ರಾಜ್ಯದ ವಿವಿಧೆಡೆ ತೆರಿಗೆ ಅಧಿಕಾರಿಗಳ ದಾಳಿ, ಅಪಾರ ಪ್ರಮಾಣದ ಬಟ್ಟೆ, ನಗದು ವಶ 
ರಾಜ್ಯ

ರಾಜ್ಯದ ವಿವಿಧೆಡೆ ತೆರಿಗೆ ಅಧಿಕಾರಿಗಳ ದಾಳಿ, ಅಪಾರ ಪ್ರಮಾಣದ ಬಟ್ಟೆ, ನಗದು ವಶ

ಬೆಳಗಾವಿಯ ಪೀರನವಾಡಿಯ ಗೋದಾಮಿನ ಮೇಲೆ ಸರಕು ಮತ್ತು ಸೇವಾ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳನ್ನು ವಶಪಡಿಸಿಕೊಂಡಿದೆ.

ಬೆಳಗಾವಿ: ಬೆಳಗಾವಿಯ ಪೀರನವಾಡಿಯ ಗೋದಾಮಿನ ಮೇಲೆ ಸರಕು ಮತ್ತು ಸೇವಾ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳನ್ನು ವಶಪಡಿಸಿಕೊಂಡಿದೆ.
"ನಗರದಲ್ಲಿ ಇತ್ತೀಚೆಗೆ ಭಾರೀ ಪ್ರಮಾಣದ ಕುಕ್ಕರ್‌ಗಳು ಹಾಗು ಇಸ್ತ್ರಿಪೆಟ್ಟಿಗೆಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವುದು ಪತ್ತೆಯಾಗಿದ್ದು ಇದಕ್ಕೆ ಸಂಬಂಧಿಸಿ 26 ಗೋದಾಮುಗಳನ್ನು ಪರಿಶೀಲಿಸಲಾಗಿತ್ತು. ಅವುಗಳಲ್ಲಿ  ಜೈ ಅಂಬೆ ಕ್ಲಾಥ್ ಸ್ಟೋರ್ಸ್‌ ಎನ್ನುವ ಗೋದಾಮಿನಲ್ಲಿ ಬೃಹತ್ ಪ್ರಮಾಣದಲ್ಲಿ ಸೀರೆ, ಬಟ್ಟೆ ಹಾಗೂ ಸಿದ್ಧ ಉಡುಪುಗಳು ಪತ್ತೆಯಾಗಿದೆ.ಸರಕು ಹಾಗೂ ಸೇವಾ ತೆರಿಗೆ (ಜಾರಿ) ಇಲಾಖೆ ಬೆಳಗಾವಿ ವಿಭಾಗದ ಜಂಟಿ ಆಯುಕ್ತ ರವಿ ಜೆ. ಸ್ಯಾಂಕ್ಟಸ್ ಹೇಳಿದ್ದಾರೆ.
ವಶಕ್ಕೆ ಪಡೆದ ಬಟ್ಟೆಗಳ ಮೌಲ್ಯವಿನ್ನೂ ತಿಳಿದುಬಂದಿಲ್ಲ. ತನಿಖೆ ಮುಂದುವರಿದಿದೆ. ಚುನಾವಣೆ ಸಂದರ್ಭ ಮತದಾರರ ಓಲೈಕೆಗಾಗಿ ಬಟ್ಟೆ ವಿತರಣೆಗೆ ರೀತಿ ಅನಧಿಕೃತವಾಗಿ ದಾಸ್ತಾನು ಮಾಡಿರುವ ಸಾಧ್ಯತೆ ಇದೆ.ಎಂದು ಅವರು ಹೇಳಿದ್ದಾರೆ.
ಬಟ್ಟೆ ಸಂಗ್ರಹದ ಕುರಿತ ನಿಖರ ಲೆಕ್ಕ ಸಿಕ್ಕಿದ ಬಳಿಕ ನಿಯಮಾನುಸಾರವಾಗಿ ದಂಡ ವಿಧಿಸಿ ಕ್ರಮ ಜರುಗಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಬೀದರ್ ನಲ್ಲಿ 1.86 ಕೋಟಿ ನಗದು ವಶ
ದಾಖಲೆಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 1.86 ಕೋಟಿ ರೂ. ಗಳನ್ನು ಬೀದರ್ ತಾಲೂಕು  ಭಂಗೂರು ಚೆಕ್ ಪೋಸ್ಟ್ ನಲ್ಲಿ ತೆರಿಗೆ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ತೆಲಂಗಾಣದಿಂದ ಬೀದರ್ ಅಥವಾ ಕಲಬುರ್ಗಿಗೆ ಹಣ ಒಯ್ಯಲಾಗುತ್ತಿತ್ತು ಎಂದು ಅಧಿಕಾರಿಗಳು ಊಹಿಸಿದ್ದು ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಾರು ತಪಾಸಣೆ ನಡೆಸಿದಾಗ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ.
ಹಣ ಯಾರದ್ದು? ಎಲ್ಲಿಗೆ ಸಾಗಿಸಲಾಗುತ್ತಿತ್ತು? ಈ ಕುರಿತ ಮಾಹಿತಿ ಕಲೆ ಹಾಕಲಾಗುವುದು ಎಂದು ಬೀದರ್ ಜಿಲ್ಲಾಧಿಕಾರಿ ಡಾ. ಎಚ್. ಆರ್. ಮಹದೇವ್ ಹೇಲಿದ್ದಾರೆ.
ಪ್ರಕರಣ ಸಂಬಂಧ ಕಾರಿನ ಚಾಲಕ ಸೇರಿ ಮೂವರನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT