ಝಣ ಝಣ ಹಣ ಪುಸ್ತಕ ಲೋಕಾರ್ಪಣೆ 
ರಾಜ್ಯ

ಕನ್ನಡಪ್ರಭ.ಕಾಮ್ ನ ಹಣಕ್ಲಾಸು ಅಂಕಣ ಬರಹಗಳ ಸಂಗ್ರಹ 'ಝಣ ಝಣ ಹಣ'ಪುಸ್ತಕ ಬಿಡುಗಡೆ

ಕನ್ನಡಪ್ರಭ.ಕಾಮ್ ನಲ್ಲಿ ಪ್ರತಿ ಗುರುವಾರ ಪ್ರಕಟವಾಗುವ, ಆರ್ಥಿಕ ವಿಷಯಗಳಿಗೆ ಸಂಬಂಧಿಸಿದ ರಂಗಸ್ವಾಮಿ ಮೂಕನಹಳ್ಳಿ ಅವರ "ಹಣಕ್ಲಾಸು ಅಂಕಣ"ದ ಸಂಗ್ರಹ "ಝಣ ಝಣ ಹಣ" ಪುಸ್ತಕ ಏ.28 ರಂದು

ಬೆಂಗಳೂರು: ಕನ್ನಡಪ್ರಭ.ಕಾಮ್ ನಲ್ಲಿ ಪ್ರತಿ ಗುರುವಾರ ಪ್ರಕಟವಾಗುವ, ಆರ್ಥಿಕ ವಿಷಯಗಳಿಗೆ ಸಂಬಂಧಿಸಿದ ರಂಗಸ್ವಾಮಿ ಮೂಕನಹಳ್ಳಿ ಅವರ "ಹಣಕ್ಲಾಸು ಅಂಕಣ"ದ ಸಂಗ್ರಹ "ಝಣ ಝಣ ಹಣ" ಪುಸ್ತಕ ಏ.28 ರಂದು ಲೋಕಾರ್ಪಣೆಗೊಂಡಿದೆ. 
ಕುಮಾರಸ್ವಾಮಿ ಲೇಔಟ್ ನಲ್ಲಿರುವ ಖ್ಯಾತ ವಿಜ್ಞಾನ ಲೇಖಕರಾದ ಟಿ.ಆರ್ .ಅನಂತರಾಮು ಅವರ ನಿವಾಸದಲ್ಲಿ ನಡೆದ ಅನೌಪಚಾರಿಕ, ಸರಳ ಕಾರ್ಯಕ್ರಮದಲ್ಲಿ, ವಿಜ್ಞಾನ ಲೇಖಕ, ಚಕ್ರವ್ಯೂಹ ಅಂಕಣದ ಖ್ಯಾತಿಯ ರೋಹಿತ್ ಚಕ್ರತೀರ್ಥ ಪುಸ್ತಕ ಬಿಡುಗಡೆಗೊಳಿಸಿದ್ದು, ಪುಸ್ತಕವನ್ನು ಪ್ರಕಟಿಸಿರುವ ಸಾಧನ ಪ್ರಕಾಶನದ ರವಿಚಂದ್ರನ್ ರಾವ್ ಅವರು ಭಾಗಿಯಾಗಿದ್ದರು. 
ಆರ್ಥಿಕ ವ್ಯವಹಾರಣಗಳನ್ನು ನಿರ್ವಹಣೆ ಮಾಡುವುದು, ಬ್ಯಾಂಕಿಂಗ್, ಹೂಡಿಕೆಗೆ ಸಂಬಂಧಿಸಿದಂತೆ ಜನಸಾಮಾನ್ಯರಿಗೆ ಸರಳವಾಗಿ ತಿಳಿಸಿಕೊಡುವ ರಂಗಸ್ವಾಮಿ ಮೂಕನಹಳ್ಳಿ ಅವರ ಹಣಕ್ಲಾಸು ಅಂಕಣ ಅಪಾರ ಜನಪ್ರಿಯತೆ ಗಳಿಸಿದ್ದು, ಡಿಜಿಟಲ್ ಕನ್ನಡ.ಕಾಮ್ ನಲ್ಲಿ ಪ್ರಕಟವಾಗಿದ್ದ ಹಣಕ್ಲಾಸು ಅಂಕಣಗಳ ಸಂಗ್ರಹದ ಮೊದಲ ಭಾಗ ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆಯಾಗಿತ್ತು. ಈಗ ಕನ್ನಡಪ್ರಭ.ಕಾಮ್ ನಲ್ಲಿ ಪ್ರಕಟಗೊಳ್ಳುತ್ತಿರುವ ಅಂಕಣ"ದ ಸಂಗ್ರಹ "ಝಣ ಝಣ ಹಣ" ಪುಸ್ತಕ (ಹಣಕ್ಲಾಸು ಅಂಕಣಗಳ  ಸಂಗ್ರಹದ ಎರಡನೇ ಭಾಗ) ಲೋಕಾರ್ಪಣೆಗೊಂಡಿದೆ. ಪುಸ್ತಕಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ muraram@yahoo.com ಅಥವಾ mookanahalli@gmail.com ಇ-ಮೇಲ್ ವಿಳಾಸವನ್ನು ಸಂಪರ್ಕಿಸಬಹುದಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT