ಇಂದಿರಾ ಕ್ಯಾಂಟೀನ್ 
ರಾಜ್ಯ

ಉದ್ಯಾನದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ, ಸಾಮಾಜಿಕ ಕಾರ್ಯಕರ್ತರಿಂದ ಪಿಐಎಲ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ರಾಜ್ಯ ಸರ್ಕಾರದ ಮಹತ್ವದ ಯೋಜನೆ ಇಂದಿರಾ ಕ್ಯಾಂಟೀನ್ ನ್ನು ತೆರೆದ ಸ್ಥಳಗಳು, ಉದ್ಯಾನಗಳು.......

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ರಾಜ್ಯ ಸರ್ಕಾರದ ಮಹತ್ವದ ಯೋಜನೆ ಇಂದಿರಾ ಕ್ಯಾಂಟೀನ್ ನ್ನು ತೆರೆದ ಸ್ಥಳಗಳು, ಉದ್ಯಾನಗಳು, ಆಟದ ಮೈದಾನಗಳಲ್ಲಿ ನಿರ್ಮಿಸುವಂತಿಲ್ಲ ಎಂದು ಆ.3 ರಂದು ಕರ್ನಾಟಕ ಹೈ ಕೋರ್ಟ್ ಸೂಚನೆ ನಿಡಿತ್ತು.
ಇದೀಗ ಆ ಸೂಚನೆ ಹೊರತಾಗಿಯೂ ನಗರದ ಮತ್ತಿಕೆರೆ, ಮುತ್ಯಾಲನಗರ(ವಾರ್ಡ್ ನಂ.17) ರಲ್ಲಿರುವ ಜಯಪ್ರಕಾಶ್ ನಾರಾಯಣ್ ಉದ್ಯಾನದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸುತ್ತಿದ್ದಾರೆ ಎಂದು  ಸಾಮಾಜಿಕ ಕಾರ್ಯಕರ್ತ ಒಬ್ಬರು ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಗೋರೆಗೊಂದನಹಳ್ಳಿ ನಿವಾಸಿ ರವಿಕುಮಾರ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಮತ್ತಿಕೆರೆಯಲ್ಲಿನ ಈ ಉದ್ಯಾನವನವು 85 ಎಕರೆ ಪ್ರದೇಶದಲ್ಲಿ ವ್ಯಾಪಿಸಿದೆ, 250 ವಿವಿಧ ಮರಗಳನ್ನು, ಪೊದೆಗಳನ್ನು ಹೊಂದಿದೆ ಎಂದು ಅವರು ಅರ್ಜಿಯಲ್ಲಿ ವಾದಿಸಿದರು.
ಗುರುವಾರ ನ್ಯಾಯಮೂರ್ತಿ ಬಿ.ವಿ ನಾಗರತ್ನಮತ್ತು ನ್ಯಾಯಮೂರ್ತಿ ಡಾ.ಪ್ರಭಾಕರ ವಿಚಾರಣಾ ಪೀಠದ ಮುಂದೆ ಈ ಅರ್ಜಿ ವಿಚಾರಣೆಗೆ ಬಂದಿತ್ತು. ಅರ್ಜಿದಾರರ ಸಲಹೆಗಾರ ಅವಿನಾಶ್ ಎಂ ಅಂಗಡಿ ಕ್ಯಾಂಟೀನ್ ನಿರ್ಮಾಣವು ಕರ್ನಾಟಕ ಪಾರ್ಕ್, ಪ್ಲೇ-ಫೀಲ್ಡ್ ಮತ್ತು ತೆರೆದ ಜಾಗಗಳ (ಸಂರಕ್ಷಣೆ ಮತ್ತು ನಿಯಂತ್ರಣ) ಕಾಯ್ದೆ 1985ರ 8 ನೇ ಪರಿಚ್ಚೇದವನ್ನು ಉಲ್ಲಂಘನೆ ಆಗುವುದೆಂದು ವಾದಿಸಿದ್ದಾರೆ.
ಅರ್ಜಿದಾರರು ಸೆ.21 ರಂದು ಬಿಬಿಎಂಪಿಗೆ ಈ ಕುರಿತ ವಿವರವಾದ ವರದಿಯನ್ನು ಸಲ್ಲಿಸಿದ್ದಾರೆ ಎಂದು ಅವರು ಹೇಳಿದರು. ಕ್ಯಾಂಟಿನ್ ಗಾಗಿ ಬೇರೆ ಸ್ಥಳವನ್ನು ಆಯ್ಕೆ ಮಾಡಲು ಅರ್ಜಿದಾರರು ವಿನಂತಿಸಿದರೂ  ಅಧಿಕಾರಿಗಳು ಇದನ್ನು ನಿರ್ಲಕ್ಷಿಸಿದರು. 
ಬಿಬಿಎಂಪಿ ಅಧಿಕಾರಿಗಳು ಅ.2ರಂದು ಕ್ಯಾಂಟೀನ್ ಪ್ರಾರಂಭಿಸಲು ಮುಂದಾಗಿದ್ದಾರೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT