ಬಾಮರಾಜನಗರ: ಭೀಕರ ಅಪಘಾತ, ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ 
ರಾಜ್ಯ

ಚಾಮರಾಜನಗರ: ಭೀಕರ ಅಪಘಾತ, ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ

ಕಾರೊಂದರ ಮೇಲೆ ಲಾರಿ ಉರುಳಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ ದಾರುಣ ಘಟನೆ ಚಾಮರಾಜನಗರ ಜಿಲ್ಲೆ ಸೋಮವಾರಪೇಟೆಯಲ್ಲಿ ನಡೆದಿದೆ.

ಚಾಮರಾಜನಗರ: ಕಾರೊಂದರ ಮೇಲೆ ಲಾರಿ ಉರುಳಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ ದಾರುಣ ಘಟನೆ ಚಾಮರಾಜನಗರ ಜಿಲ್ಲೆ ಸೋಮವಾರಪೇಟೆಯಲ್ಲಿ ನಡೆದಿದೆ.
ಚಾಮರಾಜನಗರದ ರಾಷ್ಟ್ರೀಯ ಹೆದ್ದಾರಿ 209 ರಲ್ಲಿ ಈ ಪಘಾತ ಸಂಭವಿಸಿದ್ದು ಮೃತರನ್ನು ಸಿದ್ದರಾಮ, ಮಕ್ಕಳಾದ ಸಂಕೇತ್ ಕುಮಾರ್ ಮತ್ತು ಲಕ್ಷ್ಮೀಕಾಂತ್ ಎಂದು ಗುರುತಿಸಲಾಗಿದೆ.
ವಿಜಯಪುರದ ಇಂಡಿ ತಾಲೂಕು  ಕುಳ್ಳುರುಗಿಯವರಾದ ಇವರು ಕೇರಳ, ತಮಿಳುನಾಡು ಪ್ರವಾಸ ಮುಗಿಸಿ ಹಿಂತಿರುಗುತ್ತಿದ್ದರು.ಮಾರ್ಗ ಮಧ್ಯೆ ಚಾಮರಾಜನಗರದ ಸೋಮವಾರಪೇಟೆಯಲ್ಲಿ ಕಾರು ನಿಲ್ಲಿಸಿ ಎಳನೀರು ಕುಡಿಯುತ್ತಿದ್ದಾಗ ಜೋಳ ತುಂಬಿದ್ದ ಲಾರಿ ತಮಿಳುನಾಡಿನತ್ತ ಹೊರಟಿತ್ತು. 
ವೇಗವಾಗಿ ಬಂದಿದ್ದ ಲಾರಿ ಕಾರ್ ನಮೇಲೆ ಉರುಳಿದೆ. ಆ ವೇಳೆ ಕಾರ್ ನಲ್ಲಿದ್ದ ಇಬ್ಬರು ಮಕ್ಕಳು ಹಾಗೂ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾರಿನಲ್ಲಿದ್ದ ಇನ್ನೂ ಮೂವರಿಗೆ ಗಂಭೀರ ಗಾಯವಾಗಿದ್ದು ಗಾಯಾಳುಗಳನ್ನು ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ದಾಕಲಿಸಲಾಗಿದೆ.
ಘಟನೆ ಸಂಬಂಧ ಚಾಮರಾಜನಗರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?