ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮೊಬೈಲ್ ಗಾಗಿ ಯುವಕನ ಕೊಲೆ, ಇಬ್ಬರ ಬಂಧನ

ಯುವಕನೊಬ್ಬನ ಮೊಬೈಲ್ ಸೇರಿ ಇತರೆ ವಸ್ತುಗಳನ್ನು ದೋಚಿದ್ದಲ್ಲದೆ ಅವನನ್ನು ಹತ್ಯೆ ನಡೆಸಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಬ್ಯಾಟರಾಯನಪುರ ಪೋಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಯುವಕನೊಬ್ಬನ ಮೊಬೈಲ್ ದೋಚಿದ್ದಲ್ಲದೆ ಅವನನ್ನು ಹತ್ಯೆ ನಡೆಸಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಬ್ಯಾಟರಾಯನಪುರ ಪೋಲೀಸರು ಬಂಧಿಸಿದ್ದಾರೆ.
ಸದ್ದಾಂ ಹುಸೇನ್ ಅಲಿಯಾಸ್ ಸಿದ್ದಕಿ ಅಲಿಯಾಸ್ ತೋಳ((20), ಮಹಮದ್ ಶಫಿ (19) ಎನ್ನುವವರನ್ನು ಬಂಧಿಸಲಾಗಿದ್ದು ಬಂಧಿತರು ಚಂದ್ರಾ ಲೇಔಟ್ ನ ಗಂಗೊಂಡನಹಳ್ಳಿ ನಿವಾಸಿಗಳೆನ್ನಲಾಗಿದೆ.
ಆರೋಪಿಗಳು ರಾಹುಲ್ ಅಲಿಯಾಸ್ ಸಿದ್ದೇಶ್ (18) ಎನ್ನುವವನ ಮೇಲೆರಗಿ ಆತನ ಮೊಬೈಲ್ ಅನ್ನು ದೋಚಿದ್ದಾರೆ. ಏಪ್ರಿಲ್ 12ರ ರಾತ್ರಿ ಈ ಘಟನೆ ನಡೆದಿದ್ದು ಹತ್ಯೆಗೀಡಾದ ರಾಹುಲ್ ಮಲ್ಲತ್ ಹಳ್ಳಿಯ ಚಿತ್ರಮಂದಿರದಲ್ಲಿ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿದ್ದನು. ಈತ ದೀಪಾಂಜಲಿನಗರ ನಿವಾಸಿಯಾಗಿದ್ದನೆಂದು ಪೋಲೀಸರು ಮಾಹಿತಿ ನೀಡಿದ್ದಾರೆ.
ಅಂದು ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ರಾಹುಲ್ ನಾಯಂಡನಹಳ್ಳಿ ಮೆಟ್ರೋ ನಿಲ್ದಾಣ ಬಳಿಯ ಕ್ವಾಲಿಟಿ ಬಿಸ್ಕೆಟ್ ಫ್ಯಾಕ್ಟರಿ ಸಮೀಪ ಬಂದಾಗ ರಾತ್ರಿ 11ರ ಸುಮಾರಿಗೆ ಆತನ ಮೇಲೆ ದಾಳಿ ನಡೆದಿದೆ. ದರೋಡೆಕೋರರು ಅವನ ಬಳಿಯಿದ್ದ ಮೊಬೈಲ್ ಅನ್ನು ಲೂಟಿ ಮಾಡಿದ್ದಾರೆ ಎಂದು ಪೋಲೀಸರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT