ಭಾರತೀಯ ವೈಜ್ಞಾನಿಕ ಸಂಸ್ಥೆ ಕ್ಯಾಂಪಸ್ ನಲ್ಲಿ ಜನರ ಮೋಂಬತ್ತಿ ಮತ್ತು ಭಿತ್ತಿ ಚಿತ್ರಗಳ ಪ್ರದರ್ಶನ 
ರಾಜ್ಯ

ಕತುವಾ, ಉನ್ನಾವೊ ಅತ್ಯಾಚಾರ ಪ್ರಕರಣ: ಬೆಂಗಳೂರಿಗರ ಮೌನ ಪ್ರತಿಭಟನೆ

ಕತುವಾ ಮತ್ತು ಉನ್ನಾವೊದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಕ್ಕೆ ...

ಬೆಂಗಳೂರು: ಕತುವಾ ಮತ್ತು ಉನ್ನಾವೊದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ನಗರದಾದ್ಯಂತ ನಿನ್ನೆ ಮೌನ ಪ್ರತಿಭಟನೆ ನಡೆಸಲಾಯಿತು. ಭಾರತೀಯ ವೈಜ್ಞಾನಿಕ ಸಂಸ್ಥೆಯಲ್ಲಿ ಹಲವು ವಿದ್ಯಾರ್ಥಿಗಳು, ಕಚೇರಿ ಸಿಬ್ಬಂದಿಗಳು, ಕುಟುಂಬಿಕರು ಸೇರಿ ಮೌನ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಕೋರಮಂಗಲ, ಸಿದ್ದಾಪುರ, ವೈಟ್ ಫೀಲ್ಡ್, ಕಮ್ಮನಹಳ್ಳಿ, ರಿಚರ್ಡ್ಸ್ ಪಾರ್ಕ್, ಬೆನ್ಸನ್ ಟೌನ್ ಮತ್ತು ಕೂಕ್ಸ್ ಟೌನ್ ಸುತ್ತಮುತ್ತಲ ನಿವಾಸಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿ ದೇಶಾದ್ಯಂತ ಅಪ್ರಾಪ್ತ ಬಾಲಕಿಯರು ಸೇರಿದಂತೆ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆಯುತ್ತಿರುವುದನ್ನು ತೀವ್ರವಾಗಿ ಖಂಡಿಸಿದರು.

ಜನರು ಮೌನ ಪ್ರತಿಭಟನೆ,ಮೋಂಬತ್ತಿ ಮೆರವಣಿಗೆ, ಭಿತ್ತಿಪತ್ರಗಳ ಪ್ರದರ್ಶನಗಳ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದರು. ನಿಮಗೆ ಧರ್ಮದ ಬಗ್ಗೆ ಮಾತನಾಡುವ ಧೈರ್ಯವಿಲ್ಲ, ಮಕ್ಕಳ ಮೇಲೆ ಅತ್ಯಾಚಾರ ನಡೆದ ಸ್ಥಳದಲ್ಲಿ ದೇವರಿಲ್ಲ, ಬಾಲಕಿಯನ್ನು ದೇವಸ್ಥಾನದಲ್ಲಿ ಆಕೆಯ ದೇವರಾಗಲಿ, ನಿಮ್ಮ ದೇವರಾಗಲಿ ರಕ್ಷಿಸಲಿಲ್ಲ ಮೊದಲಾದ ಘೋಷಣೆಗಳ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT