ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದ ಹಲವೆಡೆ ಸಿಡಿಲ ಸಹಿತ ಮಳೆ ಅಬ್ಬರ; 10 ಸಾವು, 6 ಜನರಿಗೆ ಗಾಯ

ಉತ್ತರ ಕರ್ನಾಟಕ ಮತ್ತು ಕರಾವಳಿಯ ಕೆಲ ಭಾಗಗಳಲ್ಲಿ ಭಾನುವಾರ ಸುರಿದ ಬೇಸಿಗೆ ಮಳೆಗೆ ಇಬ್ಬರು ಬಾಲಕರು, ಇಬ್ಬರು ಬಾಲಕಿಯರು ಸೇರಿ ಒಟ್ಟು 10 ಮಂದಿ ಬಲಿಯಾಗಿದ್ದು, 6 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ...

ಯಾದಗಿರಿ; ಉತ್ತರ ಕರ್ನಾಟಕ ಮತ್ತು ಕರಾವಳಿಯ ಕೆಲ ಭಾಗಗಳಲ್ಲಿ ಭಾನುವಾರ ಸುರಿದ ಬೇಸಿಗೆ ಮಳೆಗೆ ಇಬ್ಬರು ಬಾಲಕರು, ಇಬ್ಬರು ಬಾಲಕಿಯರು ಸೇರಿ ಒಟ್ಟು 10 ಮಂದಿ ಬಲಿಯಾಗಿದ್ದು, 6 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. 
ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬಳ್ಳಾರಿ, ಹಾವೇರಿ, ಗದಗ, ಧಾರವಾಡ, ಕೊಪ್ಪಳ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಿನ್ನೆ ಉತ್ತಮ ಮಳೆ ಸುರಿದಿದ್ದು, ತಂಪಿನ ವಾತಾವರಣ ಸೃಷ್ಟಿಸುವುದರೊಂದಿಗೆ ಹಾನಿಗಳೂ ಕೂಡ ಸಂಭವಿಸಿದೆ. 
ಯಾದಗಿರಿ ಒಂದರಲ್ಲೇ ಭಾರೀ ಸಿಡಿಲಿಗೆ 6 ಮಂದಿ ಸಾವನ್ನಪ್ಪಿದ್ದಾರೆ. ಹಲ್ಗೆರಾ ಗ್ರಾಮದಲ್ಲಿ 35 ವರ್ಷದ ಕುಮಾರ್ ಹಾಗೂ 30 ವರ್ಷದ ಮುರುಗೇಶ್ ಎಂಬುವವರು ಸಿಡಿಲಿಗೆ ಬಲಿಯಾಗಿದ್ದಾರೆ. ಸಿಡಿಲಿನಿಂದಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ನಾಲ್ವರ ಪೈಕಿ ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ರಾಯಚೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಶಾರದಹಳ್ಳಿಯಲ್ಲಿ ತಂದೆ ಹಾಗೂ ಮಗ ಇಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ. ಗ್ರಾಮದಲ್ಲಿ ಜಮೀನು ಕೆಲಸಕ್ಕೆ ಹೋದಿದ್ದ ಹನುಮಂತ (48), ಭೀಮಣ್ಣ (16) ಮೃತಪಟ್ಟಿದ್ದಾರೆ. 

ಮೈಲಾಪುರ ದೇವಸ್ಥಾನದಿಂದ ಹಿಂದಿರುಗುತ್ತಿದ್ದ ಶಹಾಪುರ ನಿವಾಸಿ ಕುಮಾರ (34), ಗುರುಮಠಕಲ್ ಚಿಂತನಹಳ್ಳಿ (32), ರಾಯಚೂರು ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದ ಯುವಕ ಮೆಹಬೂಬ್ ಸಾಬ್ (19), ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಬಮ್ಮನಹಳ್ಳಿಯ ವಿದ್ಯಾರ್ಥಿ ಸತೀಶ್ ನಾರಾಯಣಪುರ (16), ಚಡಚಣ ತಾಲೂಕಿನ ಬರ್ಡೂಲು ಗ್ರಾಮದ ಪ್ರತಿಭಾ ಸಂಕ್ (9), ಪೂಜಾ ಮೇಡೆಗಾರ್ (13), ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ನೀಲಗುಂದ ಗ್ರಾಮದ ರೈತ ಉಮೇಶ ಯಲ್ಲಪ್ಪ ಹಲಗಿ (38) ಸಿಡಿಲಿಗೆ ಮೃತಪಟ್ಟವರಾಗಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುದ್ಧದ ಮೂಲಕ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ಭಾರತೀಯ ನೌಕಾಪಡೆ ಅತಿಥಿ 'ಐರಿಸ್ ದೇನಾ' ಯುದ್ಧನೌಕೆಯನ್ನು ಅಮೆರಿಕ ಹೊಡೆದುರುಳಿಸಿದೆ: ಇರಾನ್

ಇರಾನ್‌ನೊಂದಿಗಿನ ಯುದ್ಧ: ಇಸ್ರೇಲ್‌ಗೆ ಭಾರಿ ಆರ್ಥಿಕ ನಷ್ಟ, ವಾರಕ್ಕೆ $ 3 ಬಿಲಿಯನ್ ವೆಚ್ಚ!

T20 ವಿಶ್ವಕಪ್ 2026: 'ಇದೊಂದು ನಮ್ಮ ನಿಯಂತ್ರಣದಲ್ಲಿಲ್ಲ..!': ಭಾರತ ಬೌಲಿಂಗ್ ಕೋಚ್ Morne Morkel ಆತಂಕ!

T20 ವಿಶ್ವಕಪ್ 2026, 2ನೇ ಸೆಮಿಫೈನಲ್: ಪಿಚ್ ನೋಡಿ ಖುಷಿ ಪಟ್ಟ ಇಂಗ್ಲೆಂಡ್, ಭಾರತಕ್ಕೆ ಆತಂಕ! ಟಾಸ್ ಗೆದ್ದೋನೆ ಬಾಸ್

SCROLL FOR NEXT