ಉಗ್ರರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿ, ತವರಿಗೆ ಆಗಮಿಸಿದ ಕರಾವಳಿ ವೀರ ಯೋಧನಿಗೆ ಅದ್ಧೂರಿ ಸ್ವಾಗತ 
ರಾಜ್ಯ

ಮಂಗಳೂರು: ಎಲ್ ಈಟಿ ಉಗ್ರರನ್ನು ಕೊಂದು, ತವರಿಗೆ ಬಂದ ಕರಾವಳಿಯ ವೀರ ಯೋಧನಿಗೆ ಅದ್ಧೂರಿ ಸ್ವಾಗತ

ಜಮ್ಮು ಮತ್ತು ಕಾಶ್ಮೀರದ ಕರಣ್ ನಗರದ ಸೇನಾ ನೆಲೆಯ ಮೇಲೆ ದಾಳಿ ನಡೆಸಿದ್ದ ಲಷ್ಕರ್-ಇ-ತೊಯ್ಬಾ ಉಗ್ರರನ್ನು ಸದೆಬಡಿದಿದ್ದ ಸಿಆರ್'ಪಿಎಫ್ ಯೋಧ ಝಬೆರ್ ಅವರು ತವರಿಗೆ ಆಗಮಿಸಿದ್ದು, ಹುಟ್ಟೂರಿನಲ್ಲಿ ಝಬೈರ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ...

ಮಂಗಳೂರು: ಜಮ್ಮು ಮತ್ತು ಕಾಶ್ಮೀರದ ಕರಣ್ ನಗರದ ಸೇನಾ ನೆಲೆಯ ಮೇಲೆ ದಾಳಿ ನಡೆಸಿದ್ದ ಲಷ್ಕರ್-ಇ-ತೊಯ್ಬಾ ಉಗ್ರರನ್ನು ಸದೆಬಡಿದಿದ್ದ ಸಿಆರ್'ಪಿಎಫ್ ಯೋಧ ಝಬೆರ್ ಅವರು ತವರಿಗೆ ಆಗಮಿಸಿದ್ದು, ಹುಟ್ಟೂರಿನಲ್ಲಿ ಝಬೈರ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ. 
ಶನಿವಾರ ರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಝುಬೆರ್ ಅವರು ನಿನ್ನೆ ಬೆಳಿಗ್ಗೆ ಹುಟ್ಟೂರು ಉಪ್ಪಿನಂಗಡಿ ಸಮೀಪದ ನೇರಂಕಿಗೆ ಬಂದಿದ್ದರು. ಝಬೆರ್ ಅವರು ಆಗಮಿಸುತ್ತಿದ್ದಂತೆಯೇ ಸ್ಥಳದಲ್ಲಿ ಸಂಭ್ರಮ ಮುಗಿಲು ಮುಟ್ಟಿತ್ತು. ಸ್ಥಳದಲ್ಲಿ ನೆರೆದಿದ್ದ ಜನರು ಝಬೈರ್ ಪರ ಘೋಷಣೆಗಳನ್ನು ಕೂಗಿದರು. 
ನಂತರ ತೆರೆದ ವಾಹನದಲ್ಲಿ ಯೋಧ ಝಬೆರ್ ಅವರನ್ನು ಮೆರವಣಿಗೆ ಮಾಡಿ ಸನ್ಮಾನ ಮಾಡಲಾಯಿತು. ಕೊಯಿಲ, ಆತೂರು, ಗೋಳಿತ್ತಡಿ, ರಾಮಕುಂಬ ಮಾರ್ಗವಾಗಿ ನೇರಂಕಿಯವರೆಗೂ ತೆರೆದ ವಾಹನದ ಮೂಲಕ ಮೆರವಣಿಗೆ ನಡೆಸಲಾಯಿತು. 
ಫೆ.12 ರಂದು ಸಿಆರ್'ಪಿಎಫ್ 23 ಬೆಟಾಲಿಯನ್ ಪಡೆ ಮೇಲೆ ಉಗ್ರರು ದಾಳಿ ನಡೆಸಿದ್ದರು. ಸಿಆರ್'ಪಿಎಫ್ ಪಡೆಯಲ್ಲಿ ಝುಬೆರ್ ಅವರೂ ಕೂಡ ಇದ್ದರು. ಯೋಧರ ಮೇಲೆ ದಾಳಿ ನಡೆಸಿದ್ದ ಉಗ್ರರು, ನಂತರ ಕರಣ್ ನಗರ ಪ್ರದೇಶದಲ್ಲಿದ್ದ ಕಟ್ಟಡವೊಂದರಲ್ಲಿ ಅವಿತುಕುಳಿತಿದ್ದರು. ನಂತರ ಕಾರ್ಯಾಚರಣೆಗಿಳಿದಿದ್ದ ಯೋಧರು ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಕೊನೆಗೂ ಅಡಗಿ ಕುಳಿತಿದ್ದ ಎಲ್ಲಾ ಉಗ್ರರನ್ನು ಹತ್ಯೆ ಮಾಡಿದ್ದರು. ಕಾರ್ಯಾಚರಣೆ ವೇಳೆ ಓರ್ವ ಸಿಆರ್'ಪಿಎಫ್ ಯೋಧ ಮೊಜಾಹಿದ್ ಖಾನ್ ಎಂಬುವವರು ಹುತಾತ್ಮರಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT