ಅಮಿತ್ ಶಾ 
ರಾಜ್ಯ

ಅಮಿತ್ ಶಾ ಕಾಪ್ಟರ್ ಇಳಿಯಲು ಹೊಲ ನಾಶ: ಇಳಕಲ್ ರೈತನಿಂದ ದೂರು ದಾಖಲು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿದ್ದ ಹೆಲಿಕಾಪ್ಟರ್ ಇಳಿಸುವುದಕ್ಕಾಗಿ ತನ್ನ ಹೊಲವನ್ನು ನಾಶ ಮಾಡಲಾಗಿದೆ ಎಂದು ರೈತನೊಬ್ಬ ಪೋಲೀಸರಿಗೆ ದೂರಿತ್ತ ಘಟನೆ....

ಬಾಗಲಕೋಟೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿದ್ದ ಹೆಲಿಕಾಪ್ಟರ್ ಇಳಿಸುವುದಕ್ಕಾಗಿ ತನ್ನ ಹೊಲವನ್ನು ನಾಶ ಮಾಡಲಾಗಿದೆ ಎಂದು ರೈತನೊಬ್ಬ ಪೋಲೀಸರಿಗೆ ದೂರಿತ್ತ ಘಟನೆ ಬಾಗಲಕೋಟೆ ಜಿಲ್ಲೆ ಇಳಕಲ್ ನಲ್ಲಿ ನಡೆದಿದೆ.
ಅಮಿತ್ ಶಾ ಹೆಲಿಕಾಪ್ಟರ್ ಇಳಿಸಲು ತಾತ್ಕಾಲಿಕ ಹೆಲಿಪ್ಯಾಡ್ ನಿರ್ಮಾಣ ಮಾಡುವ ಸಮಯದಲ್ಲಿ ಹೊಲದ ಬದುವನ್ನು ಹಾಳು ಮಾಡಿದ್ದಾರೆ ಎಂದು ಇಳಕಲ್ ರೈತ ಜಗದೀಶ್ ಕರಡಿ ಪೋಲೀಸರಿಗೆ ದೂರಿತ್ತಿದ್ದಾರೆ.
ಇಳಕಲ್‌ನ ನಾಗೂರು ರಸ್ತೆ ಬಳಿ ಇರುವ ಹೊಲದ ಬದುಗಳನ್ನು ನಾಶಪಡಿಸಿ ಹೆಲಿಪ್ಯಾಡ್‌ ನಿರ್ಮಾಣ ಮಾಡಲಾಗಿದೆ. ಇದನ್ನು ಪ್ರಶ್ನಿಸಿದ್ದ ರೈತ ಜಗದೀಶ್ ಅವರಿಗೆ ಹುನಗುಂದ ಶಾಸಕ ದೊಡ್ಡಗೌಡ ಪಾಟೀಲ್‌, ಮಂಜು ಶೆಟ್ಟರ್‌, ಸುಗೂರೇಶ್‌ ನಾಗಲೋಟಿ,ಶ್ಯಾಮಸುಂದರ್‌ ಮೊದಲಾದವರು ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಬಿಜೆಪಿ ನಾಯಕರೆಲ್ಲರ ಮೇಲೆ ರೈತ  ಜಗದೀಶ್ ಇಳಕಲ್‌ ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಕೂಡಲ ಸಂಗಮದ ಬಸವಣ್ಣನ ಐಕ್ಯ ಸ್ಥಳಕ್ಕೆ ಶನಿವಾರ  ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ ನೀಡುವವರಿದ್ದು  ಇಳಕಲ್ ನಗರದಲ್ಲಿ ಶಾ ಅವರ ಸಾರ್ವಜನಿಕ ಸಭೆ ಆಯೋಜಿಸಲಾಗಿತ್ತು ಈ ಕಾರ್ಯಕ್ರಮಕ್ಕೆ ಆಗಮಿಸುವ ಅಮಿತ್ ಶಾ ಅವರ ಹೆಲಿಕಾಪ್ಟರ್ ಇಳಿಯಲು ತ್ಕಾಲಿಕ ಹೆಲಿಪ್ಯಾಡ್‌ ನಿರ್ಮಿಸಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT