ಸಂಗ್ರಹ ಚಿತ್ರ 
ರಾಜ್ಯ

ರಾಹುಲ್, ಸಿಎಂ ಸಿದ್ದು ಕುರಿತು ಮಿಮಿಕ್ರಿ: ಯಕ್ಷಗಾನ ಮೇಳಕ್ಕೆ ನೀಡಿದ್ದ ನೋಟಿಸ್ ಹಿಂಪಡೆದ ಚುನಾವಣಾ ಆಯೋಗ

ಕರಾವಳಿ ಜಿಲ್ಲೆಗಳಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿಯಾಗಿದ್ದ ಚುನಾವಣಾ ನೀತಿ ಸಂಹಿತೆ ಈಗ ಪ್ರಸಂಗಗಳ ಸಂಭಾಷಣೆಗೂ ತಟ್ಟಿದೆ. ಇಧರ ಪರಿಣಾಮ ಯಕ್ಷಗಾನ ಮೇಳದ ಪ್ರಧಾನ ಹಾಸ್ಯ ಕಲಾವಿದರೊಬ್ಬರು ಮೇಳದಿಂದಲೇ ಅಮಾನತುಗೊಂಡಿದ್ದರು...

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿಯಾಗಿದ್ದ ಚುನಾವಣಾ ನೀತಿ ಸಂಹಿತೆ ಈಗ ಪ್ರಸಂಗಗಳ ಸಂಭಾಷಣೆಗೂ ತಟ್ಟಿದೆ. ಇಧರ ಪರಿಣಾಮ ಯಕ್ಷಗಾನ ಮೇಳದ ಪ್ರಧಾನ ಹಾಸ್ಯ ಕಲಾವಿದರೊಬ್ಬರು ಮೇಳದಿಂದಲೇ ಅಮಾನತುಗೊಂಡಿದ್ದರು. ಯಕ್ಷಗಾನ ಮೇಳದ ವ್ಯವಸ್ಥಾಪಕರು ಸ್ಪಷ್ಟೀಕರಣ ನೀಡಿದ ಬಳಿಕ ಚುನಾವಣಾಧಿಕಾರಿಗಳು ಅಮಾನತನ್ನು ಹಿಂದಕ್ಕೆ ಪಡೆದಿದ್ದಾರೆ. 
ಯಕ್ಷಗಾನ ಬಯಲಾಟ ಪ್ರದರ್ಶನದ ಸಂಭಾಷಣೆಯಲ್ಲಿ ಇವನರ್ವ... ಇವನರ್ವ... ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭಾಷಣದ ಸಾಲನ್ನು ಹಾಸ್ಯ ಮಾಡಿದ್ದರು. ಎನ್ನಲಾದ ಹಾಸ್ಯಕಲಾವಿದರೊಬ್ಬರನ್ನು ಚುನಾವಣಾಧಿಕಾರಿಗಳು ಮೇಳದಿಂದಲೇ ಮನೆಗೆ ಕಳುಹಿಸಿದ್ದ ಘಟನೆ ಮಂಗಳೂರಿನಲ್ಲಿ ಸೋಮವಾರ ನಡೆದಿತ್ತು. 
ಆದರೆ, ಈ ಯಕ್ಷಗಾನ ಪ್ರಸಂಗ ನಡೆದಿದ್ದು ಕರ್ನಾಟದಲ್ಲಲ್ಲ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರದ ನೆರೆಯ ಕೇರಳದ ಕಾಸರಗೋಡಿನಲ್ಲಿ ಎಂದು ಮೇಳದ ವ್ಯವಸ್ಥಾಪಕರು ಸ್ಪಷ್ಟೀಕರಣ ನೀಡಿದ ಬಳಿಕ ಬುಧವಾರ ಅಮಾನತು ಆದೇಸವನ್ನು ಹಿಂದಕ್ಕೆ ಪಡೆದಿದ್ದು, ಈ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT