ವೋಟರ್ ಐಡಿ ಮಾದರಿಯಲ್ಲಿ ಮದುವೆಯ ಆಮಂತ್ರಣ: ಮತದಾನ ಜಾಗೃತಿಗಾಗಿ ವಿಶಿಷ್ಟ ಕಾರ್ಯ 
ರಾಜ್ಯ

ವೋಟರ್ ಐಡಿ ಮಾದರಿಯಲ್ಲಿ ಮದುವೆಯ ಆಮಂತ್ರಣ: ಮತದಾನ ಜಾಗೃತಿಗಾಗಿ ವಿಶಿಷ್ಟ ಕಾರ್ಯ

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸಲು ಚುನಾವಣಾ ಆಯೋಗ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಆದರೆ, ಹಾವೇರಿಯಲ್ಲೊಬ್ಬರು ಮತದಾನದ ಅರಿವು ಮೂಡಿಸುವ ಸಲುವಾಗಿ...

ಹಾವೇರಿ: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸಲು ಚುನಾವಣಾ ಆಯೋಗ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಆದರೆ, ಹಾವೇರಿಯಲ್ಲೊಬ್ಬರು ಮತದಾನದ ಅರಿವು ಮೂಡಿಸುವ ಸಲುವಾಗಿ ತಮ್ಮ ಮದುವೆಯ ಆಮಂತ್ರಣ ಪತ್ರಿಕೆಯನ್ನೇ ವೋಟರ್ ಐಡಿ ಮಾದರಿಯಲ್ಲಿ ಮುದ್ರಣ ಮಾಡಿಸಿದ್ದಾರೆ. 
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಉಪ್ಪಣಸಿ ಗ್ರಾಮದಲ್ಲಿ ಮದುವೆ ಆಗುತ್ತಿರುವ ಜೋಡಿಗಳು ತಮ್ಮ ಮದುವೆಯ ಆಮಂತ್ರಣ ಪತ್ರಿಕೆಯನ್ನು ವೋಟರ್ ಐಡಿ ಮಾದರಿಯಲ್ಲಿ ಮುದ್ರಣ ಮಾಡಿಸಿದ್ದಾರೆ. 
ಸಿದ್ದಪ್ಪ ಜ್ಯೋತಿ ಎಂಬುವವರನ್ನು ಇದೇ ಏ.27 ರಂದು ಮದುವೆಯಾಗಲಿದ್ದಾರೆ. ಮದುವೆಯ ಆಮಂತ್ರಣ ಪತ್ರಿಕೆಯನ್ನು ವೋಟರ್ ಐಡಿ ಮಾದರಿಯಲ್ಲಿ ಮಾಡಿಸಿದ್ದಾರೆ. ಈ ಮೂಲಕ ಮತದಾನ ಪ್ರಮಾಣ ಹೆಚ್ಚಿಸುವುದರ ಜೊತೆಗೆ ಹೊಸ ಟ್ರೆಂಡ್ ವೊಂದನ್ನು ಹುಟ್ಟು ಹಾಕಿದ್ದಾರೆ. 
ವೋಟರ್ ಐಟಿ ಮಾದರಿಯಲ್ಲಿ ಮುದ್ರಿಸಿರುವ ಆಮಂತ್ರಣ ಪತ್ರಿಕೆಯಲ್ಲಿ ದೊಡ್ಡಚಿಕ್ಕಣ್ಣನವರ ಬಂಧುಗಲ ಮದುವೆಯ ಸಂಭ್ರಮ ಎಂಬ ತಲೆ ಬರಹ ಹಾಕಿದ್ದು, ಎಸ್'ಜೆಎಂಆರ್'ಜಿ 27042018 ಎಂದು ವೋಟರ್ ಐಡಿ ಕಾರ್ಡ್ ನಂಬರ್ ಹಾಕಿದ್ದಾರೆ. ಇದರ ಅರ್ಧ ಸಿದ್ದಪ್ಪ-ಜ್ಯೋತಿ ವಿವಾಹ 27-4-2018 ಎಂಬ ಅರ್ಥವನ್ನು ಕೊಡುತ್ತದೆ. 
ಕೆಳಗೆ ಮತದಾರರ ಹೆಸರು ಬರುವ ಸ್ಥಳದಲ್ಲಿ ಮಧುಮಕ್ಕಳ ಹೆಸರು ಎಂದು ಹಾಕಿ ಚಿ.ಸಿದ್ದಪ್ಪ ಮತ್ತು ಚಿ.ಕು.ಸೌ.ಜ್ಯೋತಿ ಎಂದು ಮುದ್ರಿಸಿದ್ದಾರೆ. ಜನ್ಮ ದಿನಾಂಕದ ಬದಲಿಗೆ ಮದುವೆ ದಿನಾಂಕ ಎಂದು ಮುದ್ರಿಸಿ, 27-4-2018, ಸಮಯ 12.30 ಎಂದು ನಮೂದಿಸಿದ್ದಾರೆ. 
ಮದುವೆ ನಡೆಯುವ ಸ್ಥಳ ಹಾಗೂ ಕುಟುಂಬದ ಹೆಸರು ಮತ್ತು ತಮ್ಮ ಆಗಮನಾಭಿಲಾಷಿಗಳು ಎಂದು ನಮೂದಿಸಿದ್ದಾರೆ. ಇದಲ್ಲದೆ, ಸಂದೇಶವನ್ನೂ ನೀಡಿರುವ ಜೋಡಿಗಳು, ಜೀವ ಉಳಿಸಲು ರಕ್ತದಾನ, ದೇಶ ಕಟ್ಟಲು ಮತದಾನ. ಮತದಾನ ಮಹಾದಾನ, ಭವಿಷ್ಯದ ರಾಷ್ಟ್ರ ನಿರ್ಮಾಣಕ್ಕೆ ಕಾರಣ. ಮತವೆಂಬ ಅಸ್ತ್ರ ಬಳಸಿ, ಪ್ರಾಮಾಣಿಕರನ್ನು ಆರಿಸುವ ಪ್ರಭುದ್ಧರು ನಾವು. ಮದುವೆಗೆ ತಪ್ಪದೇ ಬನ್ನಿ, ಮತದಾನ ಕಡ್ಡಾಯವಾಗಿ ಮಾಡಿ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT