ನಟ ಯಶ್ 
ರಾಜ್ಯ

ಬಾಡಿಗೆ ವಿವಾದ: 3 ತಿಂಗಳಲ್ಲಿ ಮನೆ ಖಾಲಿ ಮಾಡುವಂತೆ ನಟ ಯಶ್ ಗೆ ಕೋರ್ಟ್ ಆದೇಶ

ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ....

ಬೆಂಗಳೂರು: ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ ಮೂರು ತಿಂಗಳಲ್ಲಿ ಮನೆ ಖಾಲಿ ಮಾಡುವಂತೆ 42ಸಿಟಿ ಸಿವಿಲ್ ಕೋರ್ಟ್ ಮಂಗಳವಾರ ಆದೇಶಿಸಿದೆ.
2010ರ ಅಕ್ಟೋಬರ್ 16 ರಿಂದ ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಮನೆ ಮಾಲೀಕ ಮುನಿಪ್ರಸಾದ್ ಅವರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್, ನಟ ಯಶ್ ಅವರ ತಾಯಿ ಪುಷ್ಪಾ ಅವರಿಗೆ ಮೂರು ತಿಂಗಳಲ್ಲಿ ಮನೆ ಖಾಲಿ ಮಾಡುವಂತೆ ಮತ್ತು ಮನೆ ಬಾಡಿಗೆ ಬಾಕಿ 9 ಲಕ್ಷ 60 ಸಾವಿರ ಮನೆ ಮಾಲೀಕರಿಗೆ ಪಾವತಿಸುವಂತೆ ಹಾಗೂ ಮುಂಗಡವಾಗಿ ಪಡೆದಿದ್ದ ನಾಲ್ಕು ಲಕ್ಷ ರುಪಾಯಿಯನ್ನು ಬಾಡಿಗೆದಾರರಿಗೆ ಮರಳಿಸುವಂತೆ ಮನೆ ಮಾಲೀಕರಿಗೆ ಕೋರ್ಟ್ ಆದೇಶಿಸಿದೆ.
ಯಶ್ ತಾಯಿಯಿಂದ ನಮಗೆ 21.37 ಲಕ್ಷ ರು ಬಾಡಿಗೆ ಹಣ ಬರಬೇಕಿದೆ ಎಂದು ಮನೆ ಮಾಲೀಕರು ತಮ್ಮ ದೂರಿನಲ್ಲಿ ತಿಳಿಸಿದ್ದರು.
2010ರ ಅಕ್ಟೋಬರ್‌ನಲ್ಲಿ ಯಶ್ ಅವರ ಕುಟುಂಬಕ್ಕೆ ಮನೆಯನ್ನು 11 ತಿಂಗಳ ಅವಧಿಗೆಂದು ಭೋಗ್ಯಕ್ಕೆ ನೀಡಲಾಗಿತ್ತು. 2011ರಲ್ಲಿ ಭೋಗ್ಯದ ಅವಧಿ ಮುಗಿದ ನಂತರ ಬಾಡಿಗೆ ನೀಡಬೇಕಿತ್ತು. ಕೆಲವು ತಿಂಗಳುಗಳ ಕಾಲ ಮಾತ್ರ ಅಲ್ಪಸ್ವಲ್ಪ ಬಾಡಿಗೆ ನೀಡಿ ಆನಂತರ ಬಾಡಿಗೆಯನ್ನೂ ನಿಲ್ಲಿಸಿಬಿಟ್ಟಿದ್ದಾರೆ. ಮನೆಯನ್ನೂ ಖಾಲಿ ಮಾಡದೆ 21.37 ಲಕ್ಷ ರು. ಬಾಡಿಗೆ ಉಳಿಸಿಕೊಂಡಿದ್ದಾರೆ. ಬಾಡಿಗೆ ಕೊಡಿ ಎಂದು ಕೇಳಿದರೆ ಪ್ರಾಣ ಬೆದರಿಕೆ ಹಾಕುತ್ತಿದ್ದಾರೆ ಎಂದು ಮುನಿಪ್ರಸಾದ್ ಆರೋಪಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT