ಕಾರ್ಯನಿರ್ವಹಣೆ ಸ್ಥಗಿತಗೊಳಿಸಿರುವುದರ ಬಗ್ಗೆ ಬಾರ್/ ಪಬ್ ಮುಂಭಾಗದಲ್ಲಿರುವ ಸೂಚನಾ ಫಲಕ 
ರಾಜ್ಯ

ಬೆಂಗಳೂರು: ಮದ್ಯಪ್ರಿಯರಿಗೂ ತಟ್ಟಿದ ಚುನಾವಣೆ ನೀತಿ ಸಂಹಿತೆ ಬಿಸಿ: 752 ಬಾರ್, ಪಬ್ ಗಳಿಗೆ ಬೀಗ!

ಮೇ.12 ರಂದು ಕರ್ನಾಟಕ ವಿಧಾನಸಭಾ ಚುನವಾಣೆ ನಡೆಯಲಿರುವ ಹಿನ್ನೆಲೆಯಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಮದ್ಯಪ್ರಿಯರಿಗೂ ಚುನಾವಣಾ ನೀತಿ ಸಂಹಿತೆಯ ಬಿಸಿ ತಟ್ಟಿದೆ.

ಬೆಂಗಳೂರು: ಮೇ.12 ರಂದು ಕರ್ನಾಟಕ ವಿಧಾನಸಭಾ ಚುನವಾಣೆ ನಡೆಯಲಿರುವ ಹಿನ್ನೆಲೆಯಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಮದ್ಯಪ್ರಿಯರಿಗೂ ಚುನಾವಣಾ ನೀತಿ ಸಂಹಿತೆಯ ಬಿಸಿ ತಟ್ಟಿದೆ. 
ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ 752 ಬಾರ್, ಪಬ್ ಗಳಲ್ಲಿ ಚಟುವಟಿಕೆಗಳು ಮಂಕಾಗಿವೆ.  ನಿಗದಿತ ವೇಳೆಗಿಂತ ಹೆಚ್ಚಿನ ಸಮಯ ಬಾರ್, ಪಬ್ ಗಳು ಕಾರ್ಯನಿರ್ವಹಣೆ ಮಾಡಿದ ಅಥವಾ ಸಂಹಿತೆ ಉಲ್ಲಂಘಿಸಿದ ಒಟ್ಟು 752 ಬಾರ್, ಪಬ್ ಗಳನ್ನು ಅಬಕಾರಿ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಚುನಾವಣಾ ಆಯೋಗದ ಅಧಿಕಾರಿಗಳು ಬಂದ್ ಮಾಡಿಸಿದ್ದಾರೆ. 
ಬೆಂಗಳೂರು ನಗರದಲ್ಲಿ ಒಂದರಲ್ಲೇ ಮದ್ಯವನ್ನು ಪೂರೈಕೆ ಮಾಡುವ ಸುಮಾರು 200 ಸ್ಥಳಗಳಿಗೆ ಪರವಾನಗಿ ರದ್ದುಗೊಳಿಸುವ ನೋಟೀಸ್ ಜಾರಿಗೊಳಿಸಲಾಗಿದೆ.  ನಗರದಾದ್ಯಂತ ಸುಮಾರು 2,200  ಮದ್ಯ ಪೂರೈಕೆ ಮಾಡುವ ಸ್ಥಳಗಳಿವೆ.  2014 ರ ಲೋಕಸಭಾ ಚುನಾವಣೆ ವೇಳೆ ರಾಜ್ಯಾದ್ಯಂತ ಕೇವಲ 14 ಮದ್ಯ ಪೂರೈಕೆ ಮಾಡುವ ಅಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಲು ನೋಟಿಸ್ ಜಾರಿಗೊಳಿಸಲಾಗಿತ್ತು. ಇದರ ಹೊರತಾಗಿ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಮಾಡಿರುವುದಕ್ಕೆ ಸಂಬಂಧಿಸಿದಂತೆ 15,000 ಪ್ರಕರಣಗಳನ್ನು ದಾಖಲಿಸಲಾಗಿತ್ತು.
ಚುನಾವಣಾ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ಬಾರ್, ಚಿಲ್ಲರೆ ಅಂಗಡಿಗಳು, ಪಬ್ಗಳು ಮತ್ತು ರೆಸ್ಟೋರೆಂಟ್ಗಳ ಮೇಲೆ ಕಣ್ಣಿಟ್ಟಿರುವುದಾಗಿ ಹೇಳಿದ್ದಾರೆ.  ಅಷ್ಟೇ ಅಲ್ಲದೇ ಹೆಚ್ಚು ಪ್ರಮಾಣದಲ್ಲಿ ಮದ್ಯವನ್ನು ಖರೀದಿಸುವುದಕ್ಕೂ ನಿರ್ಬಂಧ ವಿಧಿಸಲಾಗಿದೆ.
ಚುನಾವಣೆ ಸಂದರ್ಭದಲ್ಲಿ ಮದ್ಯ ಹಂಚುವುದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂದು ಪರಿಗಣಿಸಲಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?