ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹ 
ರಾಜ್ಯ

ಬೆಂಗಳೂರು : 18 ತಿಂಗಳ ವಿಳಂಬದ ನಂತರ ಕೂಲಿ ಹಣ ಪಡೆದ ಖೈದಿಗಳು

ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿನ ಖೈದಿಗಳ ಕೂಲಿ ಹಣವನ್ನು ಒಂದೂವರೆ ವರ್ಷಗಳ ನಂತರ ರಾಜ್ಯಸರ್ಕಾರ ಬಿಡುಗಡೆ ಮಾಡಿದ್ದು, ಅವರ ಸಂತಸಕ್ಕೆ ಕಾರಣವಾಗಿದೆ.

ಬೆಂಗಳೂರು: ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿನ ಖೈದಿಗಳ ಕೂಲಿ ಹಣವನ್ನು ಒಂದೂವರೆ ವರ್ಷಗಳ ನಂತರ  ರಾಜ್ಯಸರ್ಕಾರ ಬಿಡುಗಡೆ ಮಾಡಿದ್ದು, ಅವರ ಸಂತಸಕ್ಕೆ ಕಾರಣವಾಗಿದೆ.

ವಿಚಾರಣಾಧೀನಾ ಖೈದಿಗಳು ಸೇರಿದಂತೆ ಕೆಲವರ ಅಪರಾಧಿಗಳು 2016 ಸೆಪ್ಟೆಂಬರ್ ನಿಂದ 2018 ಜನವರಿವರೆವಿಗೂ ಮಾಡಿದ ಕೆಲಸದ ಹಣ ಇನ್ನೂ ಬಿಡುಗಡೆಯಾಗಿರಲಿಲ್ಲ.  83. 59, 980 ರೂ. ಬಾಕಿ ಉಳಿಸಿಕೊಳ್ಳಲಾಗಿತ್ತು. ತಾವೂ ಮಾಡಿದ್ದ ಕೆಲಸದ ಹಣವನ್ನು ಬಿಡುಗಡೆ ಮಾಡಬೇಕೆಂಬ ಬೇಡಿಕೆಯೂ ಖೈದಿಗಳಿಂದ ಹೆಚ್ಚಾಗಿತ್ತು.

ಈ ಸಂಬಂಧ ಕೇಂದ್ರ ಕಾರಾಗೃಹದಲ್ಲಿನ ಮುಖ್ಯ ಸೂಪರಿಂಟೆಂಡ್  ಇಲಾಖಾ ಮುಖ್ಯಸ್ಥರು ಹಾಗೂ ಸರ್ಕಾರಕ್ಕೆ ಪತ್ರ ಬರೆದು ಅನುಮೋದನೆ ಪಡೆದುಕೊಂಡಿದ್ದರು. ಆದರೆ, ಕೆಲ ತಾಂತ್ರಿಕ ಕಾರಣಗಳಿಂದಾಗಿ ಹಣ ಬಿಡುಗಡೆಯಾಗಿರಲಿಲ್ಲ. ಈಗ ರಾಜ್ಯ ನೌಕರರ ಪರೋಪಕಾರಿ ನಿಧಿಯಿಂದ  83 , 59, 980 ರೂ ಬಿಡುಗಡೆಗೆ ಸರ್ಕಾರ ಅನುಮೋದನೆ ನೀಡಿದೆ.

 ಖೈದಿಗಳ ಸ್ವಾಭಾವಿಕ ಕೆಲಸದ ಆಧಾರದ ಮೇಲೆ ಪ್ರತಿದಿನ 30, 40, 50 ರೂ ಕೂಲಿ ನೀಡಲಾಗುತ್ತದೆ. ಖೈದಿಗಳ ವೈಯಕ್ತಿಕ ಹಣದ ಖಾತೆಗೆ ಈ ಹಣವನ್ನು ಜಮೆ ಮಾಡಲಾಗುತ್ತದೆ. ಎಲ್ಲಾ ಖೈದಿಗಳೂ ಪಿಪಿಸಿ ಖಾತೆ ಹೊಂದಿದ್ದು, ಈ ಖಾತೆ ಮೂಲಕ ಹಣವನ್ನು ಜಮೆ ಮಾಡಲಾಗುತ್ತದೆ. ಆದರೆ ಇದು ವರ್ಷಾನುಗಟ್ಟಲೇ ವಿಳಂಬವಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT