ಸಂಗ್ರಹ ಚಿತ್ರ 
ರಾಜ್ಯ

ಸಿಎಂ ಆಪ್ತ, ಸಚಿವ ಹೆಚ್ ಸಿ ಮಹದೇವಪ್ಪ ನಿವಾಸದ ಮೇಲೆ ಐಟಿ ದಾಳಿ!

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಕಾಂಗ್ರೆಸ್ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದು, ಸಚಿವ ಹೆಚ್ ಸಿ ಮಹದೇವಪ್ಪ ಅವರ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.

ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಕಾಂಗ್ರೆಸ್ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದು, ಸಚಿವ ಹೆಚ್ ಸಿ ಮಹದೇವಪ್ಪ ಅವರ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಆಪ್ತರೂ ಕೂಡ ಆಗಿರುವ ಎಚ್​.ಸಿ. ಮಹದೇವಪ್ಪ ಅವರ ನಿವಾಸದ ಮೇಲೆ ಇಂದು ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. 
ಮೂಲಗಳ ಪ್ರಕಾರ ಮೈಸೂರಿನ ವಿಜಯನಗರದಲ್ಲಿರುವ ಮಹದೇವಪ್ಪ ನಿವಾಸದ ಮೇಲೆ ಐಟಿ ಅಧಿಕಾರಿಗಳು ಬೆಳಗ್ಗೆಯೇ ದಾಳಿ ನಡೆಸಿದ್ದಾರೆ. ಮೂವರು ಅಧಿಕಾರಿಗಳ ತಂಡವೊಂದು ಬೆಳಗ್ಗೆ ಮಹದೇವಪ್ಪ ಅವರ ನಿವಾಸಕ್ಕೆ ಆಗಮಿಸಿ ದಾಖಲೆ ಪತ್ರಗಳ ಪರಿಶೀಲನೆಯಲ್ಲಿ ತೊಡಗಿದೆ. 
ಇನ್ನು ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಇಂದು ಕೊನೆಯ ದಿನವಾಗಿದ್ದು, ಈ ಹೊತ್ತಲ್ಲಿ ಐಟಿ ದಾಳಿ ಕಾಂಗ್ರೆಸ್ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ,

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಂಚ ಪಡೆಯುತ್ತಿದ್ದ ಸಚಿವ ಕೆ.ಜೆ. ಜಾರ್ಜ್‌ OSD ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ

ಜಿಲ್ಲೆಗೊಂದು ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ: ಸಿಎಂ ಸಿದ್ದರಾಮಯ್ಯ

11 ಮಕ್ಕಳ ಸಾವು: ಕೇರಳದಲ್ಲೂ ಕೋಲ್ಡ್ರಿಫ್ ಸಿರಪ್ ಮಾರಾಟ, ವಿತರಣೆ ನಿಷೇಧ

ಎಂಎಂ ಹಿಲ್ಸ್‌ನಲ್ಲಿ ಮತ್ತೊಂದು ಹುಲಿಗೆ ವಿಷಪ್ರಾಶನ; ಇಬ್ಬರು ಶಂಕಿತರು ವಶಕ್ಕೆ

ತಮಿಳುನಾಡಿನಲ್ಲಿ ಬದಲಾದ ರಾಜಕೀಯ ಸಮೀಕರಣ: ವಿಜಯ್ ಜೊತೆ ಬಿಜೆಪಿ ಮಾತುಕತೆ? ಕಾಲ್ತುಳಿತ ಘಟನೆಯ ನಂತರ TVKಗೆ ಪ್ರಮುಖ ಭರವಸೆ?

SCROLL FOR NEXT