ರಾಜ್ಯ

ಹಾವೇರಿ: ಮರಕ್ಕೆ ಬಸ್ ಡಿಕ್ಕಿ, ಇಬ್ಬರು ಸಾವು, 15 ಮಂದಿಗೆ ಗಾಯ

Raghavendra Adiga
ಹಾವೇರಿ: ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಮಹಿಳಾ ಪ್ರಯಾಣಿಕರು ಸಾವನ್ನಪ್ಪಿದ್ದು 15 ಮಂದಿ ಗಾಯಗೊಡ ಘಟನೆ ಹಾವೇರಿ ಜಿಲ್ಲೆ ಹಾನಗಲ್ ನಾಲ್ಕರ ಕ್ರಾಸ್ ಬಳಿ ನಡೆದಿದೆ.
ಸೋಮವಾರ ಮುಂಜಾನೆ  5 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದ್ದು ಬೆಂಗಳೂರಿನಿಂದ ಶಿರಸಿಗೆ ತೆರಳುತ್ತಿದ್ದ ವಿಆರ್‌ಎಲ್ ಸಂಸ್ಥೆಯ ಬಸ್ ಅಪಘಾತಕ್ಕೀಡಾಗಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ಮೃತರನ್ನು ಶಿರಸಿಯ ಡಾ. ವಿಜಯಲಕ್ಷ್ಮಿ (45) ಮತ್ತು ಗೀತಾ (50)ಎಂದು ಗುರುತಿಸಿದ್ದು  ಅವಘಡದಲ್ಲಿ ಗಾಯಗೊಂಡ ಎಲ್ಲಾ 15 ಜನರನ್ನು ಹಾನಗಲ್ ಸರ್ಕಾರಿ ಆಸ್ಪತ್ರೆಗೆ ಹಾಗೂ ಶಿರಸಿ ತೋಟಗಾರರ ಸಹಕಾರಿ ಸಂಘದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದೂರವಾಣಿ ಮೂಲಕ ಮಾತನಾಡಿದ ಹಾನಗಲ್  ಪೊಲೀಸ್ ಇನ್ಸ್ ಪೆಕ್ಟರ್ ಆರ್.ಹೆಚ್. ಕಟ್ಟೀಮನಿ "ಅಪಘಾತದಲ್ಲಿ ಸಾವನ್ನಪ್ಪಿದ್ವರು, ಗಾಯಗೊಂಡವರ ವಿವರಗಳನ್ನು ಆಯಾ ಕುಟುಂಬದವರಿಗೆ ತಲುಪಿಸಲಾಗುತ್ತಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ." ಎಂದಿದ್ದಾರೆ.
ಹಾನಗಲ್  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
SCROLL FOR NEXT