ಸಾಂದರ್ಭಿಕ ಚಿತ್ರ 
ರಾಜ್ಯ

ನಾಯಿಗೆ ವಿಷ ಹಾಕಿ ಕಳ್ಳತನ: ಭಯದಲ್ಲಿ ತಮ್ಮ ಮೊಬೈಲ್'ನ್ನು ಬಿಟ್ಟು ಹೋದ ಕಳ್ಳರು

ಮನೆಯ ಸಾಕು ನಾಯಿಗೆ ವಿಷವುಣಿಸಿ ಕಳ್ಳತನ ಮಾಡಿರುವ ದರೋಡೆಕೋರರು ಪರಾರಿಯಾಗುವ ವೇಳೆ ಭಯದಲ್ಲಿ ತಮ್ಮ ಅತ್ಯಮೂಲ್ಯವಾದ ಮೊಬೈಲ್'ನ್ನೇ ಮನೆಯಲ್ಲಿ ಬಿಟ್ಟು ಹೋಗಿರುವ ಘಟನೆ ನೆಲಮಂಗಲದಲ್ಲು ಶುಕ್ರವಾರ ನಡೆದಿದೆ...

ಬೆಂಗಳೂರು: ಮನೆಯ ಸಾಕು ನಾಯಿಗೆ ವಿಷವುಣಿಸಿ ಕಳ್ಳತನ ಮಾಡಿರುವ ದರೋಡೆಕೋರರು ಪರಾರಿಯಾಗುವ ವೇಳೆ ಭಯದಲ್ಲಿ ತಮ್ಮ ಅತ್ಯಮೂಲ್ಯವಾದ ಮೊಬೈಲ್'ನ್ನೇ ಮನೆಯಲ್ಲಿ ಬಿಟ್ಟು ಹೋಗಿರುವ ಘಟನೆ ನೆಲಮಂಗಲದಲ್ಲು ಶುಕ್ರವಾರ ನಡೆದಿದೆ. 
ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಶಾಂತಿನಗರದ ಸ್ಟೀಲ್ ಸಿಮೆಂಟ್ ಉದ್ಯಮಿಯಾಗಿರುವ ಶ್ರೀನಿವಾಸ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. 
ಮನೆಗೆ ಬಂದಿರುವ ಕಳ್ಳರು ಮೊದಲು ಶ್ರೀನಿವಾಸ್ ಅವರ ಮನೆಯಲ್ಲಿದ್ದ ಸಾಕು ನಾಯಿಗೆ ವಿಷ ಹಾಕಿದ್ದಾರೆ, ಬಳಿಕ ಮನೆ ನುಗ್ಗಿರುವ ಕಳ್ಳರು, ಮನೆಯಲ್ಲಿದ್ದ ರೂ.3 ಲಕ್ಷ ಮತ್ತು 400 ಗ್ರಾಂ ಚಿನ್ನಾಭರಣವನ್ನು ದೋಚಿದ್ದಾರೆ. ನಂತರ ಸ್ಥಳದಿಂದ ಪರಾರಿಯಾಗುವ ವೇಳೆ ಭಯದಲ್ಲಿ ಮೊಬೈಲ್ ವೊಂದನ್ನು ಸ್ಥಳದಲ್ಲಿಯೇ ಬಿಟ್ಟು ಹೋಗಿದ್ದಾರೆ. 
ಶ್ರೀನಿವಾಸ್ ಅವರ ಮನೆಗೆ ಬಂದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಬಳಿಕ ಪೊಲೀಸರಿಗೆ ಶ್ರೀನಿವಾಸ್ ಅವರು ಮಾಹಿತಿ ನೀಡಿದ್ದಾರೆ. ಪರಿಶೀಲನೆ ವೇಳೆ ಪೊಲೀಸರಿಗೆ ಕಳ್ಳರ ಮೊಬೈಲ್ ಫೋನ್ ವೊಂದು ದೊರಕಿದೆ. ಕಳ್ಳರ ಮೊಬೈಲ್ ನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇದೀಗ ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ರಾಸಾಯನಿಕ ಸೇವನೆಯಿಂದ ಅಸ್ವಸ್ಥಗೊಂಡಿದ್ದ ನಾಯಿ ಇದೀಗ ಚೇತರಿಸಿಕೊಂಡಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT