ಸಂಗ್ರಹ ಚಿತ್ರ 
ರಾಜ್ಯ

ಹಾಸನಾಂಬ ದೇಗುಲದಲ್ಲಿ ಕಳ್ಳರ ಕೈಚಳಕ, ಬಾಗಿಲು ಮುರಿದು ಕಳ್ಳತನ

ಶಕ್ತಿ ದೇವತೆ ಹಾಸನಾಂಬ ದೇಗುಲದಲ್ಲ ಕಳ್ಳರು ಕೈಚಳಕ ತೋರಿದ್ದು, ದೇಗುಲದ ಬಾಗಿನ್ನು ಮುರಿದು ಕಳ್ಳತನಕ್ಕೆ ಯತ್ನಿಸಿರುವ ಘಟನೆ ಕಳೆದ ರಾತ್ರಿ ನಡೆದಿದೆ.

ಹಾಸನ: ಶಕ್ತಿ ದೇವತೆ ಹಾಸನಾಂಬ ದೇಗುಲದಲ್ಲ ಕಳ್ಳರು ಕೈಚಳಕ ತೋರಿದ್ದು, ದೇಗುಲದ ಬಾಗಿನ್ನು ಮುರಿದು ಕಳ್ಳತನಕ್ಕೆ ಯತ್ನಿಸಿರುವ ಘಟನೆ ಕಳೆದ ರಾತ್ರಿ ನಡೆದಿದೆ.
ವರ್ಷಕ್ಕೊಮ್ಮೆ ಮಾತ್ರ ತೆರೆಯುವ ಹಾಸನಾಂಬ ದೇಗುಲದಲ್ಲಿ ಕಳೆದ ರಾತ್ರಿ ಕಳ್ಳರು ನುಗ್ಗಿ ಕಳ್ಳತನ ಮಾಡಿದ್ದು, ದೇಗುಲದ ಬಾಗಿಲನ್ನೇ ಮುರಿದು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಮೂಲಗಳ ಪ್ರಕಾರ ದೇಗುಲದಲ್ಲಿ ಹಣ ಮತ್ತು ಭಕ್ತರ ಕಾಣಿಕೆ ವಸ್ತುಗಳು ಏನೂ ಇರಲಿಲ್ಲ ಎನ್ನಲಾಗಿದೆ. ವರ್ಷಕ್ಕೊಮ್ಮೆ ನಡೆಯುವ ಜಾತ್ರೆ ಸಂದರ್ಭದಲ್ಲಿ ದೇಗುಲವನ್ನು ತೆರೆದು ಬಳಿಕ ಜಾತ್ರೆ ಅಂತ್ಯದಲ್ಲಿ ದೇಗುಲದ ಹುಂಡಿ ಮತ್ತು ಇತರೆ ಭಾಗಳಿಂದ ಬಂದ ಹಣ ಮತ್ತು ಕಾಣಿಕೆಗಳನ್ನು ಲೆಕ್ಕ ಹಾಕಿ ಸರ್ಕಾರಕ್ಕೆ ಒಪ್ಪಿಸಲಾಗುತ್ತದೆ. 
ಹೀಗಾಗಿ ನಿನ್ನೆ ಕಳ್ಳರಿಗೆ ಈ ಹಣ ಸಿಕ್ಕಿಲ್ಲ. ಆದರೆ ದೇಗುಲದಲ್ಲಿ ದೇವರ ವಿಗ್ರಹಗಳು, ಅಲಂಕಾರಿಕ ವಸ್ತುಗಳು, ಸೇರಿದಂತೆ ಹಲವು ವಸ್ತುಗಳು ಇದ್ದವು. ಈ ವಸ್ತುಗಳನ್ನು ಕಳ್ಳರು ಹೊತ್ತೊಯ್ದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದೇಗುಲದಲ್ಲಿ ಅಳವಡಿಸಲಾಗಿರುವ ದೇಗುಲದ ಸಿಸಿಟಿವಿ ಕ್ಯಾಮೆರಾಗಳ ದಾಖಲೆಯನ್ನೂ ಕೂಡ ಪೊಲೀಸರು ಪಡೆದಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT