ಸಂಗ್ರಹ ಚಿತ್ರ 
ರಾಜ್ಯ

ನಗದು ಕೊರತೆ: ಆಕ್ರೋಶಿತ ನಾಗರಿಕರಿಂದ ಎಟಿಎಂ ಅಂತ್ಯಕ್ರಿಯೆ

ದೇಶದಲ್ಲಿ ದಿಢೀರ್ ಉಂಟಾಗಿರುವ ನಗದು ಕೊರತೆಯಿಂದ ಬೇಸತ್ತಿರುವ ರಾಜ್ಯದ ಜನತೆ ಗುರುವಾರ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದು, ಎಟಿಎಂ ಯಂತ್ರಗಳ ಅಂತ್ಯಕ್ರಿಯೆ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಬುರಗಿ: ದೇಶದಲ್ಲಿ ದಿಢೀರ್ ಉಂಟಾಗಿರುವ ನಗದು ಕೊರತೆಯಿಂದ ಬೇಸತ್ತಿರುವ ರಾಜ್ಯದ ಜನತೆ ಗುರುವಾರ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದು, ಎಟಿಎಂ ಯಂತ್ರಗಳ ಅಂತ್ಯಕ್ರಿಯೆ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಹಿಂದ ಚಿಂತಕರ ವೇದಿಕೆ ಕಾರ್ಯಕರ್ತರ ತಂಡ ಇಂದು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿ, ದೇಶದ ಅತೀ ದೊಡ್ಡ ಬ್ಯಾಂಕಿಂಗ್ ಸಂಸ್ಥೆ ಎಸ್ ಬಿಐನ ಎಟಿಎಂ ಕೇಂದ್ರದ ಮುಂದೆ ಎಟಿಎಂ ತಿಥಿ ಊಟ ಕಾರ್ಯಕ್ರಮ ಆಯೋಜನೆ ಮಾಡಿತ್ತು.  ಸಂಘಟನೆ ಅಧ್ಯಕ್ಷ ಸಾಯಿಬಣ್ಣ ಜಮಾದಾರ್ ಅವರು ಕಾರ್ಯಕ್ರಮದ ನೇತೃತ್ವ ವಹಿಸಿ, ನಗದು ಕೊರತೆ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲೇ ತಿಥಿ ಊಟ ಸಿದ್ಧಪಡಿಸಿ ಕಾರ್ಯಕರ್ತರು ಸೇವಿಸಿದರು. 
ಇದಕ್ಕೂ ಮೊದಲು ಎಟಿಎಂ ಯಂತ್ರದ ಮಾದರಿಗೆ ಹೂವಿನ ಅಲಂಕಾರ ಮಾಡಿ, ಎಟಿಎಂ ಯಂತ್ರದ ಶವಯಾತ್ರೆ ಕೂಡ ನಡೆಸಿದ್ದರು. ಇದೇ ವೇಳೆ ಎಸ್ ಬಿಐ ಬ್ಯಾಂಕ್ ನ ಪ್ರಾಂತೀಯ ಮ್ಯಾನೇಜರ್ ಗೆ ಪ್ರತಿಭಟನಾಕಾರರು ನಗದು ಕೊರತೆ ಸಮಸ್ಯೆ ಕುರಿತ ಮನವಿ ಸಲ್ಲಿಕೆ ಮಾಡಿದರು. ಅಲ್ಲದೆ ಈ ಮನವಿಯನ್ನು ವಿತ್ತ ಸಚಿವಾಲಯಕ್ಕೂ ತಲುಪಿಸುವಂತೆ ಹೇಳಿದರು. 
ಈ ವೇಳೆ ಮಾತನಾಡಿದ ಅಹಿಂದ ಚಿಂತಕರ ವೇದಿಕೆ ಅಧ್ಯಕ್ಷ ಸಾಯಿಬಣ್ಣ ಜಮಾದಾರ್ ಅವರು, ರಾಜ್ಯದಲ್ಲಿರುವ ಬಹುತೇಕ ಎಟಿಎಂಗಳ ನಗದು ರಹಿತವಾಗಿದ್ದು, ಇದರಿಂದ ಜನ ಸಾಮಾನ್ಯರು ಪರದಾಡುವಂತಾಗಿದೆ. ನಗದು ಇರುವ ಕೆಲ ಎಟಿಎಂಗಳಲ್ಲಿ 10 ಸಾವಿರ ರೂ.ಗಳಿಗಿಂತೆ ಹೆತ್ತು ಹಣ ವಿತ್ ಡ್ರಾ ಮಾಡಲು ಅನುಮತಿ ನೀಡುತ್ತಿಲ್ಲ. ಕೂಡಲೇ ಸಮಸ್ಯೆ ಇತ್ಯರ್ಥ ಪಡಿಸಬೇಕು. ಇಲ್ಲವಾದಲ್ಲ ತಮ್ಮ ವೇದಿಕೆಯ ಪ್ರತಿಭಟನೆ ಉಗ್ರ ಸ್ವರೂಪ ಪಡೆಯಸಲಿದೆ ಎಂದು ಅವರು ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT