ಮಂಗಳೂರಿನಲ್ಲಿ ಪ್ರದರ್ಶನದಲ್ಲಿ ಯಕ್ಷಗಾನ ಕಲಾವಿದರು 
ರಾಜ್ಯ

ಚುನಾವಣಾ ನೀತಿ ಸಂಹಿತೆಯಿಂದ ಯಕ್ಷಗಾನ ಕಲಾವಿದರಲ್ಲಿ ಅಸಮಾಧಾನ

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ರಾಜಕೀಯ ...

ಮಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ರಾಜಕೀಯ ಉದ್ದೇಶಗಳಿಗೆ ಕಾರ್ಯಕ್ರಮ ನಡೆಸುವುದಿಲ್ಲವೆಂದು ಸಂಬಂಧಪಟ್ಟ ರಿಟರ್ನಿಂಗ್ ಆಫೀಸರ್ ಗೆ ಹೇಳಿಕೆ ಬರೆದುಕೊಟ್ಟು ಸಹಿ ಮಾಡಬೇಕೆಂದು ಯಕ್ಷಗಾನ ಕಾರ್ಯಕ್ರಮ ಸಂಘಟಕರಿಗೆ ಹೇಳಿರುವುದು ದಕ್ಷಿಣ ಕನ್ನಡ ಜಿಲ್ಲೆಯ ಯಕ್ಷಗಾನ ಕಲಾವಿದರಲ್ಲಿ ನೋವುಂಟುಮಾಡಿದೆ.

ನವೆಂಬರ್ ನಿಂದ ಮೇಯವರೆಗೆ ಯಕ್ಷಗಾನ ಬಯಲಾಟ ಕಾರ್ಯಕ್ರಮ ನೀಡುವ ಸೀಸನ್ ಆಗಿದ್ದು  ಈ ಸಂದರ್ಭದಲ್ಲಿ ಕಟೀಲು, ಮಂದರ್ತಿಗಳಲ್ಲಿ ಯಕ್ಷಗಾನ ಕಾರ್ಯಕ್ರಮಗಳನ್ನಿಟ್ಟರೆ ಸಾವಿರಾರು ಜನರು ಬರುತ್ತಾರೆ. ಆದರೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವುದರಿಂದ ತಮಗೆ ಸಿಗುವ ಅವಕಾಶಗಳು ಕಡಿಮೆಯಾಗಬಹುದು ಎಂಬ ಆತಂಕ ಕಲಾವಿದರದ್ದು.

ದಕ್ಷಿಣ ಕನ್ನಡ ಜಿಲ್ಲೆಗೆ ಚುನಾವಣೆ ಸಂದರ್ಭದಲ್ಲಿ ಹೀಗೆ ಯಕ್ಷಗಾನ ಕಲಾವಿದರಿಗೆ ನಿಯಮ ಬಂದಿದ್ದು ಇದೇ ಮೊದಲು. ಇದು ಅನಗತ್ಯ ಮತ್ತು ಅಸಾಧ್ಯ ಕೂಡ. ಯಕ್ಷಗಾನ ಪ್ರದರ್ಶನದಲ್ಲಿ ರಾಜಕೀಯ ಇಣಕುವ ಉದಾಹರಣೆಗಳಿಲ್ಲ ಎನ್ನುತ್ತಾರೆ. ಉಡುಪಿ ಜಿಲ್ಲಾಡಳಿತ ಯಕ್ಷಗಾನ ಪ್ರದರ್ಶನಕ್ಕೆ ಸಂಘಟಕರಿಗೆ ಅನುಮತಿ ಪಡೆಯಬೇಕೆಂದು ಹೇಳಿದೆ. ಇದು ಹಲವು ಯಕ್ಷಗಾನ ತಂಡಗಳಿಗೆ ತೊಂದರೆಯಾಗಿದೆ ಎನ್ನುತ್ತಾರೆ ಪಟ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