ಸಿದ್ದಗಂಗಾ ಶ್ರೀಗಳೊಂದಿಗೆ ರಾಹುಲ್ ಗಾಂಧಿ 
ರಾಜ್ಯ

ತುಮಕೂರು: ತ್ರಿವಿಧ ದಾಸೋಹಿಗೆ 111 ಗುಲಾಬಿ ನೀಡಿದ ರಾಹುಲ್ ಗಾಂಧಿ

ಅಜ್ಜಿ ಇಂದಿರಾ ಗಾಂಧಿ ಹಾಗೂ ತಾಯಿ ಸೋನಿಯಾ ಗಾಂಧಿ ನಂತರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಿದ್ದಗಂಗಾ ಮಠದ...

ತುಮಕೂರು: ಅಜ್ಜಿ ಇಂದಿರಾ ಗಾಂಧಿ ಹಾಗೂ ತಾಯಿ ಸೋನಿಯಾ ಗಾಂಧಿ ನಂತರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಿದ್ದಗಂಗಾ ಮಠದ 111 ವರ್ಷದ ಶಿವಕುಮಾರ ಸ್ವಾಮಿಜಿಗಳ ಆಶೀರ್ವಾದ ಪಡೆದಿದ್ದಾರೆ.
ಬುಧವಾರ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಶ್ರೀಗಳ ಆಶೀರ್ವಾದ ಪಡೆದರು.  ಸುಮಾರು 4ಗಂಟೆ ಸಮಯಕ್ಕೆ ಮಠಕ್ಕೆ ಬಂದ ರಾಹುಲ್ 30 ನಿಮಿಷಗಳ ಕಾಲ ಅಲ್ಲಿಯೆ ಸಮಯ ಕಳೆದರು. ಏಪ್ರಿಲ್ 1 ರಂದು 111ನೇ ವರ್ಷಕ್ಕೆ ಶ್ರೀಗಳು ಕಾಲಿಟ್ಟ ಹಿನ್ನೆಲೆಯಲ್ಲಿ ರಾಹುಲ್ 111 ಗುಲಾಬಿ ಹೂಗಳನ್ನು ನೀಡಿದರು.
ರಾಹುಲ್ ಗಾಂದಿಗೆ ಶಾಲು ಹೊದಿಸಿ ಸ್ವಾಗತಿಸಿದ ಶ್ರೀಗಳು, ಅವರಿಗೆ ಡ್ರೈ ಫ್ರೂಟ್ಸ್ ನೀಡಿ ಹೂವಿನ ಹಾರ ಹಾಕಿದರು. ಇದೇ ವೇಳೆ ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಅವರು ಶ್ರೀಗಳ ಆಶೀರ್ವಾದ ಪಡೆದ ಫೋಟೋ ತೋರಿಸಿದ ರಾಹುಲ್ ನನ್ನ ಅಜ್ಜಿ ಮತ್ತು ನನ್ನ ತಾಯಿ ಅವರಿಗೆ ಕೂಡ ನೀವು ಆಶೀರ್ವದಿಸಿದ್ದೀರಾ, ನನಗೆ ಯಾವಾಗಲೂ ನಿಮ್ಮ ಆಶೀರ್ವಾದ ಬೇಕು ಎಂದು ರಾಹುಲ್ ಗಾಂಧಿ ಸ್ವಾಮಿಜಿಗಳಿಗೆ ತಿಳಿಸಿದರು. 
ಮಠದ ಕಿರಿಯ ಸ್ವಾಮೀಜಿ ಸಿದ್ದಲಿಂಗಾ ಶ್ರೀಗಳು ರಾಹುಲ್ ಗಾಂಧಿ ತಲೆಯ ಮೇಲೆ ಅಕ್ಷತೆ ಹಾಕಿ ಆಶೀರ್ವದಿಸಿದರು. ಇನ್ನೂ ತುಮಕೂರಿನಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ಹಲವು ಮಂದಿ ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT