ಗೌರಿ ಲಂಕೇಶ್ 
ರಾಜ್ಯ

ಗೌರಿ ಲಂಕೇಶ್ ಕೇಸ್: ಕೊನೆ ಕ್ಷಣದಲ್ಲಿ ಮಂಪರು ಪರೀಕ್ಷೆ ನಿರಾಕರಿಸಿದ ಆರೋಪಿ ನವೀನ್ ಕುಮಾರ್

ಆರೋಪಿ ಎನ್ನಲಾಗಿರುವ ಕೆ.ಟಿ.ನವೀನ್‌ಕುಮಾರ್‌ ಮಂಪರು ಪರೀಕ್ಷೆಗೆ ಒಳಗಾಗಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ತಿರುವು ಪಡೆದುಕೊಂಡಿದೆ. ...

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ಹಿನ್ನಡೆಯಾಗಿದೆ. 
ಆರೋಪಿ ಎನ್ನಲಾಗಿರುವ ಕೆ.ಟಿ.ನವೀನ್‌ಕುಮಾರ್‌ ಮಂಪರು ಪರೀಕ್ಷೆಗೆ ಒಳಗಾಗಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ತಿರುವು ಪಡೆದುಕೊಂಡಿದೆ. 
ಇತ್ತೀಚೆಗೆ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ಮಂಪರು ಪರೀಕ್ಷೆ ನಡೆಸಲು ಎಸ್‌ಐಟಿ ಅಧಿಕಾರಿಗಳು ಕೋರಿದ್ದರು. ನವೀನ್‌ಕುಮಾರ್‌ ಕೂಡ ಮಂಪರು ಪರೀಕ್ಷೆಗೆ ನ್ಯಾಯಾಲಯದಲ್ಲೇ ಒಪ್ಪಿಗೆ ಸೂಚಿಸಿದ್ದ. ಮಂಪರು ಪರೀಕ್ಷೆ ನಡೆಸಲು ಎಸ್‌ಐಟಿ ಅಧಿಕಾರಿಗಳು ಏ.15ರಂದು ಆತನನ್ನು ಗುಜರಾತ್‌ನಲ್ಲಿನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕರೆದುಕೊಂಡು ಹೋಗಿದ್ದರು. ಆದರೆ, ಇದೀಗ ಆತ ಮಂಪರು ಪರೀಕ್ಷೆಗೆ ಒಪ್ಪದಿರುವುದರಿಂದ ಬೆಂಗಳೂರಿಗೆ ವಾಪಸ್‌ ಕರೆತರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಮಂಪರು ಪರೀಕ್ಷೆಯಲ್ಲಿ ಹೊಸ ಅಂಶಗಳು ಬೆಳಕಿಗೆ ಬರುವ ನಿರೀಕ್ಷೆ ಇತ್ತು. ಆದರೆ ನವೀನ್‌ಕುಮಾರ್‌ ಪರೀಕ್ಷೆ ಬೇಡ ಎಂದು ಹೇಳುವುದರ ಜತೆಗೆ ಲಿಖಿತ ಹೇಳಿಕೆಯನ್ನೂ ನೀಡಿದ್ದಾನೆ. ಆರೋಪಿಯ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಪರೀಕ್ಷೆಯ ನಿರ್ಧಾರವನ್ನು ಕೈಬಿಟ್ಟು ವಾಪಸ್‌ ಕರೆದು ಕೊಂಡು ಬರಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

ನಾವು ಬಿಟ್ಟರು ಧರ್ಮ, ಜಾತಿ ನಮ್ಮನ್ನು ಬಿಡುವುದಿಲ್ಲ: ಒಕ್ಕಲಿಗನಾಗಿ ಹುಟ್ಟಿದ್ದೇನೆ; ಅಶೋಕಣ್ಣನಿಗೆ ಬ್ಯಾಡ್ಜ್ ಕಳಿಸುತ್ತೇನೆ ಹಾಕಿಕೊಳ್ಳಲಿ; DKS

ಅಮೆರಿಕ ಶಕ್ತಿ ಕೇಂದ್ರ ಶ್ವೇತಭವನ ಬಳಿ ಇಬ್ಬರು ಯುಎಸ್ ರಾಷ್ಟ್ರೀಯ ಗಾರ್ಡ್ ಗಳ ಮೇಲೆ ಗುಂಡಿನ ದಾಳಿ: ಶಂಕಿತನ ಗುರುತು ಪತ್ತೆ

SCROLL FOR NEXT