ರೇವು ನಾಯಕ್ ಬೆಳಮಗಿ 
ರಾಜ್ಯ

ರಸ್ತೆ ಅಪಘಾತದ ಮೂಲಕ ನನ್ನ ಕೊಲೆ ಯತ್ನ ನಡೆದಿತ್ತು, ಮಾಜಿ ಸಚಿವ ಬೆಳಮಗಿ ಆರೋಪ

ನಮ್ಮ ವಾಹನ ಚಾಲಕನ ಜೊತೆ ಹಲವರು ಸೇರಿ ರಸ್ತೆ ಅಪಘಾತದ ಮೂಲಕ ನನ್ನ ಕೊಲೆಗೆ ಸಂಚು ರೂಪಿಸಿದ್ದರು ಎಂದು ಮಾಜಿ ಸಚಿವ ರೇವು ನಾಯಕ ಬೆಳಮಗಿ ಇಂದು ಆರೋಪಿಸಿದ್ದಾರೆ.

ಕಲಬುರ್ಗಿ: ನಮ್ಮ ವಾಹನ ಚಾಲಕನ ಜೊತೆ ಹಲವರು ಸೇರಿ ರಸ್ತೆ ಅಪಘಾತದ ಮೂಲಕ ನನ್ನ ಕೊಲೆಗೆ ಸಂಚು ರೂಪಿಸಿದ್ದರು ಎಂದು ಮಾಜಿ ಸಚಿವ ರೇವು ನಾಯಕ ಬೆಳಮಗಿ ಇಂದು ಆರೋಪಿಸಿದ್ದಾರೆ.
ಕಲಬುರ್ಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಮಾತನಾಡಿಕೊಳ್ಳುತ್ತಿದ್ದಾರೆ. 
ಅಂದು ನಡೆದ ಅಪಘಾತದ ಬಗ್ಗೆ ಹಲವು ಅನುಮಾನಗಳಿವೆ, ಘಟನೆ ನಂತರ ಕಾರು ಚಾಲಕ ವಿನಯ್ ಪರಾರಿಯಾಗಿದ್ದಾನೆ. ಘಟನೆಯ ಬಗ್ಗೆ ಪಕ್ಷದ ಹೈಕಮಾಂಡ್‍ಗೆ ದೂರು ನೀಡುತ್ತೇನೆ. ಹೈಕಮಾಂಡ್ ಸೂಚನೆಯಂತೆ ಮುಂದಿನ ಕಾನೂನು ಹೋರಾಟ ನಡೆಸುತ್ತೇನೆ ಎಂದು ರೇವು ನಾಯಕ ಕಲಬುರ್ಗಿಯಲ್ಲಿ ಸುದ್ದಿಗಾರರಿಗೆ ಹೇಳಿದ್ದಾರೆ.
ಮೇ 20 ರಂದು ರೇವು ನಾಯಕ  ಅಳಂದದಿಂದ ಹಿಂತಿರುಗುತ್ತಿರುವಾಗ ಆಳಂದ ತಾಲ್ಲೂಕಿನ ಚಿಂಚನಸೂರ ಗ್ರಾಮದ ಬಳಿ ಅವರ ಇನೋವಾ ಕಾರು ಸೇತುವೆಗೆ ಡಿಕ್ಕಿಯಾಗಿ ಅಪಘಾತಕ್ಕೀಡಾಗಿತ್ತು. ಈ ಅಪಘಾತದಲ್ಲಿ ರೇವು ನಾಯಕ್ ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಅಪಘಾತ ನಡೆಸಿದ ಕಾರು ಚಾಲಕ ಪರಾರಿಯಾಗಿದ್ದ.
ಅಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಪೋಲೀಸರು  ಅಪಘಾತ ನಡೆದ ಸ್ಥಳ ದಲ್ಲಿ ಕಾರು ಅಪಘಾತವಾಗುವ ಯಾವುದೇ ಸಾಧ್ಯತೆಗಳಿಲ್ಲ ಎಂದು ಸಂಶಯ ವ್ಯಕ್ತಪಡಿಸಿದ್ದರು.
ರೇವು ನಾಯಕ ಅವರ ಹೇಳಿಕೆಯಿಂದ ಮೀಸಲು ಕ್ಷೇತ್ರದ ಟಿಕೇಟ್‌ಗಾಗಿ ಈ ಕೊಲೆ ಯತ್ನ ನಡೆದಿರಬಹುದು ಎನ್ನುವ ಸಂಶಯ ವ್ಯಕ್ತವಾಗಿದೆ. ಪ್ರಕರಣದ ತನಿಖೆಯನ್ನು ಪೋಲೀಸರು  ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾಡೆಲ್​ ತ್ವಿಷಾ ಶರ್ಮಾ ನಿಗೂಢ ಸಾವು ಪ್ರಕರಣ: CBI ತನಿಖೆಗೆ ಸುಪ್ರೀಂಕೋರ್ಟ್ ಅಸ್ತು, ಸಾಕ್ಷ್ಯ-ಹೇಳಿಕೆಗಳ ಪ್ರಕಟಿಸದಂತೆ ಮಾಧ್ಯಮಗಳಿಗೆ ಕಟ್ಟುನಿಟ್ಟಿನ ಸೂಚನೆ..!

ಮತ್ತೆ ಏರಿದ ಇಂಧನ ದರ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳ; 2 ವಾರಗಳಲ್ಲಿ ರೂ. 7.5 ಏರಿಕೆ, ತೈಲ ಕಂಪನಿಗಳಿಂದ ವಾಹನ ಸವಾರರಿಗೆ ಮತ್ತೆ ಶಾಕ್..!

ನಿತಿನ್ ನಬೀನ್ ಭೇಟಿ ಬಳಿಕ BJP ನಾಯಕತ್ವ ಚರ್ಚೆ ಮತ್ತೆ ಮುನ್ನೆಲೆಗೆ: ವಿಜಯೇಂದ್ರ ಭವಿಷ್ಯ ಕುರಿತು ಹೆಚ್ಚಿದ ಕುತೂಹಲ; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ತೀವ್ರ..!

ಬೆಂಗಳೂರು ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ಗಳೇ ಕಾರಣ? ‘Heat island’ ಪರಿಣಾಮ ಕುರಿತು ತಜ್ಞರ ಗಂಭೀರ ಎಚ್ಚರಿಕೆ..!

SIR ಹೆಸರಿನಲ್ಲಿ ಮತದಾರರ ಹೆಸರು ಡಿಲೀಟ್ ಆರೋಪ; war room ಸ್ಥಾಪಿಸಿದ ಕಾಂಗ್ರೆಸ್, ಎಚ್ಚರ ವಹಿಸುವಂತೆ 'ಕೈ' ನಾಯಕರಿಗೆ ಸಿದ್ದು-ಡಿಕೆಶಿ ಸೂಚನೆ

SCROLL FOR NEXT