ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು : ಪ್ರವಾಹ ಬಂದರೆ ಕೊಚ್ಚಿಕೊಂಡು ಹೋಗುವಂತಿರುವ ಒಳಚರಂಡಿಗಳು !

ಈ ಬಾರಿಯೂ ಮಳೆಗಾಲ ಬೇಗನೆ ಆರಂಭವಾಗುವ ಲಕ್ಷಣವಿದ್ದು, ಅನೇಕ ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆ ದೋರುವ ಸಾಧ್ಯತೆ ಹೆಚ್ಚಾಗಿದೆ.

ಬೆಂಗಳೂರು : ಈ ಬಾರಿಯೂ ಮಳೆಗಾಲ ಬೇಗನೆ ಆರಂಭವಾಗುವ ಲಕ್ಷಣವಿದ್ದು, ಅನೇಕ ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆ ದೋರುವ ಸಾಧ್ಯತೆ ಹೆಚ್ಚಾಗಿದೆ.  ಒಳಚರಂಡಿ  ಕಾಮಗಾರಿ ಪೂರ್ಣಗೊಳಿಸದೆ  ಕಳೆದ ವರ್ಷ ಆದ ತೊಂದೆರೆಯಿಂದ ಆದ ಪಾಠವನ್ನು ನಗರ ಆಡಳಿತ ಇನ್ನೂ ಕಲಿತಂತೆ ಕಾಣುತ್ತಿಲ್ಲ.

ಮಾ. ತಿಂಗಳೊಳಗೆ ರಾಜಕಾಲುವೆ ಕಾಮಗಾರಿ ಪೂರ್ಣಗೊಳ್ಳಬೇಕು ಅಂದುಕೊಂಡಿದ್ದರೂ ಅದು ಸಾಧ್ಯವಾಗಿಲ್ಲ. ಶೇ.50 ರಷ್ಟು ಪೂರ್ಣಗೊಂಡಿಲ್ಲ. ಶೇ. 41.8 ರಷ್ಟು ಮಾತ್ರ ಕಾಮಗಾರಿ ಪೂರ್ಣಗೊಂಡಿದ್ದು, ಸಂಬಂಧಿತ ಇಲಾಖೆ ಹಲವು ಸವಾಲುಗಳನ್ನು ಎದುರಿಸಬೇಕಾಗಿದೆ.

ಕಳೆದ ವರ್ಷ ಹೆಚ್ಚಿನ ಮಳೆಯಾದ್ದರಿಂದ ಅನೇಕ ಕಡೆ ನೀರು ನುಗ್ಗಿ ಭಾರಿ ತೊಂದರೆಯಾಗಿತ್ತು. ನಂತರ ಸರ್ಕಾರ 408 ರಾಜಕಾಲುವೆ ಕಾಮಗಾರಿಗಾಗಿ 1,100 ಕೋಟಿ ರೂ. ಬಿಡುಗಡೆ ಮಾಡಿತ್ತು.

ಇದರಲ್ಲಿ 102 ಕೆಲಸಗಳು ಪೂರ್ಣಗೊಂಡಿವೆ. 279 ಕೆಲಸಗಳು ಪ್ರಗತಿಯಲ್ಲಿವೆ ಎಂದು ಬಿಬಿಎಂಪಿ ಒಳಚರಂಡಿ ಇಲಾಖೆಯ ಚೀಪ್ ಎಂಜಿನಿಯರ್ ತಂತ್ರಜ್ಞಾನ ಸಲಹೆಗಾರ ಶಿವಪ್ರಸಾದ್ ಹೇಳುತ್ತಾರೆ.

ಮೇ ತಿಂಗಳೊಳಗೆ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳಬೇಕಿತ್ತು. ಆದರೆ. ಚುನಾವಣೆ ಹಿನ್ನೆಲೆಯಲ್ಲಿ ಮಳೆಗಾಲ ಆರಂಭದ ನಂತರ ಜೂನ್ ತಿಂಗಳಲ್ಲಿ ಪೂರ್ಣಗೊಳ್ಳುವ ವಿಶ್ವಾಸವಿರುವುದಾಗಿ ಅವರು ಹೇಳಿದ್ದಾರೆ.

