ಸಾಂದರ್ಭಿಕ ಚಿತ್ರ 
ರಾಜ್ಯ

ಹಿಟ್ ಅಂಡ್ ರನ್ ಕೇಸು: ಬೆಂಗಳೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ ಸಾವು

ನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಗಣಪತಿ ದೇವಸ್ಥಾನದ ಹತ್ತಿರ ಗುದ್ದೋಡಿ ಪ್ರಕರಣವೊಂದರಲ್ಲಿ ...

ಬೆಂಗಳೂರು: ನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಗಣಪತಿ ದೇವಸ್ಥಾನದ ಹತ್ತಿರ ಗುದ್ದೋಡಿ ಪ್ರಕರಣವೊಂದರಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಮೃತಪಟ್ಟರೆ ಆಕೆಯ ಸ್ನೇಹಿತ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಅಪಘಾತಕ್ಕೆ ಕಾರಣವಾಗಿರುವ ಖಾಸಗಿ ಬಸ್ ಚಾಲಕನಿಗಾಗಿ ಮಲ್ಲೇಶ್ವರ ಸಂಚಾರಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಮೃತ ವಿದ್ಯಾರ್ಥಿನಿಯನ್ನು ವಿದ್ಯಾರಣ್ಯಪುರದ ತಿಂಡ್ಲು ನಿವಾಸಿ ಚೈತ್ರಾ ಎಂದು ಗುರುತಿಸಲಾಗಿದ್ದು ಕೊಡಿಗೆಹಳ್ಳಿಯ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದಳು. ಚೈತ್ರಾ ತನ್ನ ಸ್ನೇಹಿತ ಸಂಜಯ ಜೊತೆ ಬೈಕ್ ನಲ್ಲಿ ಹಿಂಬದಿ ಕುಳಿತುಕೊಂಡು ಸ್ನೇಹಿತೆಯೊಬ್ಬಳ ಮದುವೆ ನಿಶ್ಚಿತಾರ್ಥಕ್ಕೆ ರಾಜಾಜಿನಗರಕ್ಕೆ ಹೋಗುತ್ತಿದ್ದರು. ನಿನ್ನೆ ಸಾಯಂಕಾಲ 8.15ರ ಸುಮಾರಿಗೆ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಗಣಪತಿ ದೇವಸ್ಥಾನದ ಹತ್ತಿರ ಹೋಗುತ್ತಿದ್ದಾಗ ಖಾಸಗಿ ಬಸ್ಸೊಂದು ಇವರ ಬೈಕ್ ಗೆ ಢಿಕ್ಕಿ ಹೊಡೆಯಿತು. ಇದರ ಪರಿಣಾಮ ಇಬ್ಬರೂ ಬೈಕ್ ನಿಂದ ಕೆಳಗೆ ಬಿದ್ದರು. ತಲೆಗೆ ಗಂಭೀರ ಗಾಯಗೊಂಡು ಚಿತ್ರಾ ಸ್ಥಳದಲ್ಲಿಯೇ ಅಸುನೀಗಿದರೆ ಸಂಜಯ್ ಸಣ್ಣಪುಟ್ಚ ಗಾಯಗಳಿಂದ ಪಾರಾಗಿದ್ದಾರೆ.

ಬಸ್ ಚಾಲಕ ವಾಹನವನ್ನು ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದ. ಬಸ್ಸಿನ ಸಂಖ್ಯೆ ಸಿಕ್ಕಿದ್ದು ಸದ್ಯದಲ್ಲಿಯೇ ಚಾಲಕನನ್ನು ಬಂಧಿಸಲಾಗುವುದು. ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ ಎಂದು ಪೊಲೀಸರು ಹೇಳುತ್ತಾರೆ.
ಮಲ್ಲೇಶ್ವರ ಸಂಚಾರಿ ಠಾಣೆಯಲ್ಲಿ ಕೇಸು ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT