ಬೆಳ್ಳಂದೂರು ಕೆರೆ 
ರಾಜ್ಯ

ಬಿಡಿಎಗೆ ಸವಾಲಾಗಿರುವ ಬೆಳ್ಳಂದೂರು ಕೆರೆಯ ಕಳೆಗಳು

ಬೆಳ್ಳಂದೂರು ಕೆರೆಯಿಂದ ತ್ಯಾಜ್ಯ ವಸ್ತುಗಳನ್ನು ತೆಗೆದ ನಂತರ ಅದನ್ನು ವಿಲೇವಾರಿ ಮಾಡುವುದು ...

ಬೆಂಗಳೂರು: ಬೆಳ್ಳಂದೂರು ಕೆರೆಯಿಂದ ತ್ಯಾಜ್ಯ ವಸ್ತುಗಳನ್ನು ತೆಗೆದ ನಂತರ ಅದನ್ನು ವಿಲೇವಾರಿ ಮಾಡುವುದು ಬಿಡಿಎಗೆ ತಲೆನೋವಾಗಿದೆ. ಮೂರು ವಾರಗಳ ಹಿಂದೆ ಕಳೆ ತೆಳೆಯುವ ಕಾರ್ಯ ಆರಂಭವಾಗಿದ್ದು ಅದನ್ನು ವಿಲೇವಾರಿ ಮಾಡುವುದು ಸವಾಲಾಗಿದೆ.

ಒಟ್ಟು 900 ಎಕರೆ ವಿಸ್ತಾರದ ಬೆಳ್ಳಂದೂರು ಕೆರೆಯಿಂದ ಕಳೆ ತೆಗೆದು ಸ್ವಚ್ಛಗೊಳಿಸಲು ರಾಷ್ಟ್ರೀಯ ಹಸಿರು ಪ್ರಾಧಿಕಾರ ಮೇ 31ರವರೆಗೆ ಕಾಲಾವಧಿ ನೀಡಿದೆ.

ಕಳೆಗಳನ್ನು ನೀರಿನಿಂದ ಹೊರತೆಗೆದಾಗ ಅದು ಒದ್ದೆಯಾಗಿರುತ್ತದೆ. ಹೀಗಾಗಿ ಬಿಸಿಲಿನಲ್ಲಿ ಸ್ವಲ್ಪ ದಿನಗಳನ್ನು ಒಣಗಿಸಿದಾಗ ಅದು ಕುಗ್ಗುತ್ತದೆ. ಹೀಗೆ ಒಣಗಲು ಕೆರೆಯ ಪಕ್ಕ ಹಾಕುವ ಕಳೆಗಳಿಂದ ಸುತ್ತಮುತ್ತ ಸೊಳ್ಳೆ ಮತ್ತು ವಾಸನೆ ಹೆಚ್ಚಾಗಿದೆ ಎಂದು ನಿವಾಸಿಗಳು ಆರೋಪಿಸುತ್ತಾರೆ.

ಕೆರೆಯ ಸಮೀಪದ ಅಪಾರ್ಟ್ ಮೆಂಟ್ ವೊಂದರ ನಿವಾಸಿ ಸೀಮಾ ಶರ್ಮ, ಕಳೆದ ಎರಡು ದಿನಗಳ ಹಿಂದೆ ಅಪಾರ್ಟ್ ಮೆಂಟ್ ನಿವಾಸಿಗಳು ರಾತ್ರಿ ದುರ್ನಾತದಿಂದ ಏಳಬೇಕಾಗಿ ಬಂತು. ಅದು ಕೆರೆಯ ಕಳೆಯಿಂದ ಬಂದಿದೆ. ಈ ಬಗ್ಗೆ ತಪಾಸಣೆ ಮಾಡುವಂತೆ ಕರ್ನಾಟಕ ವಾಯುಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಕೇಳಿದ್ದೇವೆ. ಇನ್ನು ಮುಂದಿನ ದಿನಗಳಲ್ಲಿ ಮಳೆ ಬಂದರೆ ಸೊಳ್ಳೆಗಳು ಇನ್ನಷ್ಟು ಹುಟ್ಟಿಕೊಳ್ಳಬಹುದು ಎಂದು ಭಾವಿಸುತ್ತೇನೆ ಎನ್ನುತ್ತಾರೆ.

ಈ ಬಗ್ಗೆ ಸುತ್ತಮುತ್ತಲ ನಿವಾಸಿಗಳು ಬಿಡಿಎ ಆಯುಕ್ತ ರಾಕೇಶ್ ಸಿಂಗ್ ಅವರನ್ನು ಕಳೆದ ವಾರ ಭೇಟಿ ಮಾಡಿ ದೂರು ಸಲ್ಲಿಸಿದ್ದಾರೆ.ತ್ಯಾಜ್ಯಗಳನ್ನು ಸರಿಯಾಗಿ ವಿಲೇವಾರಿ ಮಾಡುವಂತೆ ಕೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT