ಕೊಪ್ಪಳದಲ್ಲಿ ಹೊತ್ತಿಉರಿದ ಬಸ್: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ಅನಾಹುತ 
ರಾಜ್ಯ

ಕೊಪ್ಪಳದಲ್ಲಿ ಹೊತ್ತಿ ಉರಿದ ಬಸ್: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ಅನಾಹುತ

ಶನಿವಾರ ಬೆಳ್ಳಂಬೆಳಿಗ್ಗೆ ಸಂಭವಿಸಬೇಕಿದ್ದ ಭಾರೀ ದುರಂತವೊಂದು ಚಾಲಕನ ಸಮಯಪ್ರಜ್ಞೆಯಿಂದ ಅದೃಷ್ಟವಶಾತ್ ತಪ್ಪಿದೆ...

ಕೊಪ್ಪಳ: ಶನಿವಾರ ಬೆಳ್ಳಂಬೆಳಿಗ್ಗೆ ಸಂಭವಿಸಬೇಕಿದ್ದ ಭಾರೀ ದುರಂತವೊಂದು ಚಾಲಕನ ಸಮಯಪ್ರಜ್ಞೆಯಿಂದ ಅದೃಷ್ಟವಶಾತ್ ತಪ್ಪಿದೆ. 
ಖಾಸಗಿ ಬಸ್ ವೊಂದು ಬೆಂಗಳೂರಿನಿಂದ ವಿಜಯಪುರಕ್ಕೆ ತೆರಳುತ್ತಿತ್ತು. ಯಲಬುರ್ಗಾ ತಾಲೂಗಿನ ಗುನ್ನಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 50ರ ಚತುಷ್ಪಥ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಗುನ್ನಾಳ್ ಕ್ರಾಸ್ ಬಳಿ ಬಸ್ ನಲ್ಲಿದ್ದ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಈ ವೇಳೆ ಇದ್ದಕ್ಕಿದ್ದಂತೆ ಬಸ್ ನಲ್ಲಿ ಬೆಂಕಿ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ 32 ಮಂದಿ ಪ್ರಯಾಣಿಕರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 
ಇಂದು ಬೆಳಗಿನ ಜಾವ 5.30ರ ವೇಳೆಗೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಕೂಡಲೇ ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸುವಂತೆ ಸೂಚಿಸಿದ್ದಾರೆ. ಸೂಚನೆಯಂತೆಯೇ ಪ್ರಯಾಣಿಕರು ಲಗೇಜ್ ಸಮೇತ ಕೆಳಗೆ ಇಳಿದಿದ್ದಾರೆ, ಕೆಲವೇ ನಿಮಿಷಗಳಲ್ಲಿ ಬೆಂಕಿ ಬಸ್ ಸುತ್ತಲೂ ಆವರಿಸಿ, ಹೊತ್ತಿಉರಿದಿದೆ. 
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬೇವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT