ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮೊಬೈಲ್ ಗಾಗಿ ಯುವಕನ ಕೊಲೆ, ಇಬ್ಬರ ಬಂಧನ

ಯುವಕನೊಬ್ಬನ ಮೊಬೈಲ್ ಸೇರಿ ಇತರೆ ವಸ್ತುಗಳನ್ನು ದೋಚಿದ್ದಲ್ಲದೆ ಅವನನ್ನು ಹತ್ಯೆ ನಡೆಸಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಬ್ಯಾಟರಾಯನಪುರ ಪೋಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಯುವಕನೊಬ್ಬನ ಮೊಬೈಲ್ ದೋಚಿದ್ದಲ್ಲದೆ ಅವನನ್ನು ಹತ್ಯೆ ನಡೆಸಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಬ್ಯಾಟರಾಯನಪುರ ಪೋಲೀಸರು ಬಂಧಿಸಿದ್ದಾರೆ.
ಸದ್ದಾಂ ಹುಸೇನ್ ಅಲಿಯಾಸ್ ಸಿದ್ದಕಿ ಅಲಿಯಾಸ್ ತೋಳ((20), ಮಹಮದ್ ಶಫಿ (19) ಎನ್ನುವವರನ್ನು ಬಂಧಿಸಲಾಗಿದ್ದು ಬಂಧಿತರು ಚಂದ್ರಾ ಲೇಔಟ್ ನ ಗಂಗೊಂಡನಹಳ್ಳಿ ನಿವಾಸಿಗಳೆನ್ನಲಾಗಿದೆ.
ಆರೋಪಿಗಳು ರಾಹುಲ್ ಅಲಿಯಾಸ್ ಸಿದ್ದೇಶ್ (18) ಎನ್ನುವವನ ಮೇಲೆರಗಿ ಆತನ ಮೊಬೈಲ್ ಅನ್ನು ದೋಚಿದ್ದಾರೆ. ಏಪ್ರಿಲ್ 12ರ ರಾತ್ರಿ ಈ ಘಟನೆ ನಡೆದಿದ್ದು ಹತ್ಯೆಗೀಡಾದ ರಾಹುಲ್ ಮಲ್ಲತ್ ಹಳ್ಳಿಯ ಚಿತ್ರಮಂದಿರದಲ್ಲಿ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿದ್ದನು. ಈತ ದೀಪಾಂಜಲಿನಗರ ನಿವಾಸಿಯಾಗಿದ್ದನೆಂದು ಪೋಲೀಸರು ಮಾಹಿತಿ ನೀಡಿದ್ದಾರೆ.
ಅಂದು ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ರಾಹುಲ್ ನಾಯಂಡನಹಳ್ಳಿ ಮೆಟ್ರೋ ನಿಲ್ದಾಣ ಬಳಿಯ ಕ್ವಾಲಿಟಿ ಬಿಸ್ಕೆಟ್ ಫ್ಯಾಕ್ಟರಿ ಸಮೀಪ ಬಂದಾಗ ರಾತ್ರಿ 11ರ ಸುಮಾರಿಗೆ ಆತನ ಮೇಲೆ ದಾಳಿ ನಡೆದಿದೆ. ದರೋಡೆಕೋರರು ಅವನ ಬಳಿಯಿದ್ದ ಮೊಬೈಲ್ ಅನ್ನು ಲೂಟಿ ಮಾಡಿದ್ದಾರೆ ಎಂದು ಪೋಲೀಸರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ

'Digital arrest' ವಂಚನೆ ತಡೆಗೆ ಸಿಮ್ ಕಾರ್ಡ್ ವಿತರಣೆ ಬಿಗಿಗೊಳಿಸಲಿದೆ ಸರ್ಕಾರ; ಇನ್ಮುಂದೆ ಖರೀದಿಗೆ ನಿರ್ಬಂಧ, ರಿಯಲ್ ಟೈಮ್ ವೆರಿಫಿಕೇಷನ್ ಕಡ್ಡಾಯ!

ದೆಹಲಿಯಲ್ಲಿ ಸಿಎನ್‌ಜಿ ಸಿಲಿಂಡರ್ ಸ್ಫೋಟ: ಒಬ್ಬರ ಸಾವು, ಆರು ಮಂದಿಗೆ ಗಂಭೀರ ಗಾಯ!

ಹಗಲು ರಾತ್ರಿ ನೀರಿನಲ್ಲೇ ವಾಸ: ಇಕ್ಬಾಲ್ ನೆರವಿಗೆ ಅನಂತ್ ಅಂಬಾನಿ, ಮುಂಬೈಗೆ ಏರ್‌ಲಿಫ್ಟ್!