ಸಂಗ್ರಹ ಚಿತ್ರ 
ರಾಜ್ಯ

ರಾಹುಲ್, ಸಿಎಂ ಸಿದ್ದು ಕುರಿತು ಮಿಮಿಕ್ರಿ: ಯಕ್ಷಗಾನ ಮೇಳಕ್ಕೆ ನೀಡಿದ್ದ ನೋಟಿಸ್ ಹಿಂಪಡೆದ ಚುನಾವಣಾ ಆಯೋಗ

ಕರಾವಳಿ ಜಿಲ್ಲೆಗಳಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿಯಾಗಿದ್ದ ಚುನಾವಣಾ ನೀತಿ ಸಂಹಿತೆ ಈಗ ಪ್ರಸಂಗಗಳ ಸಂಭಾಷಣೆಗೂ ತಟ್ಟಿದೆ. ಇಧರ ಪರಿಣಾಮ ಯಕ್ಷಗಾನ ಮೇಳದ ಪ್ರಧಾನ ಹಾಸ್ಯ ಕಲಾವಿದರೊಬ್ಬರು ಮೇಳದಿಂದಲೇ ಅಮಾನತುಗೊಂಡಿದ್ದರು...

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿಯಾಗಿದ್ದ ಚುನಾವಣಾ ನೀತಿ ಸಂಹಿತೆ ಈಗ ಪ್ರಸಂಗಗಳ ಸಂಭಾಷಣೆಗೂ ತಟ್ಟಿದೆ. ಇಧರ ಪರಿಣಾಮ ಯಕ್ಷಗಾನ ಮೇಳದ ಪ್ರಧಾನ ಹಾಸ್ಯ ಕಲಾವಿದರೊಬ್ಬರು ಮೇಳದಿಂದಲೇ ಅಮಾನತುಗೊಂಡಿದ್ದರು. ಯಕ್ಷಗಾನ ಮೇಳದ ವ್ಯವಸ್ಥಾಪಕರು ಸ್ಪಷ್ಟೀಕರಣ ನೀಡಿದ ಬಳಿಕ ಚುನಾವಣಾಧಿಕಾರಿಗಳು ಅಮಾನತನ್ನು ಹಿಂದಕ್ಕೆ ಪಡೆದಿದ್ದಾರೆ. 
ಯಕ್ಷಗಾನ ಬಯಲಾಟ ಪ್ರದರ್ಶನದ ಸಂಭಾಷಣೆಯಲ್ಲಿ ಇವನರ್ವ... ಇವನರ್ವ... ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭಾಷಣದ ಸಾಲನ್ನು ಹಾಸ್ಯ ಮಾಡಿದ್ದರು. ಎನ್ನಲಾದ ಹಾಸ್ಯಕಲಾವಿದರೊಬ್ಬರನ್ನು ಚುನಾವಣಾಧಿಕಾರಿಗಳು ಮೇಳದಿಂದಲೇ ಮನೆಗೆ ಕಳುಹಿಸಿದ್ದ ಘಟನೆ ಮಂಗಳೂರಿನಲ್ಲಿ ಸೋಮವಾರ ನಡೆದಿತ್ತು. 
ಆದರೆ, ಈ ಯಕ್ಷಗಾನ ಪ್ರಸಂಗ ನಡೆದಿದ್ದು ಕರ್ನಾಟದಲ್ಲಲ್ಲ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರದ ನೆರೆಯ ಕೇರಳದ ಕಾಸರಗೋಡಿನಲ್ಲಿ ಎಂದು ಮೇಳದ ವ್ಯವಸ್ಥಾಪಕರು ಸ್ಪಷ್ಟೀಕರಣ ನೀಡಿದ ಬಳಿಕ ಬುಧವಾರ ಅಮಾನತು ಆದೇಸವನ್ನು ಹಿಂದಕ್ಕೆ ಪಡೆದಿದ್ದು, ಈ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT