ಝಣ ಝಣ ಹಣ ಪುಸ್ತಕ ಲೋಕಾರ್ಪಣೆ 
ರಾಜ್ಯ

ಕನ್ನಡಪ್ರಭ.ಕಾಮ್ ನ ಹಣಕ್ಲಾಸು ಅಂಕಣ ಬರಹಗಳ ಸಂಗ್ರಹ 'ಝಣ ಝಣ ಹಣ'ಪುಸ್ತಕ ಬಿಡುಗಡೆ

ಕನ್ನಡಪ್ರಭ.ಕಾಮ್ ನಲ್ಲಿ ಪ್ರತಿ ಗುರುವಾರ ಪ್ರಕಟವಾಗುವ, ಆರ್ಥಿಕ ವಿಷಯಗಳಿಗೆ ಸಂಬಂಧಿಸಿದ ರಂಗಸ್ವಾಮಿ ಮೂಕನಹಳ್ಳಿ ಅವರ "ಹಣಕ್ಲಾಸು ಅಂಕಣ"ದ ಸಂಗ್ರಹ "ಝಣ ಝಣ ಹಣ" ಪುಸ್ತಕ ಏ.28 ರಂದು

ಬೆಂಗಳೂರು: ಕನ್ನಡಪ್ರಭ.ಕಾಮ್ ನಲ್ಲಿ ಪ್ರತಿ ಗುರುವಾರ ಪ್ರಕಟವಾಗುವ, ಆರ್ಥಿಕ ವಿಷಯಗಳಿಗೆ ಸಂಬಂಧಿಸಿದ ರಂಗಸ್ವಾಮಿ ಮೂಕನಹಳ್ಳಿ ಅವರ "ಹಣಕ್ಲಾಸು ಅಂಕಣ"ದ ಸಂಗ್ರಹ "ಝಣ ಝಣ ಹಣ" ಪುಸ್ತಕ ಏ.28 ರಂದು ಲೋಕಾರ್ಪಣೆಗೊಂಡಿದೆ. 
ಕುಮಾರಸ್ವಾಮಿ ಲೇಔಟ್ ನಲ್ಲಿರುವ ಖ್ಯಾತ ವಿಜ್ಞಾನ ಲೇಖಕರಾದ ಟಿ.ಆರ್ .ಅನಂತರಾಮು ಅವರ ನಿವಾಸದಲ್ಲಿ ನಡೆದ ಅನೌಪಚಾರಿಕ, ಸರಳ ಕಾರ್ಯಕ್ರಮದಲ್ಲಿ, ವಿಜ್ಞಾನ ಲೇಖಕ, ಚಕ್ರವ್ಯೂಹ ಅಂಕಣದ ಖ್ಯಾತಿಯ ರೋಹಿತ್ ಚಕ್ರತೀರ್ಥ ಪುಸ್ತಕ ಬಿಡುಗಡೆಗೊಳಿಸಿದ್ದು, ಪುಸ್ತಕವನ್ನು ಪ್ರಕಟಿಸಿರುವ ಸಾಧನ ಪ್ರಕಾಶನದ ರವಿಚಂದ್ರನ್ ರಾವ್ ಅವರು ಭಾಗಿಯಾಗಿದ್ದರು. 
ಆರ್ಥಿಕ ವ್ಯವಹಾರಣಗಳನ್ನು ನಿರ್ವಹಣೆ ಮಾಡುವುದು, ಬ್ಯಾಂಕಿಂಗ್, ಹೂಡಿಕೆಗೆ ಸಂಬಂಧಿಸಿದಂತೆ ಜನಸಾಮಾನ್ಯರಿಗೆ ಸರಳವಾಗಿ ತಿಳಿಸಿಕೊಡುವ ರಂಗಸ್ವಾಮಿ ಮೂಕನಹಳ್ಳಿ ಅವರ ಹಣಕ್ಲಾಸು ಅಂಕಣ ಅಪಾರ ಜನಪ್ರಿಯತೆ ಗಳಿಸಿದ್ದು, ಡಿಜಿಟಲ್ ಕನ್ನಡ.ಕಾಮ್ ನಲ್ಲಿ ಪ್ರಕಟವಾಗಿದ್ದ ಹಣಕ್ಲಾಸು ಅಂಕಣಗಳ ಸಂಗ್ರಹದ ಮೊದಲ ಭಾಗ ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆಯಾಗಿತ್ತು. ಈಗ ಕನ್ನಡಪ್ರಭ.ಕಾಮ್ ನಲ್ಲಿ ಪ್ರಕಟಗೊಳ್ಳುತ್ತಿರುವ ಅಂಕಣ"ದ ಸಂಗ್ರಹ "ಝಣ ಝಣ ಹಣ" ಪುಸ್ತಕ (ಹಣಕ್ಲಾಸು ಅಂಕಣಗಳ  ಸಂಗ್ರಹದ ಎರಡನೇ ಭಾಗ) ಲೋಕಾರ್ಪಣೆಗೊಂಡಿದೆ. ಪುಸ್ತಕಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ muraram@yahoo.com ಅಥವಾ mookanahalli@gmail.com ಇ-ಮೇಲ್ ವಿಳಾಸವನ್ನು ಸಂಪರ್ಕಿಸಬಹುದಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT