ರಾಜ್ಯ

ಕರ್ನಾಟಕ ಚುನಾವಣೆ: ಮಡಿಕೇರಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಲ್ಲಿ ಭಿನ್ನಮತ

Sumana Upadhyaya

ಮಡಿಕೇರಿ: ಪಕ್ಷದಲ್ಲಿನ ಸ್ಪರ್ಧಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ನಂತರ ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ ಮತ್ತು ಅಸಮಾಧಾನ ಭುಗಿಲೆದ್ದಿದೆ.

ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಪಂಡ ಮುತಪ್ಪ ಮತ್ತು ಭಾರತ ರಾಷ್ಟ್ರೀಯ ವ್ಯಾಪಾರ ಒಕ್ಕೂಟ ಕಾಂಗ್ರೆಸ್ (ಐಎನ್ಟಿಯುಸಿ) ಉಪಾಧ್ಯಕ್ಷ ಪಕ್ಷವನ್ನು ತೊರೆದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವುದಾಗಿ ಹೇಳಿದ್ದಾರೆ. ಇಲ್ಲಿ ಕಾಂಗ್ರೆಸ್ ಹೆಚ್.ಎಸ್.ಚಂದ್ರಮೌಳಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ವಿರಾಜಪೇಟೆ ಕ್ಷೇತ್ರಕ್ಕೆ ಎಂಎಲ್ ಸಿ ಅರುಣ್ ಮಾಚಯ್ಯ ಅವರ ಹೆಸರನ್ನು ಪಕ್ಷದ ಕಾರ್ಯಕರ್ತರು ಸ್ವಾಗತಿಸಿದ್ದರೆ, ಹೆಚ್ ಎಸ್ ಚಂದ್ರಮೌಳಿಯವರ ಹೆಸರು ಬಹುತೇಕ ಪಕ್ಷದ ಕಾರ್ಯಕರ್ತರಿಗೆ ಇಷ್ಟವಾಗಿಲ್ಲ.

ನಾನು ಸ್ವತಂತ್ರ ಅಭ್ಯರ್ಥಿಯಾಗಿ ಮಡಿಕೇರಿಯಿಂದ ಸ್ಪರ್ಧಿಸಲಿದ್ದು ಇದೇ 20ರಂದು ನಾಮಪತ್ರ ಸಲ್ಲಿಸಲಿದ್ದೇನೆ ಎಂದು ನಪಂಡ ಮುತಪ್ಪ ಹೇಳಿದ್ದಾರೆ.

SCROLL FOR NEXT