ಬಹುಭಾಷಾ ನಟ ಪ್ರಕಾಶ್ ರಾಜ್ 
ರಾಜ್ಯ

ಕೋಮು ರಾಜಕೀಯ ನಿಲ್ಲಿಸಿ: ಮಡಿಕೇರಿಯಲ್ಲಿ ಪ್ರಕಾಶ್ ರಾಜ್

ಕೋಮು ರಾಜಕೀಯ ನಿಲ್ಲಿಸಿ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಭಾನುವಾರ ಹೇಳಿದ್ದಾರೆ...

ಮಡಿಕೇರಿ: ಕೋಮು ರಾಜಕೀಯ ನಿಲ್ಲಿಸಿ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಭಾನುವಾರ ಹೇಳಿದ್ದಾರೆ. 
ಮಡಿಕೇರಿ ನಗರದ ಪತ್ರಿಕಾಭವನದಲ್ಲಿ ಭಾನುವಾರ ಆಯೋಜಿಸಿದ್ದ ಜಸ್ಟ್ ಆಸ್ಕಿಂಗ್ ಅಭಿಯಾನ ಪ್ರಯುಕ್ತ ನಡೆದ ಸಂವಾದ ಕಾರ್ಯಕ್ರದಲ್ಲಿ ಮಾತನಾಡಿರುವ ಅವರು, ನಾನು ಅರ್ಥಪೂರ್ಣ ಜೀವನವನ್ನು ನಡೆಸುತ್ತಿದ್ದೇನೆಂದು ಎನಿಸುತ್ತಿದೆ. ಮತದಾರರನ್ನು ಸೆಳೆಯುವ ಸಲವಾಗಿ ರಾಜಕೀಯ ನಾಯಕನಾಗಿ ನಾನು ಇಲ್ಲಿಗೆ ಬಂದಿಲ್ಲ. ಒಬ್ಬ ಸಾಮಾಜಿಕ ಹೋರಾಟಗಾರನಾಗಿ ಪ್ರಸ್ತುತ ನಿರ್ಮಾಣವಾಗಿರುವ ವ್ಯವಸ್ಥೆಯನ್ನು ಬದಲಿಸುವಂದೆ ಜಾಗೃತಿ ಮೂಡಿಸುವ ಸಲುವಾಗಿ ಸಾರ್ವಜನಿಕರೊಂದಿಗೆ ಮಾತನಾಡಲು ಬಂದಿದ್ದೇನೆಂದು ಹೇಳಿದ್ದಾರೆ. 
ಗೌರಿ ಲಂಕೇಶ್ ಅವರ ಸಾವನ್ನು ಮೋದಿ ಅನುಯಾಯಿಗಳು ಹೇಗೆ ಸಂಭ್ರಮಿಸಿದರು ಎಂಬುದನ್ನು ನೋಡಿ ನನಗೆ ಬೇಸರವಾಯಿತು. ಹೀಗಾಗಿ ನಾನು ಹೋರಾಟಗಾರನಾಗಿ ಮುಂದಕ್ಕೆ ಬಂದೆ. ಇಂತಹ ಸಂಭ್ರಮಗಳಿಗೆ ಹೇಗೆ ಅವಕಾಶಗಳನ್ನು ಮಾಡಿಕೊಡಲಾಯಿತು ಎಂದು ಪ್ರಶ್ನಿಸಿ ಟ್ವಿಟರ್ ಮೂಲಕ ನನ್ನ ಹೋರಾಟವನ್ನು ಆರಂಭಿಸಿದ್ದೆ ಎಂದು ತಿಳಿಸಿದ್ದಾರೆ. 
ರಾಜಕೀಯಕ್ಕೆ ಬರುವ ಸಲುವಾಗಿ ಜನರ ಗಮನ ಸೆಳೆಯರು ಸಾರ್ವಜನಿಕರ ಮುಂದೆ ನಾನು ಬರುತ್ತಿಲ್ಲ. ಆದರೆ, ಪ್ರಜಾಪ್ರಭುತ್ವದಲ್ಲಿ ಪಾಲ್ಗೊಳ್ಳುವಂತೆ ಜನರನ್ನು ಒಗ್ಗೂಡಿಸಲು ಪ್ರಯತ್ನಿಸುತ್ತಿದ್ದೇನೆ. ಕುವೆಂಪು, ಲಂಕೇಶ್, ತೇಜಸ್ವಿ ಮತ್ತು ಸಿದ್ದಲಿಂಗಯ್ಯ ಅವರೂ ಕೂಡ ಇದೇ ರೀತಿ ಹೋರಾಟ ಮಾಡಿದ್ದರು. ಅವರ ಹೆಜ್ಜೆಯಂತೆ ನಾನು ನಡೆಯುತ್ತಿದ್ದೇನಷ್ಟೇ ಎಂದಿದ್ದಾರೆ. 
ಹಿಂದುಗಳು, ಕಮ್ಯುನಿಸ್ಟ್ ಗಳ ವಿರುದ್ಧವಿಲ್ಲ. ನಾನು ಪ್ರಜಾಪ್ರಭುತ್ವತವಾದೆ. ಜಾತಿ ಹಾಗೂ ಕೋಮು ರಾಜಕೀಯದಿಂದ ಭಾರತವನ್ನು ವಿಭಜನೆ ಮಾಡಲಾಗುತ್ತಿದೆ. ಇದು ಕೂಡಲೇ ನಿಲ್ಲಬೇಕು. ಧರ್ಮದ ಆಧಾರದ ಮೇಲೆ ಜನರು ಶಾಂತಿಯನ್ನು ಹುಡುಕಬೇಕು. ದ್ವೇಷದ ಹೋರಾಟದಿಂದಲ್ಲ ಎಂದು ತಿಳಿಸಿದ್ದಾರೆ. 
ವಾಜಪೇಯಿ ನೇತೃತ್ವದ ಬಿಜೆಪಿ ವಿರುದ್ಧ ನಾನಿಲ್ಲ. ಆದರೆ, ಇಂದು ಬಿಜೆಪಿ ಧರ್ಮವನ್ನು ರಾಜಕೀಯಕ್ಕೆ ತರುತ್ತಿದೆ. ಇಂತಹ ವರ್ತನೆಯನ್ನು ಪ್ರಶ್ನಿಸಲು ನನಗೆ ಅವಕಾಶ ಕೊಡಿ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT