ಸಾಂದರ್ಭಿಕ ಚಿತ್ರ 
ರಾಜ್ಯ

ಉಡುಪಿ: ವಯೋವೃದ್ಧರ ಆಧಾರ್ ಸಮಸ್ಯೆಗೆ ಪ್ರಧಾನ ಮಂತ್ರಿ ಕಚೇರಿ ಮಧ್ಯಪ್ರವೇಶದ ನಂತರ ಪರಿಹಾರ

ತನ್ನ ಆಧಾರ್ ಕಾರ್ಡಿನಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲು ವಿವಿಧ ಕಚೇರಿಗೆ ಅಲೆದ ..

ಉಡುಪಿ: ತನ್ನ ಆಧಾರ್ ಕಾರ್ಡಿನಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲು ವಿವಿಧ ಕಚೇರಿಗೆ ಅಲೆದ ಪಡುಬಿದ್ರಿಯ ಹೆಜಮಾಡಿಯ ಹಿರಿಯ ನಾಗರಿಕರೊಬ್ಬರು ಕೊನೆಗೂ ಬೇಸತ್ತು ಪ್ರಧಾನಿ ಕಚೇರಿಗೆ ಪತ್ರ ಬರೆದಿದ್ದಾರೆ. ಅವರು ಬರೆದ ಪತ್ರಕ್ಕೆ ಪ್ರಧಾನಿ ಕಚೇರಿಯಿಂದ ಸ್ಪಂದನೆ ಸಿಕ್ಕಿದ್ದು ಇದೀಗ ಬದಲಾವಣೆಯ ಆಧಾರ್ ಕಾರ್ಡನ್ನು ಪಡೆದುಕೊಂಡಿದ್ದಾರೆ.

ಮಹಾರಾಷ್ಟ್ರ ರಾಜ್ಯ ವಿದ್ಯುಚ್ಛಕ್ತಿ ನಿಗಮದ ನಿವೃತ್ತ ನೌಕರ ಮೋಹನ್ ಕೆ ಸುವರ್ಣ, ಅನೇಕ ವರ್ಷಗಳ ಕಾಲ ಮುಂಬೈಯಲ್ಲಿ ನೆಲೆಸಿದ್ದರು. ಅವರು ಅಲ್ಲಿನ ವಿಳಾಸದಲ್ಲಿ ಆಧಾರ್ ಕಾರ್ಡು ಮಾಡಿಸಿಕೊಂಡಿದ್ದರು. ಐದು ವರ್ಷಗಳ ಹಿಂದೆ ಹೆಜಮಾಡಿಗೆ ಬಂದು ನೆಲೆಸಿದರು. ಹೆಜಮಾಡಿಯ ವಿಳಾಸಕ್ಕೆ ಆಧಾರ್ ಕಾರ್ಡಿನ ವಿಳಾಸ ಬದಲಿಸಿಕೊಳ್ಳಬೇಕಾಗಿತ್ತು.

ಇದಕ್ಕಾಗಿ ಅನೇಕ ಕಚೇರಿಗಳಿಗೆ ಹೋಗಿ ವಿಚಾರಿಸಿದರೂ ಪ್ರಯೋಜನವಾಗಲಿಲ್ಲ. ಕಾಪು ಹತ್ತಿರ ನೆಮ್ಮಾಡಿ ಕೇಂದ್ರ ಮತ್ತು ಉಡುಪಿಯ ಬನ್ನಾಜೆಗೆ ಸಹ ಭೇಟಿ ನೀಡಿ ಸಹಾಯ ಕೋರಿದ್ದರು. ಆದರೆ ಯಾರೂ ವಿಳಾಸ ಬದಲಾವಣೆಗೆ ಸಹಾಯ ಮಾಡಿರಲಿಲ್ಲ. ಕಟ್ಟಕಡೆಯದಾಗಿ ಪ್ರಧಾನಿ ಕಚೇರಿಗೆ ಪತ್ರ ಬರೆದರು. ಪ್ರಧಾನ ಮಂತ್ರಿ ಕಚೇರಿ ಮೋಹನ್ ಅವರ ಸಮಸ್ಯೆಯನ್ನು ಪರಿಶೀಲಿಸಿತು. ಕೊನೆಗೂ ಮೋಹನ್ ಅವರಿದ್ದ ಮನೆಬಾಗಿಲಿಗೆ ಬದಲಾವಣೆಯಾದ ವಿಳಾಸಕ್ಕೆ ಆಧಾರ್ ಕಾರ್ಡು ಬಂದು ತಲುಪಿತು. ಕಳೆದ ವರ್ಷ ಸೆಪ್ಟೆಂಬರ್ 12ಕ್ಕೆ ಮೋಹನ್ ಪ್ರಧಾನ ಮಂತ್ರಿ ಕಚೇರಿಗೆ ಪತ್ರ ಬರೆದಿದ್ದರು. ಕೇವಲ 10 ದಿವಸಗಳಲ್ಲಿ ಅವರಿಗೆ ಪ್ರತಿಕ್ರಿಯೆ ಬಂದಿತು.

ಆಧಾರ್ ಕಾರ್ಡಿನಲ್ಲಿ ವಿಳಾಸ ಬದಲಾವಣೆಗೆ ಇಷ್ಟೊಂದು ಕಷ್ಟವೇಕಾಯಿತು ಎಂದು ಕೇಳಿದರೆ ತಮಗೆ ಕಂಪ್ಯೂಟರ್ ಬಳಸಲು ಗೊತ್ತಿಲ್ಲ ಹೀಗಾಗಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಗೊತ್ತಿಲ್ಲದ ಕಾರಣ ತೊಂದರೆಯಾಯಿತು ಎನ್ನುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಹಾರ್ಮುಜ್ ಮತ್ತೆಂದೂ ಹಿಂದಿನ ಸ್ಥಿತಿಗೆ ಮರಳಲ್ಲ, ನೆತನ್ಯಾಹು ಮಾತು ಕೇಳಿದರೆ ಹೊತ್ತಿ ಉರಿಯುತ್ತೀರಿ; ಅಮೆರಿಕಾಗೆ ಇರಾನ್ ಖಡಕ್ ಎಚ್ಚರಿಕೆ

ಟ್ರಂಪ್ ವಾರ್ನಿಂಗ್ ಬೆನ್ನಲ್ಲೇ ವಸತಿ ಕಟ್ಟಡಕ್ಕೆ ವಾಯುದಾಳಿ: ಇರಾನ್ ನಲ್ಲಿ 13 ಮಂದಿ ಸಾವು!

“Tuesday, 8:00 P.M. Eastern Time"!: ಇರಾನ್'ಗೆ ಮತ್ತೊಂದು ಎಚ್ಚರಿಕೆ ಕೊಟ್ಟ ಟ್ರಂಪ್, ಸರ್ವನಾಶದ ಸುಳಿವು..!

ಅಮೆರಿಕಾ–ಇರಾನ್ ನಡುವೆ 45 ದಿನಗಳ ಕದನ ವಿರಾಮಕ್ಕೆ ಯತ್ನ: ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್..?

​ಟ್ರಂಪ್ ಇರುವಾಗಲೇ ಶ್ವೇತಭವನದ ಸಮೀಪ ಗುಂಡಿನ ದಾಳಿ: ಕೆಲಕಾಲ ಆತಂಕ ಸೃಷ್ಟಿ

SCROLL FOR NEXT