ನಟ ಚೇತನ್ 
ರಾಜ್ಯ

ಬಿಎಸ್ ವೈ, ರವಿಶಂಕರ್ ಪ್ರಸಾದ್ ಕ್ಷಮೆ ಕೇಳಬೇಕು: ನಟ ಚೇತನ್

ದಿಡ್ಡಳ್ಳಿ ಬುಡಕಟ್ಟು ಜನಾಂಗದವರು ನಕ್ಸಲೀಯರು ಎಂದು ಕರೆದಿರುವ ಕೇಂದ್ರ ಸಚಿವ ರವಿಶಂಕರ್ ....

ಬೆಂಗಳೂರು; ದಿಡ್ಡಳ್ಳಿ ಬುಡಕಟ್ಟು ಜನಾಂಗದವರು ನಕ್ಸಲೀಯರು ಎಂದು ಕರೆದಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕ್ಷಮೆ ಕೇಳಬೇಕೆಂದು ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಆಗ್ರಹಿಸಿದ್ದಾರೆ.

ಮಡಿಕೇರಿಯಲ್ಲಿರುವ ಈ ಬುಡಗಟ್ಟು ಜನರನ್ನು ತಮ್ಮ ವಾಸಸ್ಥಾನ ಬಿಟ್ಟು ತೆರಳುವಂತೆ 2016ರಲ್ಲಿ ಹೇಳಲಾಗಿತ್ತು. ಅಲ್ಲಿಂದ ನಂತರ ಈ ಬುಡಕಟ್ಟು ಜನಾಂಗದವರು, ಹಲವು ಕಾರ್ಯಕರ್ತರಿಂದ ಇದಕ್ಕೆ ವಿರೋಧ ಕೇಳಿಬರುತ್ತಿದೆ.

ಬಿಜೆಪಿ ಹೊರಡಿಸಿರುವ ಆರೋಪಪಟ್ಟಿಯಲ್ಲಿ ದಿಡ್ಡಳ್ಳಿ ಪ್ರತಿಭಟನೆ ಕಾಂಗ್ರೆಸ್ ಪ್ರಾಯೋಜಿತ ನಕ್ಸಲ್ ಪ್ರತಿಭಟನೆ ಎಂದು ಬಿಜೆಪಿಯವರು ಆರೋಪ ಮಾಡಿದ್ದಾರೆ. ಅವರಿಗೆ ದಲಿತರು, ಬುಡಗಟ್ಟು ಜನಾಂಗದವರು ಮತ್ತು ಇತರ ಅಸಂಘಟಿತ ಬಡವರ ಧ್ವನಿ ಕೇಳುವುದಿಲ್ಲ. ಇವರೆಲ್ಲಾ ತಮ್ಮ ಜೀವನೋಪಾಯಕ್ಕೆ ಮಾಡುತ್ತಿರುವ ಹೋರಾಟಗಳು. ಇವರನ್ನು ಕಳಂಕಿತರು ಎಂಬ ದೃಷ್ಟಿಯಲ್ಲಿ ನೋಡಲಾಗುತ್ತಿದೆ. ಹೀಗಾಗಿ ಬಿಜೆಪಿಯವರು ಇದಕ್ಕೆ ಕ್ಷಮೆ ಕೋರಬೇಕು ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಚೇತನ್ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?