಟಾಗಿ ಇಬ್ಬರು ಸಾವನ್ನಪ್ಪಿರುವ.....

ಬೆಂಗಳೂರು: ರಂಜಾನ್‌ ಹಬ್ಬಕ್ಕೆ ಉಚಿತ ರೇಷನ್ ಕೂಪನ್ ಪಡೆಯುವ ವೇಳೆ ನೂಕೂ ನೂಗ್ಗಲು ಉಂಟಾಗಿ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಯಲಹಂಕ ಸಮೀಪದ ಮಿಟ್ಟಗಾನಹಳ್ಳಿಯಲ್ಲಿ ಗುರುವಾರ ನಡೆದಿದೆ.
ಮೃತಪಟ್ಟ ವ್ಯಕ್ತಿಗಳನ್ನು ರೆಹಮತ್ ಉನ್ನೀಸಾ (65) ಮತ್ತು ಅನ್ವರ್ ಪಾಷಾ(75) ಎಂದು ಗುರುತಿಸಲಾಗಿದೆ. 
ಶಿವಾಜಿನಗರ ನಿವಾಸಿ ಯೂಸಫ್ ಎಂಬಾತ ಮುಸ್ಲಿಂ ಬಾಂಧವರಿಗೆ ಮುಂದಿನ ರಂಜಾನ್‌ ಹಬ್ಬಕ್ಕೆ ಅಂತ ಉಚಿತ ಕೂಪನ್ ವಿತರಿಸಲು ವಾಟ್ಸಪ್ ಮುಖಾಂತರ ಎಲ್ಲರಿಗೂ ಸಂದೇಶ ನೀಡಿದ್ದ. ಯೂಸಫ್ ಅವರು ಪ್ರತಿ ವರ್ಷ ರಂಜಾನ್ ತಿಂಗಳ ಮುನ್ನ ಬಡವರಿಗೆ ರೇಷನ್ ದಾನ ಮಾಡುತ್ತಾರೆ.
ಪ್ರತಿ ವರ್ಷದಂತೆ ಈ ವರ್ಷವೂ ರೇಷನ್ ಗಾಗಿ ಉಚಿತ ಕೂಪನ್ ಪಡೆಯಲು ತಮ್ಮ ಚೌಟ್ರಿಗೆ ಬರುವಂತೆ ಜನರಿಗೆ ತಿಳಿಸಿದ್ದರು. ಇದ್ರಿಂದಾಗಿ ಯಲಹಂಕ ಬಳಿಯ ಮಿಟಗಾನಹಳ್ಳಿಗೆ ಕಳೆದ ರಾತ್ರಿಯೇ ಬೆಂಗಳೂರು, ತೂಮಕೂರು, ಚಿಕ್ಕಬಳ್ಳಾಪುರ ನೆರೆಯ ಆಂಧ್ರ ಹಾಗೂ ಕೇರಳದಿಂದ ಮುಸ್ಲಿಂ ಬಾಂಧವರು ಸುಮಾರು 5 ಸಾವಿರಕ್ಕೂ ಹೆಚ್ಚು ಜನ ಆಗಮಿಸಿದ್ದರು. ಇಂದು ಬೆಳಗ್ಗೆ ನಾಲ್ಕು ಗಂಟೆಗೆ ಕೂಪನ್ ವಿತರಿಸಲು ಪ್ರಾರಂಭ ಮಾಡಲಾಗಿದ್ದು, ಸರತಿ ಸಾಲಿನಲ್ಲಿ ನಿಂತಿದ್ದ ಜನರಿಂದ ನೂಕುನೂಗ್ಗಲು ಉಂಟಾಗಿದೆ. 
ಈ ವೇಳೆ ರೆಹಮತ್ ಉನ್ನೀಸಾ ಹಾಗೂ ಅನ್ವರ್ ಪಾಷಾ ಎಂಬಾತರು ನೂಕೂನುಗ್ಗಲಿನಿಂದ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಬಾಗಲೂರು ಪೊಲೀಸರು ಭೇಟಿ ನೀಡಿ ಮೃತರ ಶವಗಳನ್ನು ಬೆಂಗಳೂರಿನ ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಿದ್ದಾರೆ. ಯೂಸಫ್ ಚೌಟ್ರಿಯ ಸಿಬ್ಬಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT