ಅಮಿತ್ ಶಾ 
ರಾಜ್ಯ

ಅಮಿತ್ ಶಾ ಕಾಪ್ಟರ್ ಇಳಿಯಲು ಹೊಲ ನಾಶ: ಇಳಕಲ್ ರೈತನಿಂದ ದೂರು ದಾಖಲು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿದ್ದ ಹೆಲಿಕಾಪ್ಟರ್ ಇಳಿಸುವುದಕ್ಕಾಗಿ ತನ್ನ ಹೊಲವನ್ನು ನಾಶ ಮಾಡಲಾಗಿದೆ ಎಂದು ರೈತನೊಬ್ಬ ಪೋಲೀಸರಿಗೆ ದೂರಿತ್ತ ಘಟನೆ....

ಬಾಗಲಕೋಟೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿದ್ದ ಹೆಲಿಕಾಪ್ಟರ್ ಇಳಿಸುವುದಕ್ಕಾಗಿ ತನ್ನ ಹೊಲವನ್ನು ನಾಶ ಮಾಡಲಾಗಿದೆ ಎಂದು ರೈತನೊಬ್ಬ ಪೋಲೀಸರಿಗೆ ದೂರಿತ್ತ ಘಟನೆ ಬಾಗಲಕೋಟೆ ಜಿಲ್ಲೆ ಇಳಕಲ್ ನಲ್ಲಿ ನಡೆದಿದೆ.
ಅಮಿತ್ ಶಾ ಹೆಲಿಕಾಪ್ಟರ್ ಇಳಿಸಲು ತಾತ್ಕಾಲಿಕ ಹೆಲಿಪ್ಯಾಡ್ ನಿರ್ಮಾಣ ಮಾಡುವ ಸಮಯದಲ್ಲಿ ಹೊಲದ ಬದುವನ್ನು ಹಾಳು ಮಾಡಿದ್ದಾರೆ ಎಂದು ಇಳಕಲ್ ರೈತ ಜಗದೀಶ್ ಕರಡಿ ಪೋಲೀಸರಿಗೆ ದೂರಿತ್ತಿದ್ದಾರೆ.
ಇಳಕಲ್‌ನ ನಾಗೂರು ರಸ್ತೆ ಬಳಿ ಇರುವ ಹೊಲದ ಬದುಗಳನ್ನು ನಾಶಪಡಿಸಿ ಹೆಲಿಪ್ಯಾಡ್‌ ನಿರ್ಮಾಣ ಮಾಡಲಾಗಿದೆ. ಇದನ್ನು ಪ್ರಶ್ನಿಸಿದ್ದ ರೈತ ಜಗದೀಶ್ ಅವರಿಗೆ ಹುನಗುಂದ ಶಾಸಕ ದೊಡ್ಡಗೌಡ ಪಾಟೀಲ್‌, ಮಂಜು ಶೆಟ್ಟರ್‌, ಸುಗೂರೇಶ್‌ ನಾಗಲೋಟಿ,ಶ್ಯಾಮಸುಂದರ್‌ ಮೊದಲಾದವರು ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಬಿಜೆಪಿ ನಾಯಕರೆಲ್ಲರ ಮೇಲೆ ರೈತ  ಜಗದೀಶ್ ಇಳಕಲ್‌ ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಕೂಡಲ ಸಂಗಮದ ಬಸವಣ್ಣನ ಐಕ್ಯ ಸ್ಥಳಕ್ಕೆ ಶನಿವಾರ  ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ ನೀಡುವವರಿದ್ದು  ಇಳಕಲ್ ನಗರದಲ್ಲಿ ಶಾ ಅವರ ಸಾರ್ವಜನಿಕ ಸಭೆ ಆಯೋಜಿಸಲಾಗಿತ್ತು ಈ ಕಾರ್ಯಕ್ರಮಕ್ಕೆ ಆಗಮಿಸುವ ಅಮಿತ್ ಶಾ ಅವರ ಹೆಲಿಕಾಪ್ಟರ್ ಇಳಿಯಲು ತ್ಕಾಲಿಕ ಹೆಲಿಪ್ಯಾಡ್‌ ನಿರ್ಮಿಸಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT