ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರ ಗೌಡ ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಲಿದ್ದಾರೆ. ಆದರೆ ಪಕ್ಷದ ಚಟುವಟಿಕೆಗಳಲ್ಲಿ ಅವರು ಮುಂದೆ ಕೂಡ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿ 5ನೇ ಬಾರಿಗೆ ಸೇವೆಯಲ್ಲಿರುವ ಅವರು ಈಗಾಗಲೇ ತಮ್ಮ ನಿರ್ಧಾರವನ್ನು ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ತಿಳಿಸಿದ್ದಾರೆ.
ಬೆಂಗಳೂರು ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್ ಸದಸ್ಯರಾಗಿರುವ ರಾಮಚಂದ್ರ ಗೌಡ ಮುಂದಿನ ವರ್ಷ ಜೂನ್ ನಲ್ಲಿ ಅವರ ಅಧಿಕಾರಾವಧಿ ಮುಗಿಯಲಿದೆ. ಆ ಬಳಿಕ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿಯಲ್ಲಿ ಮೋದಿ-ಶಾ ಆಡಳಿತದಲ್ಲಿ ಹೊಸಬರಿಗೆ ಆದ್ಯತೆ ನೀಡಿ ಹಳೆಯ ನಾಯಕರನ್ನು ಮೂಲೆಗುಂಪು ಮಾಡುತ್ತಿರುವ ಈ ಸಂದರ್ಭದಲ್ಲಿ ರಾಮಚಂದ್ರ ಗೌಡ ಅವರು ಗೌರವಯುತವಾಗಿ ತಾವಾಗಿಯೇ ಚುನಾವಣಾ ರಾಜಕೀಯದಿಂದ ದೂರ ಸರಿಯುತ್ತಿದ್ದಾರೆ.
ಸತತ 5 ಬಾರಿ ನಾನು ವಿಧಾನ ಪರಿಷತ್ ಸದಸ್ಯನಾಗಿದ್ದೇನೆ. ಹೀಗಾಗಿ ಹೊಸಬರಿಗೆ ಅವಕಾಶ ಮಾಡಿಕೊಡಲು ಈ ನಿರ್ಧಾರ ಕೈಗೊಂಡಿದ್ದೇನೆ, ಮುಂದಿನ ಚುನಾವಣೆಯಲ್ಲಿ ನನ್ನ ಪದವೀಧರ ಕ್ಷೇತ್ರಕ್ಕೆ ಯುವ ಸಕ್ರಿಯ ನಾಯಕನನ್ನು ನಾಮಾಂಕಿತ ಮಾಡಬೇಕೆಂದು ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದೇನೆ ಎಂದು ರಾಮಚಂದ್ರ ಗೌಡ ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos