ಸಂಗ್ರಹ ಚಿತ್ರ 
ರಾಜ್ಯ

ದೇಶಾದ್ಯಂತ ಆಯುಧ ಪೂಜೆ ಸಂಭ್ರಮ: ಮೈಸೂರು ಅರಮನೆಯಲ್ಲಿ ಆಯುಧ ಪೂಜೆ, ವಿಜಯದಶಮಿ ಸಿದ್ಧತೆ

ದೇಶದ್ಯಂತ ಆಯುಧ ಪೂಜೆ ಸಂಭ್ರಮ ಮನೆಮಾಡಿದ್ದು, ದಸರಾ ಹಬ್ಬದ ಪ್ರಮುಖ ಕೇಂದ್ರ ಬಿಂದುವಾಗಿರುವ ಮೈಸೂರು ಅರಮನೆಯಲ್ಲಿ ಈಗಾಗಲೇ ಆಯುಧಗಳ ಸಾಂಪ್ರದಾಯಿಕ ಮೆರವಣಿಗೆಗಳನ್ನು ಮಾಡಲಾಗುತ್ತಿದೆ...

ಬೆಂಗಳೂರು: ದೇಶದ್ಯಂತ ಆಯುಧ ಪೂಜೆ ಸಂಭ್ರಮ ಮನೆಮಾಡಿದ್ದು, ದಸರಾ ಹಬ್ಬದ ಪ್ರಮುಖ ಕೇಂದ್ರ ಬಿಂದುವಾಗಿರುವ ಮೈಸೂರು ಅರಮನೆಯಲ್ಲಿ ಈಗಾಗಲೇ ಆಯುಧಗಳ ಸಾಂಪ್ರದಾಯಿಕ ಮೆರವಣಿಗೆಗಳನ್ನು ಮಾಡಲಾಗುತ್ತಿದೆ. 

ರಾಜ್ಯದೆಲ್ಲೆಡೆ ಆಯುಧ ಪೂಜೆಗಳನ್ನು ನಡೆಯುತ್ತಿದ್ದು, ಆಯುಧಗಳನ್ನು ಸಿಂಗರಿಸಿ ಭಕ್ತಿಯಿಂದ ಪೂಜೆಯನ್ನು ನೆರವೇರಿಸಲಾಗುತ್ತದೆ. 

ದಸರಾ ಆಚರಣೆಯ ಕೇಂದ್ರ ಬಿಂದುವಾದ ಮೈಸೂರಿನ ಅರಮನೆಯಲ್ಲಿ ಆಯುಧ ಪೂಜೆ ನಡೆಯುತ್ತಿದ್ದು, ಮೊದಲಿಗೆ ಆರಮನೆ ಆವರಣದಲ್ಲಿರುವ ಕೋಡಿ ಸೋಮೇಶ್ವರ ದೇವಸ್ಥಾನಕ್ಕೆ ಪಟ್ಟದ ಆನೆ, ಪಟ್ಟದ ಹಸು, ಪಟ್ಟದ ಕುದುರೆಯೊಂದಿಗೆ ಹೋಗಿ ಪಟ್ಟದ ಕತ್ತಿ ಹಾಗೂ ಇನ್ನಿತರೆ ಕೆಲವು ಆಯುಧಗಳನ್ನು ತೊಳೆದು ವಿಶೇಷವಾಗಿ ಪೂಜಿಸಲಾಗುತ್ತದೆ. ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜೆ ನೆರವೇರಿಸಲಿದ್ದಾರೆ. 

ಸಂಜೆ 7 ಗಂಟೆಗೆ ಈ ಸಲದ ಅಂತಿಮ ಖಾಸಗಿ ದರ್ಬಾರ್ ನಡೆಯಲಿದ್ದು, ಚಾಮುಂಡಿ ಬೆಟ್ಟದಲ್ಲಿ ಚಂಡಿಕಾಹೋಮ ನಡೆಯಲಿದೆ. 

ಶನಿವಾರ ಬೆಳಿಗ್ಗೆ 11 ಗಂಟೆಗೆ ಏರ್ ಶೋ ಆರಂಭವಾಗಲಿದ್ದ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 2.15ರ ಶುಭ ಮಕರ ಲಗ್ನದಲ್ಲಿ ಸಿದ್ದರಾಮಯ್ಯ ಅವರು ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ಹೊರಡಲಿದೆ. 

ಮಧ್ಯಾಹ್ನ 4.45ರ ಶುಭ ಕುಂಭ ಲಗ್ನದಲ್ಲಿ ಸಿದ್ದರಾಮಯ್ಯ, ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಇತರೆ ಗಣ್ಯರು ದಸರಾ ಗಜಪಡೆ ಸಾರಧಿ ಅರ್ಜುನ ಹೊತ್ತು ತರುವ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿನ ಚಾಮುಂಡೇಶ್ವರಿ ಮೂರ್ತಿಗೆ ಪೂಷ್ಪಾರ್ಚನೆ ಮಾಡುಪ ಮೂಲಕ ವಿಜಯದಶಮಿ ಮೆರವಣಿಗೆ ಚಾಲನೆ ನೀಡಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್