ಸಾಂದರ್ಭಿಕ ಚಿತ್ರ 
ರಾಜ್ಯ

ಉದ್ಯಮಿಗೆ ಬೆದರಿಸಿ ಹಣ ವಸೂಲಿಗೆ ಯತ್ನ: ಉಡುಪಿಯಲ್ಲಿ ಮೂವರು ಪತ್ರಕರ್ತರ ಬಂಧನ, ಮತ್ತೊರ್ವ ಪರಾರಿ

ಕೋಟೇಶ್ವರದ ಉದ್ಯಮಿಯೋರ್ವರನ್ನು ಬೆದರಿಸಿ ಬ್ಲ್ಯಾಕ್ ಮೇಲ್ ಮಾಡಿದ ಹಿನ್ನಲೆಯಲ್ಲಿ ಮೂವರು ನಕಲಿ ಪತ್ರಕರ್ತರನ್ನು ಕುಂದಾಪುರ...

ಉಡುಪಿ: ಕೋಟೇಶ್ವರದ ಉದ್ಯಮಿಯೋರ್ವರನ್ನು ಬೆದರಿಸಿ ಬ್ಲ್ಯಾಕ್ ಮೇಲ್ ಮಾಡಿದ ಹಿನ್ನಲೆಯಲ್ಲಿ ಮೂವರು ನಕಲಿ ಪತ್ರಕರ್ತರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಾದ ಕುಂದಾಪುರದ ಲೋಕೇಶ್, ಧರ್ಮೇಂದ್ರ ಹಾಗೂ ಮಂಜುನಾಥ್ ಅವರನ್ನು ಸದ್ಯ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಮತ್ತೋರ್ವ ವಿಕ್ರಮ್ ಎಂಬಾತ ನಾಪತ್ತೆಯಾಗಿದ್ದಾನೆ
ಏಪ್ರಿಲ್ 9 ರಂದು ಆರೋಪಿಗಳು ಕೋಟೇಶ್ವರದ ಬೀಚ್ ರಸ್ತೆಯಲ್ಲಿನ ಎಫ್ಎಂ ವೇಸ್ಟ್ ಪ್ಲಾಸ್ಟಿಕ್ ಕಟ್ಟಿಂಗ್ ಮತ್ತು ಹೈಡ್ರೋಲಿಕ್ ಪ್ರೆಸ್ಸಿಂಗ್ ಯುನಿಟ್ ಮಾಲಿಕ ಫಾರೂಕ್ ಅವರ ಫ್ಯಾಕ್ಟರಿಗೆ ಬಂದು, ನಾವು ಮಾಧ್ಯಮದವರು ನೀವು ಗ್ಲುಕೋಸ್ ಬಾಟಲಿಗಳನ್ನು ತೆಗೆದುಕೊಳ್ಳಬಾರದು ಬೆದರಿಸಿ, ಒಂದು ಲಕ್ಷ ನೀಡದಿದ್ದರೆ ಈ ಬಗ್ಗೆ ಪತ್ರಿಕೆಯಲ್ಲಿ ಬರೆಯುತ್ತೇವೆ ಎಂದು ಹೆದರಿಸಿ, 5,000 ಹಣವನ್ನು ತೆಗೆದುಕೊಂಡು ಹೋಗಿದ್ರು ಎಂದು ಮಾಲಕ ಫಾರೂಕ್ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಹಿನ್ನಲೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.
ಫಾರೂಕ್ ನಾಲ್ವರು ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದರು, ಅದರ ಆಧಾರದ ಮೇಲೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ, ಭಾರತೀಯ ದಂಡ ಸಂಹಿತೆ 384, 392,506 ಮತ್ತು 34ರ ನಿಯಮದಂತೆ ಕೇಸ್ ದಾಖಲಿಸಲಾಗಿದ್ದು, ಏಪ್ರಿಲ್ 20ರ ವರೆಗೆ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT