ಮಂಗಳೂರಿನಲ್ಲಿ ಪ್ರದರ್ಶನದಲ್ಲಿ ಯಕ್ಷಗಾನ ಕಲಾವಿದರು 
ರಾಜ್ಯ

ಚುನಾವಣಾ ನೀತಿ ಸಂಹಿತೆಯಿಂದ ಯಕ್ಷಗಾನ ಕಲಾವಿದರಲ್ಲಿ ಅಸಮಾಧಾನ

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ರಾಜಕೀಯ ...

ಮಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ರಾಜಕೀಯ ಉದ್ದೇಶಗಳಿಗೆ ಕಾರ್ಯಕ್ರಮ ನಡೆಸುವುದಿಲ್ಲವೆಂದು ಸಂಬಂಧಪಟ್ಟ ರಿಟರ್ನಿಂಗ್ ಆಫೀಸರ್ ಗೆ ಹೇಳಿಕೆ ಬರೆದುಕೊಟ್ಟು ಸಹಿ ಮಾಡಬೇಕೆಂದು ಯಕ್ಷಗಾನ ಕಾರ್ಯಕ್ರಮ ಸಂಘಟಕರಿಗೆ ಹೇಳಿರುವುದು ದಕ್ಷಿಣ ಕನ್ನಡ ಜಿಲ್ಲೆಯ ಯಕ್ಷಗಾನ ಕಲಾವಿದರಲ್ಲಿ ನೋವುಂಟುಮಾಡಿದೆ.

ನವೆಂಬರ್ ನಿಂದ ಮೇಯವರೆಗೆ ಯಕ್ಷಗಾನ ಬಯಲಾಟ ಕಾರ್ಯಕ್ರಮ ನೀಡುವ ಸೀಸನ್ ಆಗಿದ್ದು  ಈ ಸಂದರ್ಭದಲ್ಲಿ ಕಟೀಲು, ಮಂದರ್ತಿಗಳಲ್ಲಿ ಯಕ್ಷಗಾನ ಕಾರ್ಯಕ್ರಮಗಳನ್ನಿಟ್ಟರೆ ಸಾವಿರಾರು ಜನರು ಬರುತ್ತಾರೆ. ಆದರೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವುದರಿಂದ ತಮಗೆ ಸಿಗುವ ಅವಕಾಶಗಳು ಕಡಿಮೆಯಾಗಬಹುದು ಎಂಬ ಆತಂಕ ಕಲಾವಿದರದ್ದು.

ದಕ್ಷಿಣ ಕನ್ನಡ ಜಿಲ್ಲೆಗೆ ಚುನಾವಣೆ ಸಂದರ್ಭದಲ್ಲಿ ಹೀಗೆ ಯಕ್ಷಗಾನ ಕಲಾವಿದರಿಗೆ ನಿಯಮ ಬಂದಿದ್ದು ಇದೇ ಮೊದಲು. ಇದು ಅನಗತ್ಯ ಮತ್ತು ಅಸಾಧ್ಯ ಕೂಡ. ಯಕ್ಷಗಾನ ಪ್ರದರ್ಶನದಲ್ಲಿ ರಾಜಕೀಯ ಇಣಕುವ ಉದಾಹರಣೆಗಳಿಲ್ಲ ಎನ್ನುತ್ತಾರೆ. ಉಡುಪಿ ಜಿಲ್ಲಾಡಳಿತ ಯಕ್ಷಗಾನ ಪ್ರದರ್ಶನಕ್ಕೆ ಸಂಘಟಕರಿಗೆ ಅನುಮತಿ ಪಡೆಯಬೇಕೆಂದು ಹೇಳಿದೆ. ಇದು ಹಲವು ಯಕ್ಷಗಾನ ತಂಡಗಳಿಗೆ ತೊಂದರೆಯಾಗಿದೆ ಎನ್ನುತ್ತಾರೆ ಪಟ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಹುಲ್ ಗಾಂಧಿಯ 'ವೋಟ್ ಚೋರಿ' ಆರೋಪ ಖಂಡಿಸಿ 272 ಗಣ್ಯರಿಂದ ಬಹಿರಂಗ ಪತ್ರ; ಚುನಾವಣಾ ಆಯೋಗದ ಪರವಾಗಿ ವಾದ!

ಜೈಲಿನಲ್ಲಿ ರಾಜಾತಿಥ್ಯ ವಿಡಿಯೋ ಲೀಕ್ ಕೇಸ್: ನನಗೇನು ಗೊತ್ತಿಲ್ಲ ಅನ್ನುತ್ತಿದ್ದ ಧನ್ವೀರ್ ಈಗ ವಿಜಯಲಕ್ಷ್ಮೀ ಹೆಸರು ಬಾಯಿಬಿಟ್ಟ!

ನೇಪಾಳದ Gen Zಗಳು ಭಾರತಕ್ಕೂ ಬೇಕೆಂಬ ಆಸೆಯಲ್ಲಿದ್ದವರಿಗೆ ಬಿಹಾರದಲ್ಲಿ ಸಿಕ್ಕಿದ್ದು ಮೈಥಿಲಿ! (ತೆರೆದ ಕಿಟಕಿ)

ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ ರೂ. ಹಣ ದರೋಡೆ; ಗ್ಯಾಂಗ್ ಪರಾರಿ!

ಭಾರತೀಯ ಮೂಲದ ಮಮ್ದಾನಿ "ಭಾರತೀಯರನ್ನು ದ್ವೇಷಿಸುತ್ತಾರೆ: ಹೊಸ ಬಾಂಬ್ ಸಿಡಿಸಿದ ಡೊನಾಲ್ಡ್ ಟ್ರಂಪ್ ಪುತ್ರ!

SCROLL FOR NEXT