ಬೆಂಗಳೂರಿನ ರಾಜಕಾಲುವೆ ನಿರ್ಮಾಣ ಕಾಮಗಾರಿಗಾಗಿ ಆದ್ಯತೆ ನೀಡುವುದಾಗಿ ಕಳೆದ ವರ್ಷ ರಾಜ್ಯಸರ್ಕಾರ ಅಶ್ವಾಸ ನೀಡಿತ್ತು. ಆದರೆ, ರಾಜಕಾಲುವೆ ತೆರವುಗೊಳಿಸುವ ರೊಬೊಟಿಕ್ ಯಂತ್ರ ಖರೀದಿಗೆ ಇನ್ನೂ ಅನುಮೋದನೆ ನೀಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತ್ಯಾಜ್ಯ ಹರಿವಿಗಾಗಿ ಬಿಡಬ್ಲ್ಯೂಎಸ್ ಎಸ್ ಬಿ  ಚರಂಡಿಗೆ ಅಳವಡಿಸಿರುವ ಪೈಪ್ ಗಳು ಮತ್ತೊಂದು ಸಮಸ್ಯೆಯಾಗಿದೆ.ಇದರಿಂದ ಹೆಚ್ಚಿನ ನೀರು  ಹಾಗೂ ಘನ ತ್ಯಾಜ್ಯ ಠೇವಣಿಯಾಗಿಡಬೇಕಾಗುತ್ತದೆ.

ಕಳೆದ ಮೂರು ನಾಲ್ಕು ದಶಕಗಳಲ್ಲಿ ಚರಂಡಿ ಮೂಲಕ ತ್ಯಾಜ್ಯ ನೀರು ಹರಿದು ಹೋಗುವಂತೆ ಮಾಡಲು ಕ್ಷಿಪ್ರ ರೀತಿಯ ಅಭಿವೃದ್ದಿ ಕಾಮಗಾರಿ ಕೈಗೊಂಡಿರುವುದಾಗಿ ಬಿಡಬ್ಲ್ಯೂಎಸ್ ಎಸ್ ಬಿ  ಅಧ್ಯಕ್ಷ ತುಷಾರ್ ಗಿರಿನಾಥ್ ಹೇಳಿದ್ದಾರೆ.

500 ಎಂಎಲ್ ಡಿ ಲೀಟರ್  ಬಳಕೆಗೆ ಯೋಗ್ಯವಲ್ಲದ ನೀರು ಒಳ ಚರಂಡಿ ಮೂಲಕ ಕೆರೆ, ನದಿಗಳನ್ನು ಸೇರುತ್ತಿದೆ, ಎಲ್ಲ ಮನಗಳನ್ನೂ ತ್ಯಾಜ್ಯ ಸಂಸ್ಕರಣಾ ಘಟಕಗಳೊಂದಿಗೆ ಸಂಪರ್ಕ ಹೊಂದುವಂತೆ ಮನವೊಲಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿಗೆ ಬಿಬಿಎಂಪಿ ಹಾಗೂ ಬಿಡಬ್ಲ್ಯೂಎಸ್ ಎಸ್ ಬಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಳೆಗಾಲ ಆರಂಭಕ್ಕೂ ಮುನ್ನ ಒಳಚರಂಡಿ ಸಂಬಂಧಿತ ಎಲ್ಲಾ ಕಾರ್ಯಗಳನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿರುವುದಾಗಿ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ಹೇಳಿದ್ದಾರೆ.

ಬೆಂಗಳೂರಿನ ರಾಜಕಾಲುವೆಗಳ ಒಟ್ಟು ಉದ್ದ 842 ಕಿ. ಮೀ
ಎಷ್ಟು ಉದ್ದದ ಕಾಮಗಾರಿ ಪೂರ್ಣಗೊಳಿಸಲಾಗಿದೆ 352 ಕಿ.ಮೀ
 ಉಳಿದಿರುವ ಕಾಮಗಾರಿ 490  ಕಿ. ಮೀ
ತೆರವುಗೊಳಿಸಬೇಕಾದ  ರಾಜಕಾಲುವೆಗಳ ಸಂಖ್ಯೆ 1.985
 ತೆರವುಗೊಳಿಸಿರುವ ರಾಜಕಾಲುವೆಗಳ ಸಂಖ್ಯೆ 1,225







Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT