ಹಾವೇರಿ: ಮರಕ್ಕೆ ಬಸ್ ಡಿಕ್ಕಿ, ಇಬ್ಬರು ಸಾವು, 15 ಮಂದಿಗೆ ಗಾಯ 
ರಾಜ್ಯ

ಹಾವೇರಿ: ಮರಕ್ಕೆ ಬಸ್ ಡಿಕ್ಕಿ, ಇಬ್ಬರು ಸಾವು, 15 ಮಂದಿಗೆ ಗಾಯ

ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಮಹಿಳಾ ಪ್ರಯಾಣಿಕರು ಸಾವನ್ನಪ್ಪಿದ್ದು 15 ಮಂದಿ ಗಾಯಗೊಡ ಘಟನೆ ಹಾವೇರಿ ಜಿಲ್ಲೆ ಹಾನಗಲ್ ನಾಲ್ಕರ ಕ್ರಾಸ್ ಬಳಿ ನಡೆದಿದೆ.

ಹಾವೇರಿ: ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಮಹಿಳಾ ಪ್ರಯಾಣಿಕರು ಸಾವನ್ನಪ್ಪಿದ್ದು 15 ಮಂದಿ ಗಾಯಗೊಡ ಘಟನೆ ಹಾವೇರಿ ಜಿಲ್ಲೆ ಹಾನಗಲ್ ನಾಲ್ಕರ ಕ್ರಾಸ್ ಬಳಿ ನಡೆದಿದೆ.
ಸೋಮವಾರ ಮುಂಜಾನೆ  5 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದ್ದು ಬೆಂಗಳೂರಿನಿಂದ ಶಿರಸಿಗೆ ತೆರಳುತ್ತಿದ್ದ ವಿಆರ್‌ಎಲ್ ಸಂಸ್ಥೆಯ ಬಸ್ ಅಪಘಾತಕ್ಕೀಡಾಗಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ಮೃತರನ್ನು ಶಿರಸಿಯ ಡಾ. ವಿಜಯಲಕ್ಷ್ಮಿ (45) ಮತ್ತು ಗೀತಾ (50)ಎಂದು ಗುರುತಿಸಿದ್ದು  ಅವಘಡದಲ್ಲಿ ಗಾಯಗೊಂಡ ಎಲ್ಲಾ 15 ಜನರನ್ನು ಹಾನಗಲ್ ಸರ್ಕಾರಿ ಆಸ್ಪತ್ರೆಗೆ ಹಾಗೂ ಶಿರಸಿ ತೋಟಗಾರರ ಸಹಕಾರಿ ಸಂಘದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದೂರವಾಣಿ ಮೂಲಕ ಮಾತನಾಡಿದ ಹಾನಗಲ್  ಪೊಲೀಸ್ ಇನ್ಸ್ ಪೆಕ್ಟರ್ ಆರ್.ಹೆಚ್. ಕಟ್ಟೀಮನಿ "ಅಪಘಾತದಲ್ಲಿ ಸಾವನ್ನಪ್ಪಿದ್ವರು, ಗಾಯಗೊಂಡವರ ವಿವರಗಳನ್ನು ಆಯಾ ಕುಟುಂಬದವರಿಗೆ ತಲುಪಿಸಲಾಗುತ್ತಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ." ಎಂದಿದ್ದಾರೆ.
ಹಾನಗಲ್  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT