ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ದಾಖಲೆಯಿಲ್ಲದ 8 ಕೋಟಿ ರು. ಹಣ ಜಪ್ತಿ

ಕಳೆದ ಹಲವು ದಿನಗಳಿಂದ ಶುಕ್ರವಾರದವರೆಗೆ ದಾಖಲೆಯಿಲ್ಲದ 8 ಕೋಟಿ ರು ಹಣ ಹಾಗೂ ವಸ್ತುಗಳನ್ನು ಪೊಲೀಸರು ಮತ್ತು ಚುನಾವಣಾ ಆಯೋಗದ ಅಧಿಕಾರಿಗಳು ..

ಬೆಂಗಳೂರು: ಕಳೆದ ಹಲವು ದಿನಗಳಿಂದ ಶುಕ್ರವಾರದವರೆಗೆ ದಾಖಲೆಯಿಲ್ಲದ 8 ಕೋಟಿ ರು ಹಣ  ಹಾಗೂ ವಸ್ತುಗಳನ್ನು ಪೊಲೀಸರು ಮತ್ತು ಚುನಾವಣಾ ಆಯೋಗದ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ.
ಶುಕ್ರವಾರ ಗುತ್ತಿಗೆದಾರ ಹಾಗೂ ಆತನ ಚಾಲಕನನ್ನು ಬಂಧಿಸಿರುವ ಕೇಂದ್ರ ವಿಭಾಗದ ಪೊಲೀಸರು, 1.5 ಕೋಟಿ ರು ವಶಕ್ಕೆ  ಪಡೆದಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣಾ ವೇಳೆ ಮತದಾರರಿಗೆ ಹಂಚಲು ಹಣವನ್ನು ಕೊಂಡೊಯ್ಯಲಾಗುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ.
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಸುಭಾಷ್. ಎಂ ಹಾಗೂ ಆತನ ಡ್ರೈವರ್ ವೆಂಕಟ್ ಸುರೇಶ್ ಬಾಬು ಅವರನ್ನು ಬಂಧಿಸಲಾಗಿದೆ. ವಶಕ್ಕೆ ಪಡೆದುಕೊಂಡಿರುವ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.
ಏಪ್ರಿಲ್ 5 ರಂದು ಚುನಾವಣಾ ಆಯೋಗ ಹಣ ಹಾಗೂ ವಸ್ತುಗಳನ್ನು ವಶ ಪಡಿಸಿಕೊಳ್ಳಲಾಗಿತ್ತು, ಚುನಾವಣಾ ಆಯೋಗದ ಮಾಹಿತಿ ಪ್ರಕಾರ 2,04,74,130 ರು ಹಣ ಹಾಗೂ 6,301 ಲೀಟರ್ ಲಿಕ್ಕರ್ ಹಾಗೂ 23.76 ಲಕ್ಷ ಮೌಲ್ಯದ ಡ್ರಗ್ಸ್ , 2,464 ಕೆಜಿ ಚಿನ್ನ, ಮತ್ತು ಗೃಹಪಯೋಗಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ಜೊತೆಗೆ ರಾಜಕಾರಣಿಗಳು ಟಿವಿ ಚಾನೆಲ್ ಗಳಲ್ಲಿ  ನೀಡುತ್ತಿರುವ ಪ್ರಚಾರ ಹಾಗೂ ಜಾಹೀರಾತಿಗಳನ್ನು  ಸೂಕ್ಷ್ಮವಾಗಿ ಗಮನಸಿಲಾಗುತ್ತಿದೆ ಎಂದು ಆಯೋಗ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT