ಬಳ್ಳಾರಿಯ ಹಂಪಿ 
ರಾಜ್ಯ

ಕರ್ನಾಟಕದ 30 ಪಾರಂಪರಿಕ ತಾಣಗಳಿಗೆ ಸ್ವಚ್ಛತೆಯ ಸ್ಪರ್ಶ!

ಏಪ್ರಿಲ್ 18ರಂದು ಅಂತಾರಾಷ್ಟ್ರೀಯ ವಿಶ್ವ ಪರಂಪರೆ ದಿನಾಚರಣೆಗೆ ಪುರಾತತ್ವಶಾಸ್ತ್ರ ...

ಬಳ್ಳಾರಿ: ಏಪ್ರಿಲ್ 18ರಂದು ಅಂತಾರಾಷ್ಟ್ರೀಯ ವಿಶ್ವ ಪರಂಪರೆ ದಿನಾಚರಣೆಗೆ ಪುರಾತತ್ವಶಾಸ್ತ್ರ ಇಲಾಖೆ 15 ದಿನಗಳ ವೈಜ್ಞಾನಿಕ ಸ್ವಚ್ಛತಾ ಕಾರ್ಯಕ್ರಮವನ್ನು ಹಂಪಿಯಲ್ಲಿ ಮತ್ತು ಬೆಂಗಳೂರಿನಲ್ಲಿ ಇಂದಿನಿಂದ ಹಮ್ಮಿಕೊಂಡಿದೆ.

ರಾಜ್ಯಾದ್ಯಂತ ಪುರಾತತ್ವ ಇಲಾಖೆ 30 ಸ್ಮಾರಕಗಳನ್ನು ಗುರುತಿಸಿದ್ದು ಅವುಗಳಲ್ಲಿ ತಲಾ 15 ಹಂಪಿ ಮತ್ತು ಬೆಂಗಳೂರು ಸುತ್ತಮುತ್ತ ಇರಲಿದೆ. ತಲೆಮಾರುಗಳಿಗೆ ಪರಂಪರೆ ಎಂಬ ಘೋಷವಾಕ್ಯದಡಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ನಮ್ಮ ರಾಜ್ಯದಲ್ಲಿರುವ ಪಾರಂಪರಿಕ ತಾಣಗಳನ್ನು ಸ್ವಚ್ಛವಾಗಿ ಮತ್ತು ಜಾಗರೂಕತೆಯಿಂದ ಇಡುವ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಈ ಪ್ರದರ್ಶನವನ್ನು ಏರ್ಪಡಿಸಲಾಗುತ್ತಿದೆ.

ಸ್ವಚ್ಛತಾ ಪಕವಾಡ ಹೆಸರಿನಲ್ಲಿ 15 ದಿನಗಳ ಕಾಲ ಈ ಕಾರ್ಯಕ್ರಮ ನಡೆಯಲಿದೆ. ಸಣ್ಣ ಹಂಪಿ ಮತ್ತು ಬೆಂಗಳೂರು ವೃತ್ತದಲ್ಲಿ ನಾವು ಸ್ಮಾರಕಗಳನ್ನು ಸ್ವಚ್ಛತೆಗೆ ಆಯ್ದುಕೊಂಡಿದ್ದೇವೆ ಎಂದು ಪುರಾತತ್ವ ಸಮೀಕ್ಷೆ ಇಲಾಖೆಯ ಸೂಪರಿಂಟೆಂಡೆಂಟ್ ಕೆ. ಮೂರ್ತೀಸ್ವರಿ ತಿಳಿಸಿದ್ದಾರೆ.

ಶ್ರೀರಂಗಪಟ್ಟಣದ ದರಿಯಾ ದೌಲತ್, ಕೇಶವ ದೇವಸ್ಥಾನ, ಬೇಲೂರು, ಹಳೆಬೀಡು, ಶ್ರವಣಬೆಳಗೊಳ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಮನಗೊಂಡನಹಳ್ಳಿ, ಸೋಮನಾಥಪುರದ ಕೇಶವ ದೇವಸ್ಥಾನ, ಚಿತ್ರದುರ್ಗದ ಕೋಟೆ, ದಾವಣಗೆರೆ ಹರಿಹರದ ಹರಿಹರೇಶ್ವರ ದೇವಸ್ಥಾನ, ಬಾಗ್ಲಿಯ ಕಲ್ಲೇಶ್ವರ ದೇವಸ್ಥಾನ, ಅವನಿಯ ರಾಮಲಿಂಗೇಶ್ವರ ದೇವಸ್ಥಾನ, ಕೋಲಾರದ ಕೋಲಾರಮ್ಮ ದೇವಸ್ಥಾನ ಮತ್ತು ಸೋಮೇಶ್ವರ ದೇವಾಲಯ, ಬಾರ್ಕೂರಿನ ಕಟ್ಟಲೆ ಬಸದಿ, ಚಂದ್ರಗುಟ್ಟಿ ಕೋಟೆ ಮತ್ತು ಶಿವಮೊಗ್ಗದ ರೇಣುಕಾ ದೇವಸ್ಥಾನ ಮತ್ತು ಬೆಂಗಳೂರಿನ ಟಿಪ್ಪು ಬೇಸಿಗೆ ಅರಮನೆಗಳನ್ನು ಸ್ವಚ್ಛತಾ ಕಾರ್ಯಕ್ರಮಕ್ಕೆ ಆರಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT