ಸಂಗ್ರಹ ಚಿತ್ರ 
ರಾಜ್ಯ

ಹಾಸನಾಂಬ ದೇಗುಲದಲ್ಲಿ ಕಳ್ಳರ ಕೈಚಳಕ, ಬಾಗಿಲು ಮುರಿದು ಕಳ್ಳತನ

ಶಕ್ತಿ ದೇವತೆ ಹಾಸನಾಂಬ ದೇಗುಲದಲ್ಲ ಕಳ್ಳರು ಕೈಚಳಕ ತೋರಿದ್ದು, ದೇಗುಲದ ಬಾಗಿನ್ನು ಮುರಿದು ಕಳ್ಳತನಕ್ಕೆ ಯತ್ನಿಸಿರುವ ಘಟನೆ ಕಳೆದ ರಾತ್ರಿ ನಡೆದಿದೆ.

ಹಾಸನ: ಶಕ್ತಿ ದೇವತೆ ಹಾಸನಾಂಬ ದೇಗುಲದಲ್ಲ ಕಳ್ಳರು ಕೈಚಳಕ ತೋರಿದ್ದು, ದೇಗುಲದ ಬಾಗಿನ್ನು ಮುರಿದು ಕಳ್ಳತನಕ್ಕೆ ಯತ್ನಿಸಿರುವ ಘಟನೆ ಕಳೆದ ರಾತ್ರಿ ನಡೆದಿದೆ.
ವರ್ಷಕ್ಕೊಮ್ಮೆ ಮಾತ್ರ ತೆರೆಯುವ ಹಾಸನಾಂಬ ದೇಗುಲದಲ್ಲಿ ಕಳೆದ ರಾತ್ರಿ ಕಳ್ಳರು ನುಗ್ಗಿ ಕಳ್ಳತನ ಮಾಡಿದ್ದು, ದೇಗುಲದ ಬಾಗಿಲನ್ನೇ ಮುರಿದು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಮೂಲಗಳ ಪ್ರಕಾರ ದೇಗುಲದಲ್ಲಿ ಹಣ ಮತ್ತು ಭಕ್ತರ ಕಾಣಿಕೆ ವಸ್ತುಗಳು ಏನೂ ಇರಲಿಲ್ಲ ಎನ್ನಲಾಗಿದೆ. ವರ್ಷಕ್ಕೊಮ್ಮೆ ನಡೆಯುವ ಜಾತ್ರೆ ಸಂದರ್ಭದಲ್ಲಿ ದೇಗುಲವನ್ನು ತೆರೆದು ಬಳಿಕ ಜಾತ್ರೆ ಅಂತ್ಯದಲ್ಲಿ ದೇಗುಲದ ಹುಂಡಿ ಮತ್ತು ಇತರೆ ಭಾಗಳಿಂದ ಬಂದ ಹಣ ಮತ್ತು ಕಾಣಿಕೆಗಳನ್ನು ಲೆಕ್ಕ ಹಾಕಿ ಸರ್ಕಾರಕ್ಕೆ ಒಪ್ಪಿಸಲಾಗುತ್ತದೆ. 
ಹೀಗಾಗಿ ನಿನ್ನೆ ಕಳ್ಳರಿಗೆ ಈ ಹಣ ಸಿಕ್ಕಿಲ್ಲ. ಆದರೆ ದೇಗುಲದಲ್ಲಿ ದೇವರ ವಿಗ್ರಹಗಳು, ಅಲಂಕಾರಿಕ ವಸ್ತುಗಳು, ಸೇರಿದಂತೆ ಹಲವು ವಸ್ತುಗಳು ಇದ್ದವು. ಈ ವಸ್ತುಗಳನ್ನು ಕಳ್ಳರು ಹೊತ್ತೊಯ್ದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದೇಗುಲದಲ್ಲಿ ಅಳವಡಿಸಲಾಗಿರುವ ದೇಗುಲದ ಸಿಸಿಟಿವಿ ಕ್ಯಾಮೆರಾಗಳ ದಾಖಲೆಯನ್ನೂ ಕೂಡ ಪೊಲೀಸರು ಪಡೆದಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT