ಸಾಂದರ್ಭಿಕ ಚಿತ್ರ 
ರಾಜ್ಯ

ಸಿಇಟಿ: ರಸಾಯನಶಾಸ್ತ್ರ ವಿಷಯದಲ್ಲಿ ಎರಡು ತಪ್ಪು ಪ್ರಶ್ನೆಗಳನ್ನು ಕಂಡುಹಿಡಿದ ತಜ್ಞರು

ಎಂಜಿನಿಯರಿಂಗ್ ಮತ್ತಿತರ ವೃತ್ತಿ ಶಿಕ್ಷಣ ಕೋರ್ಸ್ ಗಳಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ ಪರೀಕ್ಷೆಯಲ್ಲಿ ಕೆಲ ವಿಷಯಗಳ ಪತ್ರಿಕೆಗಳಲ್ಲಿ ತಪ್ಪುಗಳನ್ನು ತಜ್ಞರು ಕಂಡುಹಿಡಿದಿದ್ದಾರೆ.

ಬೆಂಗಳೂರು :  ಎಂಜಿನಿಯರಿಂಗ್ ಮತ್ತಿತರ ವೃತ್ತಿ ಶಿಕ್ಷಣ ಕೋರ್ಸ್ ಗಳಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ ಪರೀಕ್ಷೆಯಲ್ಲಿ ಕೆಲ ವಿಷಯಗಳ ಪತ್ರಿಕೆಗಳಲ್ಲಿ ತಪ್ಪುಗಳನ್ನು ತಜ್ಞರು ಕಂಡುಹಿಡಿದಿದ್ದಾರೆ.

 ಜೀವಶಾಸ್ತ್ರ, ಗಣಿತಶಾಸ್ತ್ರದ ನಂತರ ನಿನ್ನೆ ನಡೆದ ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆಯಲ್ಲೂ   ಎರಡು ತಪ್ಪು ಪ್ರಶ್ನೆಯನ್ನು  ತಜ್ಞರು  ಪತ್ತೆ ಹಚ್ಚಿದ್ದಾರೆ. ಆದಾಗ್ಯೂ, ಈ ಸಂಬಂಧ ವಿದ್ಯಾರ್ಥಿಗಳು ಯಾವುದೇ ಆಕ್ಷೇಪ ಎತ್ತಿಲ್ಲ.

 ಎನ್ ಸಿ ಇ ಆರ್ ಟಿ ಪಠ್ಯಕ್ರಮದಂತೆ  ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆ ನಂ-9 ಎಫ್ ಆವೃತ್ತಿಯನ್ನು ಒಪ್ಪಲು ಸಾಧ್ಯವಿಲ್ಲ . ಪ್ರಶ್ನೆ ಸಂಖ್ಯೆ 49ರ ಎಫ್ ಆವೃತ್ತಿಯೂ ಸರಿಯಾಗಿ ಹೊಂದಾಣಿಕೆಯಾಗುವುದಿಲ್ಲ  ಎಂದು ಕಾಲೇಜೊಂದರ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋಫೆಸರ್ ಸಂದೀಪ್ ಕುಮಾರ್ ತಿಳಿಸಿದ್ದಾರೆ.

 ಈ ಸಂಬಂಧ ಪರಿಶೀಲನೆ ನಡೆಸಲು ತಜ್ಞರ ಸಮಿತಿಯೊಂದನ್ನು ರಚಿಸಲಾಗುವುದು ನಂತರ ಪರಿಹಾರ ಅಂಕ ನೀಡಲು ತೀರ್ಮಾನಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

 ಎರಡು ದಿನಗಳ ನಂತರ ಕೀ ಅಂಕಗಳನ್ನು ಪ್ರಕಟಿಸಲಾಗುವುದು, ಆಕ್ಷೇಪಣೆಗಳಿದ್ದಲ್ಲಿ ವಿದ್ಯಾರ್ಥಿಗಳು ಸಲ್ಲಿಸಬಹುದು, ಎಲ್ಲಾ ಆಕ್ಷೇಪಣೆಗಳನ್ನು ತಜ್ಞರ ಸಮಿತಿಗೆ ಕಳುಹಿಸಲಾಗುವುದು, ನಂತರ ತಜ್ಞರ ಸಮಿತಿ ಪರಿಹಾರ ಅಂಕ ನೀಡುವ ಸಂಬಂಧ ತೀರ್ಮಾನ ಕೈಗೊಳ್ಳಲಿದೆ ಎಂದು  ಕೆಇಎ  ಅಧಿಕಾರಿಗಳು ತಿಳಿಸಿದ್ದಾರೆ.

 ಏ. 18 ರಂದು ಜೀವಶಾಸ್ತ್ರ ಮತ್ತು ಗಣಿತಶಾಸ್ತ್ರ ಹಾಗೂ ಏ.19 ರಂದು ರಸಾಯನಶಾಸ್ತ್ರ ವಿಷಯದ ಬಗ್ಗೆ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT