ಕರ್ನಾಟಕ ಹೈಕೋರ್ಟ್ 
ರಾಜ್ಯ

ಬಂದ್ ಗಳಿಂದ, ಸಹಜ ಜನಜೀವನದ ಮೇಲೆ ಪರಿಣಾಮವಿಲ್ಲ: ಹೈಕೋರ್ಟ್ ಗೆ ಸರ್ಕಾರದ ವಿವರಣೆ

ರಾಜ್ಯದಲ್ಲಿ ನಡೆಯುವ ಬಂದ್ ಗಳಿಂದಾಗಿ ದೈನಂದಿನ ಜೀವನದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಗೆ ...

ಬೆಂಗಳೂರು: ರಾಜ್ಯದಲ್ಲಿ ನಡೆಯುವ ಬಂದ್ ಗಳಿಂದಾಗಿ ದೈನಂದಿನ ಜೀವನದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಗೆ  ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ಕನ್ನಡ ಪರ ಸಂಘಟನೆಗಳು ಪದೇ ಪದೆ ಬಂದ್‌ ಗೆ ಕರೆ ನೀಡುತ್ತಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಹಾಗೂ ನ್ಯಾ. ಬಿ.ಎಂ.ಶ್ಯಾಮ್‌ ಸುಂದರ್‌ ಅವರಿದ್ದ ವಿಭಾಗೀಯ ಪೀಠ  ರಾಜ್ಯ  ಸರ್ಕಾರ  ಸೂಕ್ತ ವಿವರಣೆ ನೀಡುವಂತೆ ಸೂಚಿಸಿ ವಿಚಾರಣೆಯನ್ನು ಏಪ್ರಿಲ್ 26ಕ್ಕೆ ಮುಂದೂಡಲಾಗಿದೆ.
ಬಂದ್ ಗಳಿಗೆ ಕರೆ ನೀಡುವ ವೇಳೆ ಸರ್ಕಾರ ಸಾರ್ವಜನಿಕ ಸಾರಿಗೆ ಸೇವೆಯನ್ನು ತಡೆಹಿಡಿಯಬಾರದು ಎಂದು ಹೇಳಲಾಗಿದೆ,
ಕಳೆದ ಫೆಬ್ರವರಿ ತಿಂಗಳಲ್ಲಿ ಮಹಾದಾಯಿ ವಿವಾದ ಸಂಬಂಧ ಬಂದ್ ಆಚರಣೆ ವೇಳೆ ಬಿಎಂಟಿಸಿ ಬಸ್ಲ ಸೇವೆಯನ್ನು ಹಿಂತೆಗೆದುಕೊಳ್ಳಲಾಗಿತ್ತು ಎಂಬ  ಅರ್ಜಿದಾರರ ಸಲಹೆ ನ್ಯಾಯಾಲಯದ ಗಮನ ಸೆಳೆದಿತ್ತು,
ಬಂದ್‌ ಮಾಡುವುದು ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್‌ ಈಗಾಗಲೇ ಆದೇಶ ನೀಡಿದೆ ಆದರೂ ಮತ್ತೆ ಬಂದ್‌ ಆಚರಣೆಗೆ ತಡೆ ಆದೇಶ ನೀಡುವ ಅಗತ್ಯವಿದೆಯೇ ಎಂದು ಹೈಕೋರ್ಟ್ ಪ್ರಶ್ನಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT