ಸಾಂದರ್ಭಿಕ ಚಿತ್ರ 
ರಾಜ್ಯ

ವಿದ್ಯುದಾಘಾತದಿಂದ ಗಾಯಗೊಂಡಿದ್ದ ಬಾಲಕನಿಗೆ 40 ಲಕ್ಷ ರೂ ಪರಿಹಾರ ನೀಡುವಂತೆ ಕೆಪಿಟಿಸಿಎಲ್ ಗೆ ಆದೇಶ

ಮನೆ ಮೇಲೆ ಹಾದು ಹೋಗಿದ್ದ ಹೈ ಟೆನ್ಷನ್ ವೈರ್ ತಗುಲಿ ಗಾಯಗೊಂಡಿದ್ದ ಆರು ವರ್ಷದ ಬಾಲಕನಿಗೆ 40 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕೆಪಿಟಿಸಿಎಲ್ ಗೆ ಆದೇಶಿಸಿದೆ.

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುದಾಘಾತದಿಂದ ಗಾಯಗೊಂಡಿದ್ದ ವ್ಯಕ್ತಿಗಳಿಗೆ ಪರಿಹಾರ ನೀಡುವ ಆದೇಶವನ್ನು ಕೆಪಿಟಿಸಿಎಲ್  ಪ್ರಕಟಿಸಿದ ಮಾರನೇ ದಿನವೇ  ಮತ್ತೊಂದು ಪ್ರಕರಣದಲ್ಲಿ 40 ಲಕ್ಷ ರೂ. ಪರಿಹಾರ ನೀಡಬೇಕಾಗಿದೆ.

ಮನೆ ಮೇಲೆ ಹಾದು ಹೋಗಿದ್ದ ಹೈ ಟೆನ್ಷನ್ ವೈರ್  ತಗುಲಿ ಗಾಯಗೊಂಡಿದ್ದ ಆರು ವರ್ಷದ ಬಾಲಕನಿಗೆ 40 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ  ಕೆಪಿಟಿಸಿಎಲ್ ಗೆ ಆದೇಶಿಸಿದೆ.

 ಆಯೋಗ ದಾಖಲಿಸಿಕೊಂಡಿರುವ ದೂರಿನ ಪ್ರಕಾರ  ಬನ್ನೇರುಘಟ್ಟ ರಸ್ತೆಯ ನಿವಾಸಿಯಾಗಿರುವ ಆರು ವರ್ಷದ ಬಾಲಕ ಮುಝ್ ಅಹ್ಮದ್ ಶರೀಪ್ ಗೆ ವಿದ್ಯುತ್ ವೈರ್ ತಗುಲಿ  ಶೇ. 85 ರಷ್ಟು ದೇಹ ಸುಟ್ಟು ಹೋಗಿದ್ದು, ಸುಮಾರು 40 ದಿನಗಳ ಕಾಲ ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿತ್ತು.

ಆ ಬಾಲಕ ಈಗ ಚೇತರಿಸಿಕೊಂಡಿದ್ದಾನೆ. ಆದರೂ  ಶೌಚಾಲಯದ ಮೇಲೆ ಕೂರಲು ಸಾಧ್ಯವಾಗುತ್ತಿಲ್ಲ. ಆತನ ಕಾಲುಗಳನ್ನು ಸಡಿಲ ಮಾಡಲು ಆಗುತ್ತಿಲ್ಲ ಎಂದು ಆ ಬಾಲಕನ ಪೋಷಕರು ಆಯೋಗದಲ್ಲಿ ದೂರು ದಾಖಲಿಸಿದ್ದರು.

 ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ನಂತರ  40 ಲಕ್ಷ ರೂ. ಪರಿಹಾರ ನೀಡುವಂತೆ ಕೆಪಿಟಿಸಿಎಲ್ ಗೆ ಆಯೋಗ ಆದೇಶಿಸಿದೆ.ಈ ಮುಂಚೆ 99 ಲಕ್ಷ ನೀಡುವಂತೆ ಚರ್ಚೆ ನಡೆಸಲಾಗಿತ್ತು. ಆದರೆ, ಆ ಬಾಲಕ ಈಗ ಚೇತರಿಸಿಕೊಂಡಿರುವುದರಿಂದ 40 ಲಕ್ಷ ಪರಿಹಾರ ನೀಡುವಂತೆ ಆದೇಶಿಸಲಾಗಿದೆ ಎಂದು ಆಯೋಗದ ಮೂಲಗಳಿಂದ ತಿಳಿದುಬಂದಿದೆ.

 ಆದೇಶ ಹೊರಬಿದ್ದ ಒಂದು ವಾರದೊಳಗೆ ಆತನ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುವಂತೆಯೂ ಆದೇಶಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT